Get Updates
Get notified of breaking news, exclusive insights, and must-see stories!

Channe Gowda Death: ಸ್ಯಾಂಡಲ್ ವುಡ್ ಹಿರಿಯ ನಟ ಗಡ್ದಪ್ಪ ನಿಧನ!

ಮಂಡ್ಯ, ನವೆಂಬರ್12:‌ ಕನ್ನಡದ ತಿಥಿ ಸಿನಿಮಾ ಮೂಲಕ ಖ್ಯಾತಿಯಾಗಿದ್ದ ಗಡ್ಡಪ್ಪ ನಿಧನರಾಗಿದ್ದಾರೆ. ತಿಥಿ ಸಿನಿಮಾ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದ ಗ್ರಾಮೀಣ ಪ್ರತಿಭೆ ಗಡ್ಡಪ್ಪ ಅವರು ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ವಿಧಿವಶರಾಗಿದ್ದಾರೆ. ಗಡ್ಡಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಕೆಲ ದಿನಗಳಿಂದ ಚನ್ನೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚನ್ನೇಗೌಡ ಇಂದು (ನವೆಂಬರ್ 12) ಕೊನೆಯುಸಿರೆಳೆದಿದ್ದಾರೆ.

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ.

Thithi Movie Fame Gaddappa Channe Gowda Passes Away

ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಗಡ್ಡಪ್ಪ ಅಲಿಯಾಸ್ ಚನ್ನೇಗೌಡ 'ತಿಥಿ' ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು. ಗಡ್ಡಪ್ಪ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಕವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ. ಇದೀಗ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಗಡ್ಡಪ್ಪ ನಿಧನಕ್ಕೆ ವಿಜಯೇಂದ್ರ ಸಂತಾಪ

ಮಂಡ್ಯ ಜಿಲ್ಲೆಯ ಗಡ್ಡಪ್ಪ ಖ್ಯಾತಿಯ ನಟ ಚನ್ನೇಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ತೆರೆಗೆ ಬಂದ 'ತಿಥಿ' ಚಿತ್ರ ಜನಮೆಚ್ಚುಗೆ ಪಡೆದಿತ್ತು; ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತ್ತು. ಈ ಸಿನಿಮಾದಲ್ಲಿ ಚನ್ನೇಗೌಡ ಅವರು ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದರು. ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬದವರಿಗೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿ, ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಜತೆಗೆ 'ತರ್ಲೆ ವಿಲೇಜ್', 'ಜಾನಿ ಮೇರಾ ನಾಮ್', 'ಹಳ್ಳಿ ಪಂಚಾಯಿತಿ' ಸೇರಿ ಸುಮಾರು ಎಂಟು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+