ಮಾಧ್ಯಮಗಳ ಮೇಲೆ ಹಲ್ಲೆ ಸಂಬಂಧ ನಟ ಮೋಹನ್ ಬಾಬು ಕ್ಷಮೆಯಾಚನೆ
ಟಾಲಿವುಡ್ನ ಹಿರಿಯ ನಟ ಮೋಹನ್ ಬಾಬು ಅವರು ಮಾಧ್ಯಮಗಳ ಕ್ಷಮೆಯಾಚಿಸಿದ್ದಾರೆ. ಮೋಹನ್ ಬಾಬು ಅವರು ಇತ್ತೀಚೆಗೆ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಮಾಧ್ಯಮದ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನು ತೆಲುಗು ಮಾಧ್ಯಮ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದವು. ಹಲ್ಲೆ ಸಂಬಂಧ ಮೋಹನ್ ಬಾಬು ವಿರುದ್ಧ ಕೇಸ್ ಕೂಡ ದಾಖಲಾಗಿತ್ತು.
ಖ್ಯಾತ ನಟರಾದ ಮಂಚು ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದೆ. ತಂದೆ ಹಾಗೂ ಮಗನ ನಡುವೆ ನಡೆದಿರುವ ಕೌಟುಂಬಿಕ ಜಗಳ ಇದೀಗ ಬೀದಿಗೆ ಬಂದಿದೆ. ನಟ ಮೋಹನ್ ಬಾಬು ಹಾಗೂ ಅವರ ಪುತ್ರ ಮಂಚು ಮನೋಜ್ ಅವರ ನಡುವಿನ ಜಗಳ ತಾರಕಕ್ಕೇರಿದ್ದು, ಇದನ್ನು ವರದಿ ಮಾಡಲು ಹೋಗಿದ್ದ ಮಾಧ್ಯಮ ಸಿಬ್ಬಂದಿ ಮೇಲೆ ಮೋಹನ್ ಬಾಬು ಹಲ್ಲೆ ನಡೆಸಿದ್ದರು.

ಮೈಕ್ ಕಿತ್ತುಕೊಂಡು ಏಕಾಏಕಿ ಮಾಧ್ಯಮ ಸಿಬ್ಬಂದಿಯನ್ನು ಥಳಿಸಿರುವ ವಿಡಿಯೋ ವೈರಲ್ ಕೂಡ ಆಗಿತ್ತು. ಅಲ್ಲದೆ ತಮ್ಮ ಬೌನ್ಸರ್ಗಳನ್ನು ಬಿಟ್ಟು ಮೋಹನ್ ಬಾಬು ಅವರು ಮಾಧ್ಯಮದವರನ್ನು ಓಡಿಸಿದ್ದರು. ಇನ್ನು ಹಲ್ಲೆ ಸಂಬಂಧ ತೆಲುಗು ಖಾಸಗಿ ವಾಹಿನಿಯ ವರದಿಗಾರ ಬಲವಾಗಿ ಗಾಯಗೊಂಡಿದ್ದರು. ಅವರ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಆಪರೇಷನ್ ಮಾಡುವ ಹಂತಕ್ಕೂ ತಲುಪಿತ್ತು.
ಮಾಧ್ಯಮಗಳ ಮೇಲಿನ ಹಲ್ಲೆ ಖಂಡಿಸಿ ತೆಲಂಗಾಣ ಮಾಧ್ಯಮ ಸಂಘಟನೆಗಳು ಮೋಹನ್ ಬಾಬು ವಿರುದ್ಧ ಪ್ರತಿಭಟನೆ ನಡೆಸಿದ್ದವು. ಅಲ್ಲದೆ ಹಲ್ಲೆ ಮಾಡಿರುವ ನಟ ಮೋಹನ್ ಬಾಬು ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದರು. ಘಟನೆ ಸಂಬಂಧ ಪೊಲೀಸರಿಗೆ ದೂರು ಕೂಡ ನೀಡಿದ್ದರು. ತಂದೆ ಮಾಡಿದ ಹಲ್ಲೆಯನ್ನು ಮೋಹನ್ ಬಾಬು ಪುತ್ರ ಮಂಚು ಮನೋಜ್ ಕೂಡ ಖಂಡಿಸಿದ್ದರು.

ಈ ಹಿನ್ನೆಲೆ ಮೋಹನ್ ಬಾಬು ಅವರು ಮಾಧ್ಯಮಗಳ ಕ್ಷಮೆ ಕೇಳಿದ್ದಾರೆ. ನನ್ನ ಕುಟುಂಬಕ್ಕೆ ಸಂಬಂಧಿಸಿದ ವಿಚಾರ ಇಷ್ಟು ದೊಡ್ಡದಾಗಿದೆ. ಇದರಿಂದ ಮಾಧ್ಯಮದವರಿಗೆ ಸಂಕಷ್ಟ ಎದುರಾಗಿರುವ ಬಗ್ಗೆ ನನಗೆ ಬೇಸರವಿದೆ. ಈ ಘಟನೆ ಬಳಿಕ ಆಸ್ಪತ್ರೆಯಲ್ಲಿದ್ದ ಕಾರಣದಿಂದ ಈ ಸಂಬಂಧ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಾಗಲಿಲ್ಲ. ಆ ದಿನ ನಡೆದ ಘಟನೆಯಲ್ಲಿ ವರದಿಗಾರರೊಬ್ಬರು ಗಾಯಗೊಂಡಿರುವುದು ಬೇಸರದ ಸಂಗತಿ. ಈ ಸಂಬಂಧ ಅವರ ಕುಟುಂಬಕ್ಕೆ ಹಾಗೂ ಮಾಧ್ಯಮ ಸಂಸ್ಥೆಗೆ ನಾನು ಪ್ರಾಮಾಣಿಕವಾಗಿ ಕ್ಷಮೆ ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸುದ್ದಿವಾಹಿನಿಯ ವರದಿಗಾರ ರಂಜಿತ್ ಅವರು ವರದಿಗಾರಿಕೆಗೆ ತೆರಳಿದ್ದಾಗ ಹೈದರಾಬಾದ್ನ ಜಲಪಲ್ಲಿಯಲ್ಲಿರುವ ಮೋಹನ್ ಬಾಬು ಅವರ ನಿವಾಸದಲ್ಲಿ ಹಲ್ಲೆಗೊಳಗಾಗಿದ್ದರು. ಹಲ್ಲೆ ಸಂಬಂಧ ನಟ ಮೋಹನ್ಬಾಬು ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಅಲ್ಲದೆ ನಟ ತಮ್ಮ ಬೌನ್ಸರ್ಗಳನ್ನು ಬಿಟ್ಟು ಮಾಧ್ಯಮದವರ ಮೇಲೆ ದಾಳಿ ನಡೆಸಿದ್ದರು ಎಂದೂ ಆರೋಪಿಸಲಾಗಿತ್ತು. ಈ ಸಂಬಂಧ ಮೋಹನ್ ಬಾಬು ಪುತ್ರರಾದ ಮಂಚು ಮನೋಜ್ ಹಾಗೂ ಮಂಚು ವಿಷ್ಣು ಕೂಡ ಮಾಧ್ಯಮಗಳ ಕ್ಷಮೆಯಾಚಿಸಿದ್ದಾರೆ.
-
'ಅವತ್ತು ಬ್ರೇಕಪ್ ಆಗಿದ್ದೇ ಒಳ್ಳೆಯದಾಯಿತು': ರಶ್ಮಿಕಾ ತಾಯಿಯದ್ದೆ ಎನ್ನಲಾದ ಸ್ಫೋಟಕ ಆಡಿಯೋ ವೈರಲ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ











Click it and Unblock the Notifications