Deepika Padukone Video: ನಟಿ ದೀಪಿಕಾ ಪಾಪರಾಜಿ ಕ್ಯಾಮೆರಾ ಬ್ಲಾಕ್: ಆಕ್ರೋಶದ ಬಳಿಕ ವಿಡಿಯೋ ಡಿಲೀಟ್
ನವದೆಹಲಿ, ಮೇ 10: ದೀಪಿಕಾ ಪಡುಕೋಣೆಯವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಅವರು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ಅವರು ಕ್ಯಾಮೆರಾ ಮುಂದೆ ಬಲು ನಿರಾಕರಿಸಿದ ವಿಡಿಯೋ ವೈರಲ್ ಆಗಿತ್ತು. ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ.
ಬಾಲಿವುಡ್ ಚೆಂದದ ದಂಪತಿಗಳಲ್ಲಿ ಒಬ್ಬರಾದ ನಟಿ ದೀಪಿಕಾ (Deepika Padukone) ಹಾಗೂ ಪತಿ ನಟ ರಣವೀರ್ ಸಿಂಗ್ (Ranveer Singh) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ವರ್ಷ ಸೆಪ್ಟಂಬರ್ ನಲ್ಲಿ ಮಗು ಬರುವ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ದೀಪಿಕಾ ಪಡುಕೋಣೆ ಪೋಸ್ಟ್ ಹಾಕಿದ್ದರು.

ಅದರ ಬೆನ್ನಲ್ಲೆ ದೀಪಿಕಾ ಪಡುಕೋಣೆ ದಂಪತಿ ಪೋಷಕರ ಜೊತೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಸಿಕೊಂಡಿದ್ದಾರೆ. ಈ ವೇಳೆ ದೀಪಿಕಾ ಫೋಟೋ ತೆಗೆಯಲು, ವಿಡಿಯೋ ಮಾಡಲು ಪಾಪರಾಜಿಗಳು ಎದುರಾಗಿದ್ದಾರೆ. ಆಗಿ ವಿಡಿಯೋ ಮಾಡದಂತೆ ಹೇಳಿದ್ದಾರೆ. ಸ್ವತಃ ತಾವೇ ಕೈಯಿಂದ ಕ್ಯಾಮೆರಾ ಬ್ಲಾಕ್ ಮಾಡಲು ದೀಪಿಕಾ ಮುಂದಾಗಿದ್ದ ವಿಡಿಯೋ ವೈರಲ್ ಆಗಿತ್ತು.
ವಿಡಿಯೋ ಶೇರ್ಗೆ ಅಭಿಮಾನಿಗಳ ಆಕ್ರೋಶ
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪಾಪರಾಜಿಗಳಲ್ಲಿ ಒಬ್ಬರು ಹಂಚಿಕೊಂಡಿದ್ದರು. ನಂತರ ವಿಡಿಯೋ ನೋಡಿದ ಒಂದಷ್ಟು ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ನಕಾರಾತ್ಮಕ ಕಾಮೆಂಟ್ ಗಳನ್ನು ಮಾಡಿದ್ದರು. ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಆ ವಿಡಿಯೋ ಡಿಲೀಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ದೀಪಿಕಾ ಪಡುಕೋಣೆ ಮುಂಬೈನಲ್ಲಿ ಕ್ಯಾಮೆರಾ ಮುಂದೆ ಸಿಕ್ಕಿದ್ದರ ಕುರಿತು ಪಾಪರಾಜಿ ವಿಡಿಯೋ ಹಾಕಿದ್ದ. ಇದಕ್ಕೆ ದೀಪಿಕಾ ಅವರ ಅಭಿಮಾನಿಗಳು ಸ್ಟಾರ್ ದಂಪತಿಯ ಖಾಸಗಿತನವನ್ನು ಗೌರವಿಸಬೇಕು. ಇಷ್ಟವಿಲ್ಲವಾದರೂ ವಿಡಿಯೋ, ಫೋಟೋ ಕ್ಲಿಕ್ಕಿಸುವುದೇಕೆ ಎಂದು ಪಾಪರಾಜಿಗಳಿಗೆ ವಿನಂತಿಸಿ ಕಾಮೆಂಟ್ ಮಾಡಿದ್ದಾರೆ.

ನಟಿಯ ಖಾಸಗಿತನ, ಗೌಪ್ಯತೆ ಗೌರವಿಸಿ
ದೀಪಿಕಾಗೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಇಷ್ಟವಿಲ್ಲ ಎಂದಾದ ಮೇಲೆ ನೀವೇಕೆ ಇಲ್ಲಿ ಪೋಸ್ಟ್ ಮಾಡಿದ್ದೀರಿ. ಅವರದ್ದೆ ಆದ ಖಾಸಗಿತನ, ಗೌಪ್ಯತೆ ಇರುತ್ತದೆ. ಅದನ್ನು ನೀವು ಗೌರವಿಸಬೇಕು ಎಂದು ಮತ್ತೊಬ್ಬರು ಅಭಿಮಾನಿ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಮಾಧ್ಯಮದವರನ್ನು ಹೀಗೆಯೇ ನಡೆಸಿಕೊಳ್ಳಬೇಕು.. ಸಾಕು..ಸಾಕು. ಎಂದೆಲ್ಲ ಕಾಮೆಂಟ್ ಮಾಡಿದ್ದಾರೆ.
ಇನ್ನೂ ಕಳೆದ ವರ್ಷ ಮುಂಬೈನಲ್ಲಿ ಜರುಗಿದ ಮನೀಶ್ ಮಲ್ಹೋತ್ರಾ ಅವರ ಗ್ರ್ಯಾಂಡ್ ಬ್ರೈಡಲ್ ಕೌಚರ್ ಶೋ ನಲ್ಲಿ ದೀಪಿಕಾ ಪಡುಕೋಣೆ ಅವರ ಪತಿ ರಣವೀರ್ ಸಿಂಗ್ ರ್ಯಾಂಪ್ ವಾಕ್ ಮಾಡಿದ್ದರು. ಆಗ ದೀಪಿಕಾ ತಮ್ಮ ಅಂಜು ಭವ್ನಾನಿ ಅವರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆಗಲೂ ಅವರು ಪಾಪರಾಜಿಗಳಿಗೆ ಫೋಟೋ ತೆಗೆಯಲು ಅವಕಾಶ ನೀಡಿರಲಿಲ್ಲ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications