ಕನ್ನಡ ಸಿನಿಮಾಗಳನ್ನು ಬ್ಯಾನ್ ಮಾಡ್ತಾರಂತೆ ದರ್ಶನ್ ಅಭಿಮಾನಿಗಳು!

ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಕೊಲೆ ಆರೋಪದಲ್ಲಿ ಜೈಲು ಸೇರಿದ ಕಾರಣ ಈ ಸಮಯದಲ್ಲಿ ಫುಲ್ ಗರಂ ಆಗಿದ್ದು, ಕನ್ನಡ ಸಿನಿಮಾ ಇಂಡಸ್ಟ್ರಿಯನ್ನೇ ಬ್ಯಾನ್ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ದರ್ಶನ್ ತೂಗುದೀಪ್ & ಗ್ಯಾಂಗ್ ವಿಕೃತವಾಗಿ ರೇಣುಕಾಸ್ವಾಮಿ ಕೊಲೆಯ ಮಾಡಿದೆ ಎಂಬ ಆರೋಪದ ಬೆನ್ನಲ್ಲೇ ನಟ ದರ್ಶನ್ ತೂಗುದೀಪ್ ಫ್ಯಾನ್ಸ್ ಈಗ ಕನ್ನಡ ಸಿನಿಮಾ ರಂಗವನ್ನೇ ಬ್ಯಾನ್ ಮಾಡುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ದರ್ಶನ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಬಾಕ್ಸ್ ಆಫೀಸ್ ಸುಲ್ತಾನ್ ಆಗಬೇಕು ಅಂತಾ ಸಿಕ್ಕಾಪಟ್ಟೆ ಪ್ರಯತ್ನ ಮಾಡಿದ್ದರು. ಆದರೆ ಯಶ್ ಅವರು ಕೆಜಿಎಫ್ ಸಿನಿಮಾ ನಂತರ ಆ ಸ್ಥಾನ ಅಲಂಕರಿಸಿ ಅಬ್ಬರಿಸಿದ್ದರು. ಆ ನಂತರ ರಿಷಬ್ ಶೆಟ್ಟಿ ಕೂಡ ದಾಖಲೆ ಮೇಲೆ ದಾಖಲೆ ಮಾಡಿದ್ದರು. ಹೀಗೆ ಕನ್ನಡ ಸಿನಿಮಾ ಇಂಡಸ್ಟ್ರಿ ಜಗತ್ತಿನ ಮೂಲೆ ಮೂಲೆಯಲ್ಲು ಸೌಂಡ್ ಮಾಡುವ ಸಮಯದಲ್ಲೇ ದರ್ಶನ್ ಕೊಲೆ ಆರೋಪದಲ್ಲಿ ಪೊಲೀಸರ ಅತಿಥಿ ಆಗಿದ್ದಾರೆ, ಅಲ್ಲದೆ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನಟ ದರ್ಶನ್ ತೂಗುದೀಪ್ ಸೆಂಟ್ರಲ್ ಜೈಲಿಗೂ ಹೋಗಲಿದ್ದಾರೆ. ಹೀಗಿದ್ದಾಗ ದರ್ಶನ್ ಅಭಿಮಾನಿಗಳು ಕನ್ನಡ ಸಿನಿಮಾ ಇಂಡಸ್ಟ್ರಿಯನ್ನೇ ಬ್ಯಾನ್ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

This Is What Darshan Thoogudeepa Fans Are Saying About Kannada Cinema Industry

ಕನ್ನಡ ಸಿನಿಮಾ ನೋಡಬಾರದಂತೆ!
ದರ್ಶನ್ ಅವರ ಅಭಿಮಾನಿಗಳು ಹಾಕಿದ್ದಾರೆ ಎಂದು ಆರೋಪ ಮಾಡಲಾಗಿರುವ ಪೋಸ್ಟ್ ಈಗ ಫುಲ್ ವೈರಲ್ ಆಗುತ್ತಿದೆ. ಈ ಪೋಸ್ಟ್‌ನಲ್ಲಿ, ದರ್ಶನ್ ಡೆವಿಲ್ ಸಿನಿಮಾ ರಿಲೀಸ್ ಆಗುವ ತನಕ ಯಾವುದೇ ಕನ್ನಡ ಸಿನಿಮಾ ನೋಡಲು ಥಿಯೇಟರ್‌ಗೆ ಹೋಗಬೇಡಿ ಎಂಬ ಸಂದೇಶ ನೀಡಿದ್ದಾರೆ ದರ್ಶನ್ ಅವರ ಫ್ಯಾನ್ಸ್ ಎಂದು ಆರೋಪ ಮಾಡಲಾಗಿದೆ. ಇದೀಗ ಸೋಷಿಯಲ್ ಮೀಡಿಯಾ, ಈ ಪೋಸ್ಟ್‌ನ ಶೇರ್ ಮಾಡುತ್ತಿದ್ದು ಫುಲ್ ವೈರಲ್ ಆಗುತ್ತಿದೆ. ಅಲ್ಲದೆ ಈ ಬಗ್ಗೆ ಹಲವು ರೀತಿಯ ಅಭಿಪ್ರಾಯ ವ್ಯಕ್ತವಾಗುತ್ತಿವೆ.

ಪವಿತ್ರಾ ಗೌಡ ಟಾರ್ಚರ್‌ಗೆ ದರ್ಶನ್ ಸುಸ್ತು!
ದರ್ಶನ್‌ಗೆ ಪವಿತ್ರಾ ಗೌಡ ಸಾಕಷ್ಟು ಟಾರ್ಚರ್ ಕೊಟ್ಟಿದ್ದರಂತೆ. ಅದರಲ್ಲೂ, ದರ್ಶನ್ ಹೆಂಡತಿ ವಿಜಯಲಕ್ಷ್ಮೀ ಏನೇ ಮಾಡಿದರೂ ಅದನ್ನು ತಾನೂ ಮಾಡಬೇಕು ಎಂಬ ಹಠ ಪವಿತ್ರಾ ಗೌಡಗೆ ಇತ್ತು. ಈ ಹಠ ಕೊನೆಗೆ ದೊಡ್ಡ ಸಂಚಲನ ಸೃಷ್ಟಿ ಮಾಡಿತ್ತು. ಈ ರೀತಿ, ಹಲವು ವಿಚಾರದಲ್ಲಿ ದರ್ಶನ್ ಬಾಳಲ್ಲಿ ಪವಿತ್ರಾ ಗೌಡ ಒತ್ತಡ ಹಾಕುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ವಿಜಯಲಕ್ಷ್ಮೀ ದರ್ಶನ್ 'ರೇಂಜ್ ರೋವರ್' ಕಾರು ಖರೀದಿ ಮಾಡಿದಾಗ ಪವಿತ್ರಾ ಗೌಡ ತನಗೂ ಆ ರೀತಿ 'ರೇಂಜ್ ರೋವರ್' ಬೇಕು ಅಂತಾ ಹಠ ಹಿಡಿದಿದ್ದರಂತೆ. ಹಾಗೇ, ವಿಜಯಲಕ್ಷ್ಮೀ ದರ್ಶನ್ ಯಾವುದೇ ಆಭರಣ & ಚಿನ್ನ ಖರೀದಿ ಮಾಡಲಿ, ಸೀರೆ ಖರೀದಿ ಮಾಡಲಿ ಅಂತಹ ವಸ್ತುಗಳೇ ನಂಗೂ ಬೇಕು ಅಂತಾ ದರ್ಶನ್‌ಗೆ ಪವಿತ್ರಾ ಗೌಡ ಟಾರ್ಚರ್ ಕೊಡ್ತಿದ್ದರು ಅಂತಾ ಆರೋಪ ಮಾಡಲಾಗಿದೆ.

118 ಸಾಕ್ಷ್ಯ ಸಂಗ್ರಹಿಸಿದ ಪೊಲೀಸರು?

ದರ್ಶನ್ ತೂಗುದೀಪ್ & ಗ್ಯಾಂಗ್ ವಿರುದ್ಧ ಕೇಳಿಬಂದಿರುವ ಕೊಲೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ಖಡಕ್ ತನಿಖೆ ನಡೆಸುತ್ತಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಈ ವಿಚಾರದಲ್ಲಿ ಕರ್ನಾಟಕದ ಪೊಲೀಸರಿಗೆ ಫುಲ್ ಪವರ್ ಕೊಟ್ಟಿದ್ದು, ಯಾವುದೇ ರೀತಿಯ ಒತ್ತಡಗಳಿಗೆ ಮಣಿಯಬೇಡಿ ಎಂದಿದ್ದಾರೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದೆ. ಅದರಲ್ಲೂ ದರ್ಶನ್ & ಗ್ಯಾಂಗ್ ವಿರುದ್ಧ ಈವರೆಗೂ ಸುಮಾರು 118 ಸಾಕ್ಷ್ಯ ಸಂಗ್ರಹವಾಗಿದೆ ಎಂಬ ಸುದ್ದಿ ತಿಳಿದುಬಂದಿದೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದೆ.

ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ'?

ಕಲಾಸಿಪಾಳ್ಯ, ಮೆಜೆಸ್ಟಿಕ್ ಅಂತಾ ಬೆಂಗಳೂರಿನ ಏರಿಯಾಗಳ ಹೆಸರನ್ನು ಇಟ್ಟುಕೊಂಡೇ ಭಾರಿ ಭರ್ಜರಿ ಸಿನಿಮಾ ನೀಡಿದ್ದ ದರ್ಶನ್, ಈಗ 'ಪರಪ್ಪನ ಅಗ್ರಹಾರ' ಸೇರಿದ್ದಾರೆ. ದರ್ಶನ್ ತಾನೇ ಮಾಡಿಕೊಂಡ ಎಡವಟ್ಟಿಗೆ & ದುರಹಂಕಾರಕ್ಕೆ ಇಂದು ವಿಲವಿಲ ಒದ್ದಾಡುವ ಪರಿಸ್ಥಿತಿ ಬಂದಿದೆ ಅಂತಾರೆ ಅವರ ಸ್ನೇಹಿತರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದೆ. ಹೀಗೆ ದರ್ಶನ್ ಕೊಲೆ ಆರೋಪದಲ್ಲಿ ಸೆಂಟ್ರಲ್ ಜೈಲ್ 'ಪರಪ್ಪನ ಅಗ್ರಹಾರ'ಕ್ಕೆ ಹೋಗಿದ್ದು, ಕೊಲೆ ಆರೋಪಿ ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ' ಆಗಿರಲಿದೆ ಅಂತಿದ್ದಾರೆ ದರ್ಶನ್ ವಿರೋಧಿಗಳು. ಹೀಗಾಗಿ ದರ್ಶನ್ & ಅವರ ವಿರೋಧಿಗಳ ಫೈಟಿಂಗ್‌ಗೆ ಭರ್ಜರಿ ತಿರುವು ಸಿಕ್ಕಿದೆ.

ದರ್ಶನ್ ಬೆನ್ನಿಗೆ ನಾಗ & ಸೈಕಲ್ ರವಿ?

ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ A2 ಆರೋಪಿ ಆಗಿದ್ದಾರೆ ಅಲ್ಲದೆ ಕಂಬಿ ಎಣಿಸುತ್ತಿದ್ದಾರೆ. ಹೀಗಿದ್ದಾಗಲೇ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ಗೆ ಸೇವೆ ಮಾಡಲು ಅಂದ್ರೆ ಆತಿಥ್ಯ ನೀಡಲು ಬೆಂಗಳೂರಿನ ರೌಡಿ ಶೀಟರ್ ನಾಗ & ಸೈಕಲ್ ರವಿ ನಡುವೆ ಇದೀಗ ಭರ್ಜರಿಯಾಗಿ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಸ್ಫೋಟಕ ಹಾಗೂ ಭಯಾನಕ ಮಾಹಿತಿಯನ್ನ ಕನ್ನಡದ ಟಿವಿ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ಇದೇ ಸಮಯದಲ್ಲಿ ರೌಡಿ ಶೀಟರ್ ನಾಗ ಜೈಲಿನಲ್ಲೇ ಇದ್ದು, ಜೈಲಿನಿಂದ ಹೊರಗೆ ಇರುವ ಸೈಕಲ್ ರವಿ ತನ್ನ ಹುಡುಗರ ಮೂಲಕ ದರ್ಶನ್‌ಗೆ ಆತಿಥ್ಯ ನೀಡಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಈ ಸುದ್ದಿ ಇದೀಗ ಸಂಚಲನವನ್ನೇ ಸೃಷ್ಟಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+