Pavithra Jayaram: ನಟ ಚಂದು ಸಾವಿಗೆ ಅಸಲಿ ಕಾರಣವೇನು? ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಸಿಕ್ಕ ಸುಳಿವೇನು?
ಕೆಲ ದಿನಗಳ ಹಿಂದಷ್ಟೇ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿಯಾದ ಪವಿತ್ರ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ದು:ಖ ಘಟನೆ ಮಾಸುವ ಮುನ್ನವೇ ತೆಲುಗು ಕಿರುತೆರೆಗೆ ಮತ್ತೊಂದು ಆಘಾತ ಎದುರಾಗಿದ್ದು, ಪವಿತ್ರ ಜಯರಾಂ ಆಪ್ತ, ಕಿರುತೆರೆ ನಟ ಚಂದು ಸಾವಿಗೆ ಶರಣಾಗಿದ್ದಾರೆ.
ಪವಿತ್ರ ಜಯರಾಂ ಅಪಘಾತದಲ್ಲಿ ಸಾಯುವ ಸಮಯದಲ್ಲಿ ನಟ ಚಂದು ಕೂಡ ಜೊತೆಯಲ್ಲಿದ್ದರು. ಈ ಅಪಘಾತದಲ್ಲಿ ಚಂದು ಅವರ ತಲೆ ಹಾಗೂ ಕೈ-ಕಾಲುಗಳಿಗೆ ಪೆಟ್ಟಾಗಿತ್ತು. ಈ ನೋವಿನಲ್ಲೇ ಅವರು ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ನಡೆದ ಪವಿತ್ರ ಜಯರಾಂ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಪವಿತ್ರ ಜಯರಾಂ ಅವರ ಅಂತಿಮ ಕಾರ್ಯ ಮುಗಿಸಿ ಹೈದರಾಬಾದ್ಗೆ ತೆರಳಿದ್ದ ಚಂದು ಅವರು ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ಪವಿತ್ರಾ ಅವರ ಸಾವಿನ ನಂತರ ನಟ ಚಂದು ತೀವ್ರ ದುಃಖಕ್ಕೆ ಒಳಗಾಗಿದ್ದರು. ಇಬ್ಬರು ಆತ್ಮೀಯರಾಗಿದ್ದು, 'ನನ್ನ ಕಣ್ಣೇದುರೆ ಪವಿ ಉಸಿರು ನಿಲ್ಲಿಸಿದಳು' ಎಂದು ಈ ಹಿಂದೆ ಚಂದು ಕಣ್ಣೀರು ಹಾಕಿದ್ದರು. ಇದೇ ನೋವಿನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕಳೆದ ಮೂರು ದಿನಗಳ ಹಿಂದೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿರುವ ಚಂದು, ಪವಿತ್ರ ಜಯರಾಂ ಅವರೊಂದಿಗಿನ ಫೋಟೋಗಳನ್ನು ಶೇರ್ ಮಾಡಿ, 'ನಾನ.. ಪ್ಲೀಸ್ ವೈಟ್ ಫಾರ್ ಜಸ್ಟ್ ಟು ಡೇಸ್' ಎಂದು ಬರೆದುಕೊಂಡಿದ್ದರು.
ನಿನ್ನೆ ಹೈದರಾಬಾದ್ನ ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಚಂದು ಸಾವಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಹೈದರಾಬಾದ್ ನಗರದ ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಚಂದ್ರಕಾಂತ್ ತೆಲುಗು ಕಿರುತೆರೆಯಲ್ಲಿ ಚಂದು ಎನ್ನುವ ಹೆಸರಿನಿಂದಲೇ ಜನಪ್ರಿಯರಾಗಿದ್ದರು. ಚಂದು ಸದ್ಯ ಕಾರ್ತಿಕ ದೀಪ, ರಾಧಮ್ಮ ಮದುವೆ ಹಾಗೂ ತ್ರಿನಯಿನಿ ಸೇರಿದಂತೆ ವಿವಿಧ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಕಿರುತೆರೆಯಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಚಂದು 2015ರಲ್ಲಿ ಶಿಲ್ಪ ಎನ್ನುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ಚಂದು ಪತ್ನಿಯಿಂದ ದೂರಾಗಿದ್ದು, ಆರೇಳು ವರ್ಷಗಳಿಂದ ನಟಿ ಪವಿತ್ರ ಜಯರಾಂ ಅವರೊಂದಿಗೆ ಆತ್ಮೀಯವಾಗಿದ್ದರು ಎಂದು ಮೂಲಗಳು ತಿಳಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications