ಬಿಗ್ಬಾಸ್ ವಿನ್ನರ್ ವಿರುದ್ಧ ಕೇಸ್ ದಾಖಲು, ಜಿಮ್ಗೆ ನುಗ್ಗಿ ₹10,000 ಕಳ್ಳತನ ಆರೋಪ!
ಹಲವರು ಫೇಮಸ್ ಆದ ಮೇಲೆ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿ ಅವಕಾಶ ಪಡೆಯುತ್ತಾರೆ. ಕೆಲವರು ಬಿಗ್ಬಾಸ್ಗೆ ಹೋದ ಬಂದ ಮೇಲೆ ಫೇಮಸ್ ಆಗ್ತಾರೆ. ಬಿಗ್ಬಾಸ್ಗೆ ಹೋಗಿ ಬಂದ ಮೇಲೆ ಅವರ ಸ್ಟಾರ್ ಚೇಂಜ್ ಆಗುತ್ತೆ ಎನ್ನುವ ಮಾತೂ ಇದೆ. ಆದರೆ ಸದ್ಯ ಬಿಗ್ಬಾಸ್ ಟೈಟಲ್ ಗೆದ್ದಿದ್ದ ವಿನ್ನರ್ ಮೇಲೆ ಕಳ್ಳತನದ ಆರೋಪ ಕೇಳಿಬಂದಿದೆ. ಜಿಮ್ಗೆ ನುಗ್ಗಿ 10,000 ರೂಪಾಯಿ ನಗದು ಹಾಗೂ ಪ್ರಮುಖ ದಾಖಲೆಗಳನ್ನು ಕದ್ದಿದ್ದಾರೆ ಎಂದು ಆರೋಪ ಹೊರಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.
ಬಿಗ್ಬಾಸ್ ಮಲಯಾಳಂ ಸೀಸನ್-6ರ ವಿಜೇತ ಮತ್ತು ಬಾಡಿಬಿಲ್ಡರ್ ಜಿಂಟೋ ವಿರುದ್ಧ ಜಿಮ್ ಮಾಲೀಕರು ಕಳ್ಳತನ ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೇರಳದ ಪಲರಿವತ್ತಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಿಳಾ ಜಿಮ್ ಮಾಲೀಕರೊಬ್ಬರು ಗುತ್ತಿಗೆ ಪಡೆದಿದ್ದ ಜಿಮ್ಗೆ ಜಿಂಟೋ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸೋಮವಾರ ಬೆಳಗಿನ ಜಾವ ಜಿಂಟೋ ಜಿಮ್ಗೆ ನುಗ್ಗಿ, ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಇತರ ವಸ್ತುಗಳನ್ನು ಹಾನಿಗೊಳಿಸಿದ್ದಾನೆ. ಜೊತೆಗೆ ₹10,000 ನಗದು ಹಾಗೂ ಮಹತ್ವದ ದಾಖಲೆಗಳನ್ನು ಕದ್ದೊಯ್ದಿದ್ದಾನೆ ಎಂದು ಆ ಮಹಿಳೆ ಆರೋಪಿಸಿದ್ದಾರೆ.

ಆ ದೂರುದಾರ ಮಹಿಳೆ ನೀಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಜಿಂಟೋ ಅಕ್ರಮವಾಗಿ ಜಿಮ್ ಆವರಣಕ್ಕೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಐಪಿಸಿ ಸೆಕ್ಷನ್ 305ರ ಅಡಿಯಲ್ಲಿ ಪ್ರಕರಣ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಆ ಮಹಿಳೆ ಹಾಗೂ ಜಿಂಟೋ ನಡುವೆ ಈ ಹಿಂದಿನಿಂದಲೂ ವಿವಾದ ಇದೆ. ಇದೇ ಮಹಿಳೆ ಜಿಂಟೋ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅವರು ಬಂಧನಕ್ಕೂ ಒಳಗಾಗಿದ್ದರು. ಇದು ಮಾತ್ರವಲ್ಲ, ಜಿಂಟೊ ಅವರನ್ನು ಈ ಹಿಂದೆ ಹೈಬ್ರಿಡ್ ಗಾಂಜಾ ಕೇಸ್ನಲ್ಲೂ ವಿಚಾರಣೆ ನಡೆಸಲಾಗಿತ್ತು. ಈ ಕೇಸ್ನಲ್ಲಿ ಜಿಂಟೋ ಮೇಲೆ ಯಾವುದೇ ನೇರ ಆರೋಪ ಇಲ್ಲದಿದ್ದರೂ ಅವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿತ್ತು.
ಈ ಪೊಲೀಸ್ ಕೇಸ್ಗಳ ಜೊತೆಗೆ ಜಿಂಟೋ ಅವರು ಕೆಲ ನಟಿಯರು ಹಾಗೂ ಮಾಡಲ್ಗಳಿಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಕೊಡಿಸುವುದಾಗಿ ಹಾಗು ಬಿಗ್ಬಾಸ್ ಮನೆಗೆ ಪ್ರವೇಶ ಕಲ್ಪಿಸುವುದಾಗಿ ಭರವಸೆ ನೀಡಿ ವಂಚನೆ ಮಾಡುತ್ತಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಬಿಗ್ಬಾಸ್ಗೆ ಸ್ಪರ್ಧಿಯಾಗಿ ಹೋದಾಗಲೂ ಈ ವಿರೋಧ ಮತ್ತು ವಿವಾದಗಳ ನಡುವೆಯೂ ಅವರು ವಿನ್ನರ್ ಆಗಿ ಹೊರಹೊಮ್ಮಿದ್ದರು. ಬಿಗ್ ಬಾಸ್ ಮಲಯಾಳಂ ಸೀಸನ್ 6ರಲ್ಲಿ ಅತ್ಯಂತ ವಿವಾದಾತ್ಮಕ ಸ್ಪರ್ಧಿಗಳಲ್ಲಿ ಒಬ್ಬರಾಗಿ ಜಿಂಟೋ ಹೆಸರು ಪಡೆದಿದ್ದರು. ಅವರ ಗೆಲುವಿಗೆ ವೀಕ್ಷಕರು ಮತ್ತು ಸಹ ಸ್ಪರ್ಧಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications