ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಏನಾಗಿತ್ತು? ಕುಟುಂಬಸ್ಥರು ಹೇಳಿದ್ದೇನು?
ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇಂದು( ಏಪ್ರಿಲ್ 14) ಸೋಮವಾರ ವಿಧಿವಶರಾಗಿದ್ದಾರೆ. 76 ವರ್ಷದ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಸದ್ಯ ಅವರ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಸುಲ್ತಾನ್ ಪಾಳ್ಯದ ನಿವಾಸಕ್ಕೆ ರವಾನಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕನ್ನಡದಲ್ಲಿ 860 ಸಿನಿಮಾ ಮಾಡಿರುವ ಬ್ಯಾಂಕ್ ಜನಾರ್ಧನ್ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತವಾಗಿದ್ದು, ಚಿತ್ರರಂಗದ ನಟ- ನಟಿಯರು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಏನಾಗಿತ್ತು ಎನ್ನುವುದರ ಬಗ್ಗೆ ಅವರ ಪುತ್ರ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

'ನಮ್ಮ ತಂದೆ ಬ್ಯಾಂಕ್ ಜನಾರ್ಧನ್ ಅವರಿಗೆ ಇತ್ತೀಚಿಗೆ ಅನ್ಯಾರೋಗ್ಯ ಹೆಚ್ಚಾಗಿತ್ತು. ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಮೊದಲಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವು. ಕಳೆದ ವಾರ ಸ್ವಲ್ಪ ಗುಣಮುಖರಾಗಿದ್ದಾರೆ ಎಂದು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಿಕೊಂಡು ಮನೆಗೆ ಕರೆದುಕೊಂಡು ಹೋದೆವು'.
'ಮನೆಗೆ ಹೋದ ಮೂರು ದಿನಗಳ ಬಳಿಕ ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿದೆ. ನಂತರ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದೆವು. ನಿನ್ನೆ ತುಂಬಾ ಉಸಿರಾಟದ ಸಮಸ್ಯೆಯಾಗಿತ್ತು. ವೈದ್ಯರು ಕೂಡ ನಮ್ಮ ತಂದೆಯನ್ನು ಉಳಿಸಲು ತುಂಬಾ ಪ್ರಯತ್ನ ಪಟ್ಟರು. ಆದರೆ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ತಂದೆಯನ್ನು ಉಳಿಸಿಕೊಳ್ಳಲು ತುಂಬಾ ಪ್ರಯತ್ನ ಮಾಡಿದೆವು. ಆದರೂ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ' ಎಂದು ಬ್ಯಾಂಕ್ ಜನಾರ್ಧನ್ ಅವರ ಪುತ್ರ ಪ್ರಸಾದ್ ಕಣ್ಣೀರು ಹಾಕಿದ್ದಾರೆ.
ಇನ್ನು ಬ್ಯಾಂಕ್ ಜನಾರ್ಧನ್ ಅವರ ಪುತ್ರಿಯರು ಕೂಡ ಮಾಧ್ಯಮಗಳೊಂದಿಗೆ ಮಾತನಾಡಿದ್ದು, 'ನಮ್ಮ ತಂದೆ ಅವರ ಎಲ್ಲಾ ಕರ್ತವ್ಯಗಳನ್ನು ಮಾಡಿ ಮುಗಿಸಿದ್ದಾರೆ. ನಾವು ಕೂಡಾ ಅವರು ವಿಶ್ರಾಂತಿ ಪಡೆಯಲಿ ಎಂದು ಬಯಸಿದ್ದೇವು. ಅವರು ಆರಾಮಾಗಿದ್ದರು. ಏಕಾಏಕಿ ಹೀಗಾಗಿದೆ. ನಮ್ಮ ತಂದೆ ಇಲ್ಲ ಎಂದು ಹೇಳಲು ತುಂಬಾ ಬೇಜಾರಾಗುತ್ತದೆ. ಮೊದಲೆಲ್ಲಾ ಆರೋಗ್ಯವಾಗಿದ್ದು, ಇತ್ತೀಚಿಗೆ ಕೆಲ ದಿನಗಳಿಂದ ಅನಾರೋಗ್ಯ ಕಾಡಿತ್ತು. ಅವರು ಹುಷಾರಾಗಿ ಬರುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಇದ್ದೆವು' ಎಂದು ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications