Charith Balappa: ಶೂಟಿಂಗ್ ಹೋಗುವಾಗ ಕಿರುತೆರೆ ನಟ ಚರಿತ್ ಮೇಲೆ ಹಲ್ಲೆ!
ಬೆಂಗಳೂರು ಮಾರ್ಚ್ 9: ಕಳೆದ ದಿನವಷ್ಟೇ ಕನ್ನಡದ ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ವಿರುದ್ಧ ಹಲ್ಲೆ ಆರೋಪ ತಡವಾಗಿ ಬೆಳಕಿಗೆ ಬಂದಿತ್ತು. ಆದರೀಗ ಕಿರುತೆರೆ ನಟರೊಬ್ಬರು ತಮ್ಮ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಡವಾಗಿ ದೂರು ನೀಡಿದ್ದಾರೆ.
ಕಿರುತೆರೆ ನಟ ಚರಿತ್ ಬಾಳಪ್ಪ ತಮ್ಮ ನೆರೆಯ ವ್ಯಕ್ತಿ ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಫೆಬ್ರವರಿ 23ರಂದು ಈ ಘಟನೆ ನಡೆದಿದೆ. ಆದರೆ ತಡವಾಗಿ ದೂರು ದಾಖಲಿಸಲಾಗಿದೆ. ನಟ ತಾವು ತಡವಾಗಿ ದೂರು ನೀಡಿರುವುದಕ್ಕೆ ಕಾರಣ ಕೂಡ ನೀಡಿದ್ದಾರೆ.

ಖಾಲಿ ಜಾಗದಲ್ಲಿ ಕಸ ಹಾಕಿದ್ದಕ್ಕೆ ತಮಗೆ ನಿಂದಿಸಿ ಹಲ್ಲೆ ಮಾಡಲಾಗಿದೆ ಎಂದು ಕಿರುತೆರೆ ನಟ ಚರಿತ್ ಬಾಳಪ್ಪ ದೂರು ನೀಡಿದ್ದಾರೆ. ಶೂಟಿಂಗ್ ಹೋಗುವಾಗ ಖಾಲಿ ಜಾಗದಲ್ಲಿ ಕಸವನ್ನು ಇಟ್ಟಿದ್ದರು. ಈ ಸಂದರ್ಭದಲ್ಲಿ ಪಕ್ಕದ ಮನೆಯಲ್ಲಿದ್ದ ವ್ಯಕ್ತಿ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿ ಹಲ್ಲೆ ಕೂಡ ಮಾಡಿದ್ದಾರೆ ಎಂದು ದೂರಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ತಮ್ಮ ಮೇಲೆ ಹಲ್ಲೆ ನಡೆದಿದೆ. ವ್ಯಕ್ತಿ ತಮಗೆ ತೊಂದರೆ ನೀಡಿದ್ದಾರೆಂದು ಚರಿತ್ ದೂರಿನಲ್ಲಿ ತಿಳಿಸಿದ್ದಾರೆ. ತಮಗೆ ಶೂಟಿಂಗ್ ಇದ್ದ ಕಾರಣ ತಡವಾಗಿ ದೂರು ನೀಡುತ್ತಿರುವುದಾಗಿ ನಟ ಹೇಳಿಕೊಂಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಅಷ್ಟಕ್ಕೂ ಕಸ ಎಲ್ಲಂದ್ರಲ್ಲಿ ಇಡುವಂತಿಲ್ಲ. ಹಾಕುವಂತಿಲ್ಲ. ಬಿಬಿಎಂಪಿ ವಾಹನ ಬಂದಾಗಲೇ ಕಸವನ್ನು ಹಾಕಬೇಕು. ಆದರೆ ಕಸ ಹಾಕುವ ವಿಚಾರದಲ್ಲಿ ಹಲ್ಲೆ ಮಾಡುವ ಮಟ್ಟಕ್ಕೆ ಜಗಳವಾಡಿರುವುದು ಬೇರೆ ಕಾರಣ ಇರಬಹುದಾ ಎಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಜೊತೆಗೆ ಸ್ಥಳದಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ.
'ಮುದ್ದುಲಕ್ಷ್ಮಿ' ಧಾರಾವಾಹಿಯಲ್ಲಿ ಮುಖ್ಯಪಾತ್ರಧಾರಿ ಧೃವಂತ್ ಆಗಿ ಚರಿತ್ ಬಾಳಪ್ಪ ಕಾಣಿಸಿಕೊಂಡಿದ್ದರು. ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'w/o ಕೃಷ್ಣಮೂರ್ತಿ' ಧಾರಾವಾಹಿಯಲ್ಲಿ ನಾಯಕನಾಗಿ ನಟಿಸಿದ್ದರು. ಚರಿತ್'ಮುದ್ದು ಮಣಿಗಳು' ಧಾರಾವಾಹಿಯಲ್ಲಿ ಡಾಕ್ಟರ್ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications