Actor Darshan: ಈ ವಿಚಾರ ಗೊತ್ತಾಗ್ತಿದ್ದಂಗೆ...! ದರ್ಶನ್ ಬಗ್ಗೆ ರಾಧಿಕಾ ಕುಮಾರಸ್ವಾಮಿ ಹೇಳಿದ್ದೇನು?
ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಾಧಿಕಾ ಕುಮಾರಸ್ವಾಮಿ, ನಟ ದರ್ಶನ್ ಬಂಧನ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ರಾಧಿಕಾ ಕುಮಾರಸ್ವಾಮಿ ಮತ್ತು ದರ್ಶನ್ ತೂಗುದೀಪ ಇಬ್ಬರು ಎರಡು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಮಂಡ್ಯ ಮತ್ತು ಅನಾಥರು ಸಿನಿಮಾದಲ್ಲಿ ರಾಧಿಕಾ ದರ್ಶನ್ಗೆ ತೆರೆ ಮೇಲೆ ಜೋಡಿಯಾಗಿ ನಟಿಸಿದ್ದು, ದರ್ಶನ್ರ ವರ್ತನೆ ಹೇಗಿತ್ತು ಎನ್ನುವ ಬಗ್ಗೆ ಕೂಡ ಮಾತನಾಡಿದ್ದಾರೆ.
ದರ್ಶನ್ ಬಂಧನದ ಬಗ್ಗೆ ಖಾಸಗಿ ವಾಹಿನಿ ಜೊತೆ ಮಾತನಾಡಿರುವ ರಾಧಿಕಾ ಕುಮಾರಸ್ವಾಮಿ, "ದರ್ಶನ್ ಅವರ ಪ್ರಕರಣ ಮನಸ್ಸಿಗೆ ತುಂಬಾ ನೋವು ಕೊಡುವ ವಿಚಾರ. ಅನಾಥರು ಮತ್ತು ಮಂಡ್ಯ ಸಿನಿಮಾದಲ್ಲಿ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಶೂಟಿಂಗ್ ವೇಳೆ ಟೆಕ್ನಿಶಿಯನ್, ಸೆಟ್ ಹುಡುಗರ ಜೊತೆ ಅಣ್ಣಾ ಬನ್ನಿ ಹೋಗಿ ಎಂದು ಗೌರವ ಕೊಟ್ಟೇ ಮಾತನಾಡುತ್ತಿದ್ದರು. ಎಲ್ಲರ ಜೊತೆ ಸುಲಭವಾಗಿ ಬೆರೆಯೋರು" ಎಂದು ಹೇಳಿದ್ದಾರೆ.

ಇದೆಲ್ಲಾ ನಿಜಾನ ಅನಿಸ್ತು!
"ತಾವೊಬ್ಬ ದೊಡ್ಡ ನಟ ಎನ್ನುವ ಅಹಂ ಕೂಡ ಅವರಲ್ಲಿ ಇರಲಿಲ್ಲ, ದೊಡ್ಡ ಹೀರೋ ಎನ್ನುವಂತೆ ಕೂಡ ನಡೆದುಕೊಳ್ಳುತ್ತರಲಿಲ್ಲ. ಆದರೆ ಈ ವಿಚಾರ ಕೇಳಿದಾಗ, ನಿಜಾನ ಇದು ಎನ್ನಿಸಿಬಿಡ್ತು. ಒಂದು ಕ್ಷಣ ನನಗೆ ನಂಬಲು ಆಗಲಿಲ್ಲ, ಇದೆಲ್ಲಾ ನಿಜವಾ ಎನ್ನುವ ಅನುಮಾನ ಶುರುವಾಯಿತು. ಆದರೆ ಅವರವರ ಜೀವನದಲ್ಲಿ ಏನಾಗಿದೆ ಎನ್ನುವುದು ಅವರಿಗೆ ಮಾತ್ರ ಗೊತ್ತಿರೋಕೆ ಸಾಧ್ಯ, ನಾನು ಇಷ್ಟು ಮಾತ್ರ ಹೇಳಬಲ್ಲೆ" ಎಂದಿದ್ದಾರೆ.
ಮಾಧ್ಯಮಗಳಲ್ಲಿ ಬರೋದು, ಯಾರೋ ಇದರ ಬಗ್ಗೆ ಹೇಳಿದಷ್ಟೇ ನಮಗೆ ಗೊತ್ತಾಗೋದು. ಆದರೆ ಅವರ ಬದುಕಿನಲ್ಲಿ ನಿಜಕ್ಕೂ ಏನಾಗಿದೆ ಎನ್ನುವುದು ನಮಗೆ ಗೊತ್ತಾಗಲ್ಲ. ಗೊತ್ತಿಲ್ಲದೆ ಅವರ ಬಗ್ಗೆ ಕಾಮೆಂಟ್ ಮಾಡೋದು ತಪ್ಪು, ಪ್ರಾಮಾಣಿಕವಾಗಿ ಹೇಳಬೇಕು ಎಂದರೆ ದರ್ಶನ್ ನಮ್ಮ ಚಿತ್ರರಂಗಕ್ಕೆ ಬೇಕು, ಅವರಿಗೆ ಒಳ್ಳಾದಗಲಿ ಎಂದು ಕೇಳ್ತೀನಿ ಅಷ್ಟೆ ಎಂದರು.
ಎಲ್ಲರ ಬದುಕಿನಲ್ಲೂ ಕೆಲವೊಂದು ಘಟನೆಗಳು ನಡೆಯುತ್ತವೇ, ಮುಂದೆ ಕೆಟ್ಟದ್ದಾಗುತ್ತದೆ ಎಂದು ಮುಂಚಿತವಾಗಿ ಯಾರಿಗೂ ಗೊತ್ತಾಗಲ್ಲ. ಗೊತ್ತಿದ್ದರೆ ಅಂತಹ ಘಟನೆ ನಡೆಯಲು ಕೂಡ ಬಿಡುವುದಿಲ್ಲ. ಎಲ್ಲರ ಬದುಕಿನಲ್ಲಿ ಕೂಡ ಕಹಿ ಘಟನೆಗಳು ನಡೆದಿರುತ್ತವೆ. ನಮ್ಮ ಬದುಕಿನಲ್ಲೂ ಅಂತಹ ಕೆಟ್ಟ ಘಟನೆಗಳನ್ನು ಅನುಭವಿಸಿರುತ್ತೇವೆ ಎಂದರು.
ಏನೇ ಕಷ್ಟ ಬಂದರೂ ಅದನ್ನೆಲ್ಲಾ ಎದುರಿಸಿಕೊಂಡು ಮುಂದೆ ಸಾಗಬೇಕು. ದರ್ಶನ್ ಅವರಿಗೂ ನಾನು ಅದನ್ನೇ ಹೇಳುತ್ತೇನೆ. ಅವರಿಗೆ ಈಗ ಬಂದಿರುವ ಎಲ್ಲಾ ಕಷ್ಟಗಳನ್ನು ಬಗೆಹರಿಸಿಕೊಂಡು ಬೇಗ ಚಿತ್ರರಂಗಕ್ಕೆ ವಾಪಸ್ ಬರಬೇಕು ಎಂದು ಪ್ರಾರ್ಥಿಸುತ್ತೇನೆ ಎಂದರು.
ರಾಧಿಕಾ ಕುಮಾರಸ್ವಾಮಿ ಅವರ ಮಾತುಗಳನ್ನು ಕೇಳಿದ ದರ್ಶನ್ ಅಭಿಮಾನಿಗಳು ಖುಷಿಯಾಗಿದ್ದಾರೆ. ನೀವು ಪ್ರಬುದ್ಧರಾಗಿ ಮಾತನಾಡಿದ್ದೀರಾ, ಎಲ್ಲರೂ ತಪ್ಪು ಮಾಡುತ್ತಾರೆ, ಕಹಿ ಘಟನೆಗಳು ನಡೆಯುತ್ತವೆ. ದರ್ಶನ್ ಅವರ ಬದುಕಿನಲ್ಲೂ ಅದೇ ಆಗಿದೆ, ಅವರು ಈ ಕಷ್ಟದಿಂದ ಹೊರ ಬರುತ್ತಾರೆ, ಜೈಲಿನಿಂದ ಕೂಡ ಬಿಡುಗಡೆಯಾಗುತ್ತಾರೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications