ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ
ತಮಿಳು ಚಿತ್ರರಂಗದ ಖ್ಯಾತ ನಟ ಧನುಷ್ ಮತ್ತು ನಯನತಾರ-ವಿಘ್ನೇಶ್ ಶಿವನ್ ದಂಪತಿ ನಡುವಿನ ಮನಸ್ತಾಪದ ಬಗ್ಗೆ ತಮಿಳು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತಮ್ಮ ಮುಂಬರುವ ಚಿತ್ರ 'ಲವ್ ಇನ್ಶೂರೆನ್ಸ್ ಕೊಂಪನಿ' ಪ್ರಚಾರದ ವೇಳೆ ಮಾತನಾಡಿರುವ ವಿಘ್ನೇಶ್ ಶಿವನ್, ಧನುಷ್ ಜೊತೆ ಸ್ನೇಹ ಕಳೆದುಕೊಂಡಿರುವುದು ನನ್ನ ಜೀವನದ ಅತಿ ದೊಡ್ಡ ನಷ್ಟ ಎಂದು ಬೇಸರ ಹಂಚಿಕೊಂಡಿದ್ದಾರೆ.
ತಪ್ಪು ನನ್ನದೇ ಇರಬಹುದು
ನನ್ನ ತಂದೆ ನಿಧನರಾದ ದಿನವೇ (ಜುಲೈ 28) ಧನುಷ್ ಅವರ ಹುಟ್ಟುಹಬ್ಬವೂ ಬರುತ್ತದೆ. ಆದ್ದರಿಂದ ನಾನು ಅವರನ್ನು ಯಾವಾಗಲೂ ಒಬ್ಬ ತಂದೆಯ ಸಮಾನವಾಗಿ ನೋಡುತ್ತಿದ್ದೆ ಎಂದು ವಿಘ್ನೇಶ್ ಹೇಳಿದ್ದಾರೆ. ನಮ್ಮ ನಡುವಿನ ಈ ಅಂತರಕ್ಕೆ ಎಲ್ಲೋ ಒಂದು ಕಡೆ ನಾನೇ ಮಾಡಿದ ತಪ್ಪು ಕಾರಣವಿರಬಹುದು. ಆ ಸುಂದರವಾದ ಸಂಬಂಧವನ್ನು ಕಳೆದುಕೊಂಡಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈಗಿನ ನನ್ನ ಬದುಕಿನಲ್ಲಿ ಧನುಷ್ ಸರ್ ಅವರಿಗೆ ಅತ್ಯಂತ ವಿಶೇಷವಾದ ಸ್ಥಾನವಿದೆ ಎಂದು ಅವರು ನೆನಪಿಸಿಕೊಂಡಿದ್ದಾರೆ.

'ವಿಐಪಿ' ಚಿತ್ರದ ಸಮಯದಲ್ಲಿ ತಾವು ಧನುಷ್ ಜೊತೆ ಕಳೆದ ಎರಡು ವರ್ಷಗಳ ಕಾಲದ ಒಡನಾಟವನ್ನು ಅವರು ನೆನಪಿಸಿಕೊಂಡಿದ್ದಾರೆ. ನಾನು ಧನುಷ್ ಸರ್ ಜೊತೆಗೆ ಚಿತ್ರೀಕರಣದ ಸಮಯದಲ್ಲಿ ಸತತ ಎರಡು ವರ್ಷಗಳ ಕಾಲ ಕಳೆದಿದ್ದೆ. ಆ ಸಮಯದಲ್ಲಿ ಅವರ ಮೇಲೆ ನನಗಿದ್ದ ಗೌರವ ಎಷ್ಟಿತ್ತೆಂದರೆ, ಧನುಷ್ ಅವರು ಊಟ ಮಾಡಿ ಮುಗಿಸಿದ ನಂತರವೇ ನಾನು ಊಟಕ್ಕೆ ಕುಳಿತುಕೊಳ್ಳುತ್ತಿದ್ದೆ ಎಂದು ತಮ್ಮ ಒಡನಾಟವನ್ನು ನೆನೆದಿದ್ದಾರೆ.
ಕೆಲವೊಮ್ಮೆ ಇಬ್ಬರು ವ್ಯಕ್ತಿಗಳ ನಡುವೆ ಅನಿರೀಕ್ಷಿತ ಘಟನೆಗಳು ನಡೆದಾಗ, ಆ ಸಂದರ್ಭದ ಗಂಭೀರತೆ ನಮಗೇ ಸರಿಯಾಗಿ ಅರ್ಥವಾಗುವುದಿಲ್ಲ. ನಮ್ಮ ನಡುವೆ ನಡೆದ ಘಟನೆಗಳ ಬಗ್ಗೆ ಈಗ ನನಗೆ ನಾಚಿಕೆಯಾಗುತ್ತಿದೆ ಮತ್ತು ಆ ಸಂಬಂಧವನ್ನು ಕಳೆದುಕೊಂಡಿದ್ದು ನನ್ನ ಅತಿದೊಡ್ಡ ನಷ್ಟ ಎಂದು ವಿಘ್ನೇಶ್ ಹೇಳಿದ್ದಾರೆ.

ಏನಿದು ವಿವಾದ?
ಕಳೆದ ವರ್ಷ ನಟಿ ನಯನತಾರ ಅವರ ನೆಟ್ಫ್ಲಿಕ್ಸ್ ಸಾಕ್ಷ್ಯಚಿತ್ರದಲ್ಲಿ, ಧನುಷ್ ನಿರ್ಮಾಣದ 'ನಾನುಂ ರೌಡಿ ದಾನ್' ಚಿತ್ರದ 3 ಸೆಕೆಂಡ್ನ ಬಿಟಿಎಸ್ ವಿಡಿಯೋ ಬಳಸಿದ್ದಕ್ಕೆ ಧನುಷ್ ಅವರು 10 ಕೋಟಿ ರೂ.ಗಳ ಹಕ್ಕುಸ್ವಾಮ್ಯ (Copyright) ನೋಟಿಸ್ ನೀಡಿದ್ದರು. ಇದು ನಯನತಾರಾ ಮತ್ತು ಧನುಷ್ ನಡುವೆ ದೊಡ್ಡ ಬಹಿರಂಗ ಪತ್ರ ಸಮರಕ್ಕೆ ಕಾರಣವಾಗಿತ್ತು. ಈಗ ವಿಘ್ನೇಶ್ ಶಿವನ್ ಅವರ ಈ ಹೇಳಿಕೆಯು ಧನುಶ್ ಹಾಗೂ ನಯನತಾರ ಇಬ್ಬರ ನಡುವಿನ ಮನಸ್ತಾಪ ಶಮನವಾಗಬಹುದೇ ಎಂಬ ಕುತೂಹಲ ಮೂಡಿಸಿದೆ. ವಿಘ್ನೇಶ್ ಶಿವನ್ ನಿರ್ದೇಶನದ, ಪ್ರದೀಪ್ ರಂಗನಾಥನ್ ನಟನೆಯ 'ಲವ್ ಇನ್ಶೂರೆನ್ಸ್ ಕೊಂಪನಿ' ಚಿತ್ರವು ಇದೇ ಏಪ್ರಿಲ್ 10ರಂದು ತೆರೆಕಾಣಲಿದೆ.
-
Janhvi Kapoor: ಅಶ್ಲೀಲ ವೆಬ್ಸೈಟ್ನಲ್ಲಿ ನನ್ನ ಫೋಟೋ ನೋಡಿದ್ದೆ: ಹದಿಹರೆಯದ ಕಹಿ ಘಟನೆ ಬಿಚ್ಚಿಟ್ಟ ನಟಿ ಜಾನ್ವಿ ಕಪೂರ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ













Click it and Unblock the Notifications