Get Updates
Get notified of breaking news, exclusive insights, and must-see stories!

Actor Passes Away: 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ ನಿಧನ

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅಭಿನಯಿಸಿದ್ದ ಟಾಲಿವುಡ್‌ನ ಖ್ಯಾತ ಹಿರಿಯ ನಟ, ಮಾಜಿ ಶಾಸಕ ಕೋಟ ಶ್ರೀನಿವಾಸ ರಾವ್ (Kota Srinivasa Rao) ಅವರು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ (ಜು.13) ಮುಂಜಾನೆ ಹೈದರಾಬಾದ್‌ನ ಫಿಲ್ಮ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೋಟ ಶ್ರೀನಿವಾಸ ರಾವ್‌ ಅವರು ಬಹುತೇಕ ಎಲ್ಲ ಸ್ಟಾರ್‌ ನಟರೊಂದಿಗೆ ತೆರೆ ಹಂಚಿಕೊಂಡಿದ್ದರು. ವಿಭಿನ್ನ ಪಾತ್ರಗಳಲ್ಲಿ ಅವರ ಪ್ರೇಕ್ಷಕರ ಮನಗೆದ್ದಿದ್ದರು. ವಿಲನ್‌ ಹಾಗೂ ರಾಜಕಾರಣಿ ಪಾತ್ರಕ್ಕೆ ಕೋಟ ಶ್ರೀನಿವಾಸ ರಾವ್‌ ಹೆಸರುವಾಸಿಯಾಗಿದ್ದರು.

ಕನ್ನಡದಲ್ಲಿ ಲೇಡಿ ಕಮೀಷನರ್‌, ರಕ್ತ ಕಣ್ಣೀರು, ಲವ್‌, ನಮ್ಮ ಬಸವ, ಮಸ್ತಿ, ನಮ್ಮಣ್ಣ, ಶ್ರೀಮತಿ, ಕಬ್ಜ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹೀಗಾಗಿ ಕನ್ನಡ ಸಿನಿ ಪ್ರೇಕ್ಷಕರಿಗೂ ಅವರು ಹತ್ತಿರವಾಗಿದ್ದರು. ಶಿವ, ಗಾಯಂ, ಮನಿ, ಶತ್ರುವು, ಅಹಾ ನಾ ಪೆಲ್ಲಂಟ, ಬೊಮ್ಮರಿಲ್ಲು, ಅಥಡು, ರಕ್ತ ಚರಿತ್ರ, ಲೀಡರ್, ಸತ್ಯಮೂರ್ತಿ, ಅತ್ತಾರಿಂಟಿಕಿ ದಾರೆಡಿ, ನಾಯಕ ಸೇರಿದಂತೆ ಹಲವು ಹಿಟ್‌ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದರು. ಖಳನಟನ ಜೊತೆಗೆ ಹಲವು ಪೋಷಕ ಪಾತ್ರಗಳನ್ನು ಸಹ ಅವರು ನಿರ್ವಹಿಸಿದ್ದರು.

veteran-tollywood-actor-kota-srinivasa-rao-passes-away-after-acting-in-750-films

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಕಂಕಿಪಾಡು ಗ್ರಾಮದಲ್ಲಿ 1942ರಲ್ಲಿ ಕೋಟ ಶ್ರೀನಿವಾಸ ರಾವ್‌ ಜನಿಸಿದ್ದರು. 1978ರಲ್ಲಿ ತೆರೆಕಂಡ ತೆಲುಗು ಚಿತ್ರ ಪ್ರಣಂ ಖರೀಡು ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬರೋಬ್ಬರಿ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

ಖಳನಾಯಕ ಪಾತ್ರ ಮತ್ತು ಪೋಷಕ ಪಾತ್ರಗಳಲ್ಲಿ ಅವರ ನಟನೆಗೆ 9 ಬಾರಿ ನಂದಿ ಪ್ರಶಸ್ತಿಗೆ ಭಾಜನರಾಗಿದ್ದರು. 2015ರಲ್ಲಿ ಭಾರತೀಯ ಚಿತ್ರರಂಗಕ್ಕೆ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿ, 2012ರಲ್ಲಿ ಕೃಷ್ಣಂ ವಂದೇ ಜಗದ್ಗುರುಂ ಸಿನಿಮಾದಲ್ಲಿನ ನಟನೆಗಾಗಿ ಸೈಮಾ ಪ್ರಶಸ್ತಿ ಅವರಿಗೆ ಸಂದಿತ್ತು.

ಶಾಸಕರಾಗಿ ಸೇವೆ

ಸಿನಿಮಾ ರಂಗದ ಜೊತೆಗೆ ಕೋಟ ಅವರು ರಾಜಕೀಯಕ್ಕೂ ಇಳಿದಿದ್ದರು. 1999-2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದರು. ವಿವಿಧ ರೀತಿಯ ಪಾತ್ರಗಳಲ್ಲಿ ತಮ್ಮ ಅಭಿನಯದಿಂದ ಕೋಟ ಶ್ರೀನಿವಾಸ ರಾವ್ ತೆಲುಗು ಚಿತ್ರರಂಗ ಮತ್ತು ನಾಟಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಅವರ ಅಭಿನಯದಲ್ಲಿ ಆಳ, ವೈವಿಧ್ಯ ಮತ್ತು ನೈಜತೆ ಇತ್ತು.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರು ನಿಧನರಾಗಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ಅನೇಕ ಚಿತ್ರರಂಗದ ಗಣ್ಯರು ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕೋಟ ಶ್ರೀನಿವಾಸ ರಾವ್ ಅವರ ಕೊಡುಗೆಗಳು ಎಂದಿಗೂ ಮರೆಯಲಾಗದು ಎಂದು ನೆನೆದಿದ್ದಾರೆ. ಅವರ ನಿಧನವು ತೆಲುಗು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಗಣ್ಯರು ಮತ್ತು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+