ಮುದ್ದಾದ ಮಗುವಿಗೆ ವೆಲ್ಕಮ್ ಹೇಳಿದ ಸಿಂಹ-ಪ್ರಿಯಾ ಜೋಡಿ: ಮಗನೋ? ಮಗಳೋ?
ಕನ್ನಡ ಚಿತ್ರರಂಗದ ಕ್ಯೂಟ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಗೆ ಹೊಸ ಸದಸ್ಯನ ಆಗಮನವಾಗಿದೆ. ಸಿಂಹ ಪ್ರಿಯ ಜೋಡಿ ತಮ್ಮ ವಿವಾಹ ವಾರ್ಷಿಕೋತ್ಸವದ ದಿನವೇ ತಮ್ಮ ಚೊಚ್ಚಲ ಮಗುವನ್ನು ಸ್ವಾಗತಿಸಿಕೊಂಡಿದ್ದಾರೆ. ಹೌದು ನಟಿ ಹರಿಪ್ರಿಯಾ ತಾಯಾಗಿದ್ದು ಮುದ್ದಾದ ಮಗುವಿಗೆ ಜನ್ಮ ನೀಡಿದ್ದಾರೆ.
ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿ ದೀಪಾವಳಿ ಹಬ್ಬದ ದಿನವೇ ಅಭಿಮಾನಿಗಳ ಗುಡ್ನ್ಯೂಸ್ ಕೊಟ್ಟಿದ್ದರು. ನಟಿ ಹರಿಪ್ರಿಯಾ ವಿಡಿಯೋವೊಂದನ್ನು ಹಂಚಿಕೊಂಡಾಗ ಅವರು ಗರ್ಭಿಣಿ ಇರಬಹುದು ಎಂದು ಅನೇಕರು ಊಹಿಸಿದ್ದರು. ಅಲ್ಲದೇ ಕಮೆಂಟ್ಗಳಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಕೇಳುತ್ತಿದ್ದರು.

ಕೊನೆಗೂ ಈ ಬಗ್ಗೆ ಅಧೀಕೃತವಾಗಿ ತಿಳಿಸಿದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿ ವಿಶೇಷವಾದ ಫೋಟೋ ಹಂಚಿಕೊಂಡು ತಂದೆ-ತಾಯಾಗುತ್ತಿರುವ ಸಿಹಿ ಸುದ್ದಿಯನ್ನು ಕಳೆದ ವರ್ಷ ದೀಪಾವಳಿ ಹಬ್ಬದ ದಿನವೇ ಬಹಿರಂಗಪಡಿಸಿದ್ದರು. ಈ ವೇಳೆ ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಇಬ್ಬರ ಅಭಿಮಾನಿಗಳ ಶುಭ ಹಾರೈಕೆಯ ಮಹಾಪೂರವೇ ಹರಿದು ಬಂದಿತ್ತು.
ಬಳಿಕ ಇತ್ತೀಚಿಗಷ್ಟೇ ಹರಿಪ್ರಿಯಾ ಸೀಮಂತ ಅದ್ಧೂರಿಯಾಗಿ ನಡೆದಿತ್ತು. ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಭಾಗಿಯಾಗಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿಗೆ ಹಾರೈಸಿದ್ದರು. ಅದಾದ ಬಳಿಕ ವಿಶೇಷ ಲುಕ್ನಲ್ಲಿ ಫೋಟೋ ಶೂಟ್ಕೂಡ ಈ ಜೋಡಿ ಮಾಡಿಸಿದ್ದರು. ಈ ವೇಳೆ ಯಾವ ಮಗು ಇರಬಹುದು ಎನ್ನುವ ಚರ್ಚೆ ಕಮೆಂಟ್ನಲ್ಲಿ ನಡೆದಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ.

ಈ ಸಿಹಿ ಸುದ್ದಿಯನ್ನು ಸ್ವತಃ ವಸಿಷ್ಠ ಸಿಂಹ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ಮದುವೆಯಾದ ದಿನಾಂಕ ಅಂದರೆ ಜನವರಿ 26ರಂದು ಹರಿಪ್ರಿಯಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 'ನಮ್ಮ ಮದುವೆ ದಿನವೇ ಅವನು ಬಂದಿದ್ದಾನೆ' ಎಂದು ವಸಿಷ್ಠ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಎಲ್ಲರೂ ಶುಭ ಹಾರೈಸುತ್ತಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ












Click it and Unblock the Notifications