Rashmika Mandanna: ಗರ್ಲ್ ಫ್ರೆಂಡ್ ಪರಿಚಯಿಸಿದ ನಟ ವಿಜಯ್ ದೇವರಕೊಂಡ
ಕನ್ನಡ ಚಿತ್ರರಂಗದಿಂದ ನಟನೆ ಆರಂಭಿಸಿ ಭಾರತೀಯ ಚಿತ್ರರಂಗದಲ್ಲಿ ಮಿಂಚಿದ ನಟ-ನಟಿಯರು ಅನೇಕರಿದ್ದಾರೆ. ಈ ಪೈಕಿ ಸದ್ಯ ಟ್ರೆಂಡಿಂಗ್ನಲ್ಲಿರುವ ಸ್ಟಾರ್ ಎಂದರೆ ಕರ್ನಾಟಕದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ. ಕನ್ನಡದ 'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಸದ್ಯ ನ್ಯಾಶನಲ್ ಕ್ರಶ್ ಆಗಿ ಹೊರಹೊಮ್ಮಿದ್ದಾರೆ.
ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್ನಲ್ಲೂ ಕಮಾಲ್ ಮಾಡುತ್ತಿರುವ ರಶ್ಮಿಕಾ ಮಂದಣ್ಣ ನಟನೆಯಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿದ್ದು, ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿದ್ದಾರೆ. ಸಾಲು ಸಾಲು ಬಿಗ್ ಬಜೆಟ್ ಚಿತ್ರಗಳಲ್ಲೇ ನಟಿಸುತ್ತಿರುವ ರಶ್ಮಿಕಾ ಮಂದಣ್ಣ, ಸದ್ಯ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ 2' ಚಿತ್ರದ ಯಶಸ್ಸಿನ ಸಂಭ್ರಮದಲ್ಲಿದ್ದಾರೆ.

'ಪುಷ್ಪ 2' ಚಿತ್ರದ ಮಾಸ್ ಲುಕ್ನಲ್ಲಿ ಮಿಂಚಿದ ರಶ್ಮಿಕಾ, ಇದೀಗ ಮತ್ತೆ ಎಮೋಷನಲ್ ಲವ್ ಸ್ಟೋರಿ ಮೂಲಕ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಹೌದು ರಶ್ಮಿಕಾ ಮಂದಣ್ಣ ಅಭಿನಯದ ದಿ ಗರ್ಲ್ ಫ್ರೆಂಡ್ ತೆಲುಗು ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಇದೊಂದು ಪಕ್ಕಾ ಕಾಲೇಜು ಲವ್ ಸ್ಟೋರಿ ಚಿತ್ರ ಎನ್ನುವುದು ಟೀಸರ್ನಿಂದಲೇ ತಿಳಿದು ಬಂದಿದ್ದು, ರಶ್ಮಿಕಾ ಎಮೋಷನಲ್ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಇನ್ನೂ ವಿಶೇಷ ಎನ್ನುವಂತೆ ದಿ ಗರ್ಲ್ ಫ್ರೆಂಡ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಅವರ ಆಪ್ತ ಸ್ನೇಹಿತ ನಟ ವಿಜಯ್ ದೇವರಕೊಂಡ ಪರಿಚಯಿಸಿಕೊಟ್ಟಿದ್ದಾರೆ. ಟೀಸರ್ನಲ್ಲಿ ಬರುವ ರಶ್ಮಿಕಾ ಮಂದಣ್ಣ ಪಾತ್ರವನ್ನು ವಿಜಯ್ ದೇವರಕೊಂಡ ಪರಿಚಯಿಸಿದ್ದು, ಸದ್ಯ ಟೀಸರ್ ಸಖತ್ ವೈರಲ್ ಆಗುತ್ತಿದೆ.

ಇಷ್ಟಲ್ಲದೇ ದಿ ಗರ್ಲ್ ಫ್ರೆಂಡ್ ಸಿನಿಮಾದಲ್ಲಿ ಇನ್ನೂ ವಿಶೇಷವಿದ್ದು, ಕನ್ನಡ ಚಿತ್ರರಂಗದ ನಟ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ಜೋಡಿಯಾಗಿದ್ದಾರೆ. ಇನ್ನು ದಿ ಗರ್ಲ್ ಫ್ರೆಂಡ್ ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶನ ಮಾಡುತ್ತಿದ್ದು, ನಟ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ದಿ ಗರ್ಲ್ ಫ್ರೆಂಡ್ ಬಿಡುಗಡೆ ದಿನಾಂಕ ಹಾಗೂ ಇತರ ಮಾಹಿತಿಯನ್ನು ಚಿತ್ರತಂಡ ಸದ್ಯದಲ್ಲೇ ಬಹಿರಂಗ ಪಡಿಸಲಿದೆ. ಅದೇನೇ ಇರಲಿ ರಶ್ಮಿಕಾ ಮಂದಣ್ಣರನ್ನು ಮತ್ತೆ ಎಮೋಷನಲ್ ಲುಕ್ನಲ್ಲಿ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications