Thalapathy Vijay divorce: ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: ತಂದೆಯನ್ನ ಅನ್ಫಾಲೋ ಮಾಡಿದ ಮಗ ಜೇಸನ್ ಸಂಜಯ್
ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ನಡುವಿನ ವಿಚ್ಛೇದನದ ವದಂತಿಗಳು ಕಳೆದ ಕೆಲವು ಸಮಯದಿಂದ ಸದ್ದು ಮಾಡುತ್ತಿವೆ. ಈಗ ಈ ಬೆಂಕಿಗೆ ತುಪ್ಪ ಸುರಿಯುವಂತೆ ವಿಜಯ್ ಅವರ ಪುತ್ರ ಜೇಸನ್ ಸಂಜಯ್ (Jason Sanjay) ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ತಂದೆಯನ್ನೇ ಅನ್ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಕಾಲಿವುಡ್ನಲ್ಲಿ ಸಂಚಲನ ಮೂಡಿಸಿದೆ.
ತಂದೆಯಿಂದ ಅಂತರ
ಇನ್ಸ್ಟಾಗ್ರಾಮ್ನಲ್ಲಿ ಸಕ್ರಿಯರಾಗಿರುವ ಜೇಸನ್ ಸಂಜಯ್ ದಿಢೀರ್ ತಮ್ಮ ತಂದೆ ವಿಜಯ್ ಅವರನ್ನು ಅನ್ಫಾಲೋ ಮಾಡಿದ್ದಾರೆ. ಇದು ಕುಟುಂಬದೊಳಗಿನ ಭಿನ್ನಾಭಿಪ್ರಾಯದ ಸೂಚನೆ ಇರಬಹುದೇ ಎಂದು ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಲೈಕಾ ಪ್ರೊಡಕ್ಷನ್ಸ್ ಅಡಿಯಲ್ಲಿ ಸಂಜಯ್ ತಮ್ಮ ಚೊಚ್ಚಲ ಚಿತ್ರವನ್ನು ನಿರ್ದೇಶಿಸಲು ಸಜ್ಜಾಗುತ್ತಿದ್ದಾರೆ. ಈ ಹಂತದಲ್ಲಿ ಅವರು ತಂದೆಯಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಕುತೂಹಲ ಮೂಡಿಸಿದೆ.

ಕಳೆದ ಒಂದು ವರ್ಷದಿಂದ ವಿಜಯ್ ಮತ್ತು ಸಂಗೀತಾ ಪರಸ್ಪರ ದೂರವಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ವಿಜಯ್ ಅವರ ಸಿನಿಮಾಗಳ ಆಡಿಯೋ ಲಾಂಚ್ ಅಥವಾ ಇತರೆ ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಸಂಗೀತಾ ಅವರು ದೀರ್ಘಕಾಲದಿಂದ ಕಾಣಿಸಿಕೊಳ್ಳದಿರುವುದು ಈ ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದೆ.
ತಮ್ಮ ನೆಚ್ಚಿನ ನಟ ರಾಜಕೀಯಕ್ಕೆ (ಟಿವಿಕೆ ಪಕ್ಷದ ಮೂಲಕ) ಪ್ರವೇಶಿಸುತ್ತಿರುವ ಈ ಸಂದರ್ಭದಲ್ಲಿ ಕುಟುಂಬದಲ್ಲಿ ಇಂತಹ ಸಮಸ್ಯೆಗಳು ಎದುರಾಗಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಆದರೆ ವಿಜಯ್ ಆಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಈ ವದಂತಿಗಳ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ನಟ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಅವರ 25 ವರ್ಷಗಳ ದಾಂಪತ್ಯ ಅಂತ್ಯವಾಗುತ್ತಿದೆ ಎಂಬ ವದಂತಿ ನಡುವೆ ಸಂಗೀತಾ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಸಂಗೀತಾ ಅವರು ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಾನೂನು ಹೋರಾಟ ಆರಂಭಿಸಿದ್ದಾರೆ ಎನ್ನಲಾಗಿದೆ.
ಈ ವಿಚ್ಛೇದನಕ್ಕೆ ವಿಜಯ್ ಅವರ ಅಕ್ರಮ ಸಂಬಂಧ ಕಾರಣ ಎಂಬ ಆರೋಪವೂ ಕೇಳಿಬಂದಿದೆ. ವಿಜಯ್ ಅವರು ಸೌತ್ ಇಂಡಸ್ಟ್ರಿಯ ಖ್ಯಾತ ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಗೀತಾ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಷ್ಟೆಲ್ಲಾ ಗಂಭೀರ ವದಂತಿಗಳು ಹರಡುತ್ತಿದ್ದರೂ, ನಟ ವಿಜಯ್ ಆಗಲಿ ಅಥವಾ ಸಂಗೀತಾ ಆಗಲಿ ಈ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಕುಟುಂಬದ ಗೌಪ್ಯತೆಯನ್ನು ಕಾಪಾಡುವ ಸಲುವಾಗಿ ಇಬ್ಬರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಜಯ್ಗೆ ಅಭಿಮಾನಿ, ನಂತರ ಅರ್ಧಾಂಗಿಯಾಗಿದ್ದ ಸಂಗೀತಾ
ಇಂದು ವಿಚ್ಛೇದನದ ವದಂತಿಗಳಿಂದ ಸುದ್ದಿಯಲ್ಲಿರುವ ಈ ಜೋಡಿಯ ಆರಂಭಿಕ ದಿನಗಳು ಸಿನಿಮೀಯ ಮಾದರಿಯಲ್ಲಿದ್ದವು. ಶ್ರೀಲಂಕಾ ಮೂಲದ ತಮಿಳು ಕುಟುಂಬಕ್ಕೆ ಸೇರಿದ ಸಂಗೀತಾ, ಯುನೈಟೆಡ್ ಕಿಂಗ್ಡಮ್ನಲ್ಲಿ ಬೆಳೆದವರು. ಅವರ ತಂದೆ ಲಂಡನ್ನಲ್ಲಿ ನೆಲೆಸಿದ್ದ ದೊಡ್ಡ ಉದ್ಯಮಿ. 1996ರಲ್ಲಿ ವಿಜಯ್ ನಟನೆಯ 'ಪೂವೆ ಉನಕ್ಕಾಗ' ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಆಗ ಚೆನ್ನೈಗೆ ಭೇಟಿ ನೀಡಿದ್ದ ಸಂಗೀತಾ, ವಿಜಯ್ ಅವರಿಗೆ ಶುಭ ಕೋರಲು ಫಿಲ್ಮ್ ಸಿಟಿಗೆ ಹೋಗಿದ್ದರು. ಅಲ್ಲಿಯೇ ಇಬ್ಬರ ಮೊದಲ ಭೇಟಿಯಾಯಿತು.

ಸಂಗೀತಾರ ಗುಣ ಇಷ್ಟಪಟ್ಟ ವಿಜಯ್, ಅವರನ್ನು ತಮ್ಮ ಮನೆಗೆ ಕರೆದೊಯ್ದು ಪೋಷಕರಾದ ಎಸ್.ಎ. ಚಂದ್ರಶೇಖರ್ ಮತ್ತು ಶೋಭಾ ಅವರಿಗೆ ಪರಿಚಯಿಸಿದ್ದರು. ಸಂಗೀತಾರನ್ನು ಕಂಡ ವಿಜಯ್ ಪೋಷಕರಿಗೂ ಅವರು ತುಂಬಾ ಇಷ್ಟವಾಗಿದ್ದರು. ಇವರ ಸಂಬಂಧ ಬೆಳೆಯುತ್ತಿದ್ದಂತೆ, ವಿಜಯ್ ಪೋಷಕರೇ ಮದುವೆಯ ಪ್ರಸ್ತಾಪ ಮುಂದಿಟ್ಟರು. ಮದುವೆ ಮಾತುಕತೆಗಾಗಿ ವಿಜಯ್ ಕುಟುಂಬ ಲಂಡನ್ಗೆ ಪ್ರಯಾಣ ಬೆಳೆಸಿ ಸಂಗೀತಾರ ಪೋಷಕರನ್ನು ಭೇಟಿ ಮಾಡಿದ್ದರು.
ವಿಜಯ್ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದರೂ, ಹಿಂದೂ ಧರ್ಮದ ಸಂಗೀತಾರ ಸಂಪ್ರದಾಯದಂತೆ ಹಿಂದೂ ಪದ್ಧತಿಯಲ್ಲಿ 1999ರಲ್ಲಿ ಮದುವೆಯಾದರು. ನಂತರ ಚೆನ್ನೈನಲ್ಲಿ ಅದ್ಧೂರಿ ರಿಸೆಪ್ಷನ್ ಏರ್ಪಡಿಸಲಾಗಿತ್ತು. ಬ್ರಿಟಿಷ್ ಪೌರತ್ವ ಹೊಂದಿದ್ದ ಸಂಗೀತಾ, ಮದುವೆಯ ನಂತರ ಭಾರತದಲ್ಲಿ ನೆಲೆಸಿ ವಿಜಯ್ ಅವರ ಯಶಸ್ವಿ ವೃತ್ತಿಜೀವನಕ್ಕೆ ದೊಡ್ಡ ಬೆಂಬಲವಾಗಿ ನಿಂತಿದ್ದರು. ಇಷ್ಟು ಸುಂದರವಾದ ಇತಿಹಾಸ ಹೊಂದಿರುವ ಈ ಜೋಡಿ ಈಗ ವಿಚ್ಛೇದನದ ಅಂಚಿಗೆ ಬಂದಿರುವುದು ಕಾಲಿವುಡ್ ಮಾತ್ರವಲ್ಲದೆ ಇಡೀ ದಕ್ಷಿಣ ಭಾರತದ ಸಿನಿಪ್ರಿಯರಿಗೆ ಅಚ್ಚರಿ ಮತ್ತು ಬೇಸರ ತಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications