Annamalai: ಅಣ್ಣಾಮಲೈ ವಾರ್ನಿಂಗ್, ದಳಪತಿ ವಿಜಯ್ ಜೊತೆ ಏನಿದು ಕಿರಿಕ್?
ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಹವಾ ಬಲು ಜೋರಾಗಿದ್ದು, ಲೋಕಸಭೆಗೂ ಮೊದಲು ದಕ್ಷಿಣ ಭಾರತದ ಪ್ರಮುಖ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಗೆಲುವಿಗಾಗಿ ಎನ್ಡಿಎ & ಇಂಡಿಯಾ ಮೈತ್ರಿಕೂಟಗಳ ನಡುವೆ ತಿಕ್ಕಾಟ ಬಲು ಜೋರಾಗಿರುವ ಸಮಯದಲ್ಲೇ ನಟ ದಳಪತಿ ವಿಜಯ್ ಕೊಟ್ಟಿರುವ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ. ಹಾಗೇ ವಿಜಯ್ ಅವರು ಕೊಟ್ಟಿದ್ದ ಹೇಳಿಕೆಗೆ ಈಗ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ ಅಣ್ಣಾಮಲೈ.
2024ರ ಲೋಕಸಭೆ ಚುನಾವಣೆ ಅಖಾಡ ರಂಗೇರಿದ್ದು, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ & ಇಂಡಿಯಾ ಮೈತ್ರಿಕೂಟಗಳ ನಡುವೆ ಭಾರಿ ಪೈಪೋಟಿ ನಿರೀಕ್ಷೆ ಮಾಡಲಾಗುತ್ತಿದೆ. ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಮಹಾಯುದ್ಧ ಕೂಡ ನಡೆಯುತ್ತಿದೆ. ಅದ್ರಲ್ಲೂ ತಮಿಳುನಾಡು ರಾಜಕೀಯದಲ್ಲಿ ಬಿಜೆಪಿ ಈ ಬಾರಿ ತನ್ನ ಬಾವುಟ ನೆಟ್ಟೇ ನೆಡುತ್ತದೆ ಎಂಬ ನಂಬಿಕೆ ಬಿಜೆಪಿ ಹೈಕಮಾಂಡ್ಗೆ ಇದೆ. ಹೀಗಿದ್ದಾಗಲೇ ನಟ ವಿಜಯ್ ಮತ್ತು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ನಡುವೆ ತಿಕ್ಕಾಟ ಬಲು ಜೋರಾಗಿದೆ. ಹಾಗಾದರೆ ಇದೀಗ, ಅಣ್ಣಾಮಲೈ ಅವರು ನಟ ವಿಜಯ್ ಅವರಿಗೆ ನೀಡಿದ ಎಚ್ಚರಿಕೆ ಏನು?

ರಾಜಕೀಯ ಸಲಹೆ ಪಡೆಯಿರಿ!
ನಟ ವಿಜಯ್ ಅವರು ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ, ಹೇಳಿಕೆ ಒಂದನ್ನ ನೀಡಿದ್ದರು. ಈ ಬಗ್ಗೆ ಈಗ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರು ಗರಂ ಆಗಿದ್ದು, ನಟ ವಿಜಯ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅದರಲ್ಲೂ ಲೋಕಸಭೆ ಚುನಾವಣೆ ಹತ್ತಿರದಲ್ಲೇ ಇರುವ ಸಮಯದಲ್ಲಿ ಹೀಗೆ ಅಣ್ಣಾಮಲೈ ನೀಡಿರುವ ಹೇಳಿಕೆ ಭಾರಿ ಕುತೂಹಲ ಕೆರಳಿಸಿದೆ. ಹಾಗಾದರೆ ಅಣ್ಣಾಮಲೈ ಅವರು ನೀಡಿರುವ ಹೇಳಿಕೆ ಏನು ಗೊತ್ತೆ? ಮುಂದೆ ಓದಿ.
"Vijay should have better Political advisors or he should explain what is discriminatory in the act"
— Karthi (Modi Ka Parivar) (@SaffronSurge3) March 14, 2024
Royal thrashing by Anna 😂🔥#Annamalai | #BjpCandidateList pic.twitter.com/sncvRnXL29
ವಿಜಯ್ VS ಅಣ್ಣಾಮಲೈ!
ನಟ ದಳಪತಿ ವಿಜಯ್ ಇತ್ತೀಚೆಗೆ ತಮಿಳುನಾಡು ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷವನ್ನ ಸ್ಥಾಪನೆ ಮಾಡಿದ್ದರು. ಈ ಮೂಲಕ ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ, ರಾಜಕೀಯ ಅಖಾಡ ಪ್ರವೇಶ ಮಾಡುತ್ತಿರುವ ಘೋಷಣೆ ಹೊರಡಿಸಿದ್ದರು. 'ತಮಿಳಗ ವೆಟ್ರಿ ಕಳಗಂ' ಎಂಬ ಹೆಸರನ್ನು ತಮ್ಮ ಹೊಸ ರಾಜಕೀಯ ಪಕ್ಷಕ್ಕೆ ಇಟ್ಟಿರುವ ನಟ ವಿಜಯ್ ಈಗ ಕೇಂದ್ರ ಸರ್ಕಾರದ ಸಿಎಎ ವಿರುದ್ಧ ಮಾತನಾಡಿದ್ದರು. ಆ ವಿಚಾರವಾಗಿ ಇದೀಗ ಅಣ್ಣಾಮಲೈ ಅವರು ಪ್ರತಿಕ್ರಿಯೆ ನೀಡಿದ್ದು, ನೀವು ಒಂದೇ ವಾಖ್ಯದಲ್ಲಿ ಮಾತನಾಡಿ ರಾಜಕೀಯ ಮಾಡಲು ಆಗುವುದಿಲ್ಲ. ಹೀಗಾಗಿ ನೀವು ಒಳ್ಳೆಯ ರಾಜಕೀಯ ಸಲಹೆಗಾರರನ್ನು ಇಟ್ಟುಕೊಳ್ಳಿ ಅಂತಾ ಹೇಳಿದ್ದಾರೆ.
ಒಟ್ನಲ್ಲಿ ತಮಿಳುನಾಡು ರಾಜಕೀಯದಲ್ಲಿ ನಟ ದಳಪತಿ ವಿಜಯ್ & ಅಣ್ಣಾಮಲೈ ನಡುವೆ ಮೆಲ್ಲಗೆ ತಿಕ್ಕಾಟ ಶುರುವಾದಂತೆ ಕಾಣುತ್ತಿದೆ. ಅದರಲ್ಲೂ ಲೋಕಸಭೆ ಚುನಾವಣೆ ಹತ್ತಿರವೇ ಇರುವಾಗ ಇಬ್ಬರ ನಡುವಿನ ಈ ಮಾತಿನ ಯುದ್ಧ ಸಾಕಷ್ಟು ಗಮನ ಕೂಡ ಸೆಳೆದಿದೆ. ಈ ಮೂಲಕ ಅಣ್ಣಾಮಲೈ ನೀಡಿರುವ ಹೇಳಿಕೆಗೆ ಈಗ ನಟ ವಿಜಯ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications