ನಟ ಪ್ರಕಾಶ್ ರಾಜ್, ದೇವರಕೊಂಡ, ರಾಣಾಗೆ ಬಿಗ್ ಕೇಸ್ನಲ್ಲಿ ಸಂಕಷ್ಟ!
ಟಾಲಿವುಡ್ನ ಖ್ಯಾತ ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿದಂತೆ ಹಲವು ನಟ, ನಟಿಯರಿಗೆ ದೊಡ್ಡ ಪ್ರಕರಣವೊಂದರಲ್ಲಿ ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯವು (ಇಡಿ) ಆನ್ಲೈನ್ ಬೆಟ್ಟಿಂಗ್ ಮೊಬೈಲ್ ಆ್ಯಪ್ಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಲ್ವರು ಪ್ರಸಿದ್ಧ ನಟರನ್ನು ವಿಚಾರಣೆಗೆ ಕರೆದು ಸಮನ್ಸ್ ನೀಡಿದೆ. ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಲಕ್ಷ್ಮೀ ಮಂಚು ಇದ್ದಾರೆ ಎಂದು ತಿಳಿದುಬಂದಿದೆ.
ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯ ಪೊಲೀಸರು ದಾಖಲಿಸಿದ್ದ ಕನಿಷ್ಟ ಐದು ಎಫ್ಐಆರ್ಗಳ ಸಂಬಂಧ ನಟರಿಗೆ ಸಂಕಷ್ಟ ಎದುರಾಗಿದೆ. ಸೆಲೆಬ್ರಿಟಿಗಳು ಜಂಗಲ್ ರಮ್ಮೀ, ಎ23, ಜೀತ್ವಿನ್, ಲೋಟಸ್365 ಎಂಬಂತಹ ಆನ್ಲೈನ್ ಬೆಟ್ಟಿಂಗ್ ವೇದಿಕೆಗಳಲ್ಲಿ ಜಾಹೀರಾತು ನೀಡಿದಕ್ಕಾಗಿ, ಇದರ ಮೂಲಕ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ಸೃಷ್ಟಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇವರು ಜಾಹೀರಾತುಗಳು ಮತ್ತು ಸೋಷಿಯಲ್ ಮೀಡಿಯಾದ ಮೂಲಕ ಒಪ್ಪಂದ ಅಥವಾ ತಿಳಿಯದಿದ್ದರೂ ಕೂಡಾ, ಅನಧಿಕೃತ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆಗೆ ಉತ್ತೇಜಿಸಿದ್ದಾರೆ ಎಂಬ ಆರೋಪದ ಮೇರೆಗೆ ED ತನಿಖೆ ನಡೆಸುತ್ತಿದೆ. ಕೆಲ ಸೆಲೆಬ್ರಿಟಿಗಳು ಈ ಆ್ಯಪ್ಗಳು ಅಕ್ರಮವಾಗಿವೆ ಎನ್ನುವುದು ಗೊತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರು ತೊಡಗಿರುವ ಕುರಿತು ಇಡಿ ಮಾಹಿತಿ ನೀಡಿದ್ದು, ಸಿನಿಮಾ ಜಗತ್ತಿನಲ್ಲಿ ಆನ್ಲೈನ್ ಗೇಮಿಂಗ್ ಜಾಹೀರಾತಿನಲ್ಲಿ ಭಾಗವಹಿಸುವುದು ಕಾನೂನು ಬಾಹಿರ ಎನ್ನುವ ಚರ್ಚೆ ಶುರುವಾಗಿದೆ.
ಈ ಪ್ರಕರಣದಿಂದ ಟಾಲಿವುಡ್ ಚಿತ್ರರಂಗದಲ್ಲಿ ದೊಡ್ಡ ಚರ್ಚೆ ಮೂಡಿಸಿಕೊಂಡಿದ್ದು, ಭವಿಷ್ಯದಲ್ಲಿ ಇಂತಹ ಜಾಹೀರಾತುಗಳಲ್ಲಿ ಪಾಲ್ಗೊಳ್ಳುವ ಕಲಾವಿದರಿಗೆ ಇದು ಎಚ್ಚರಿಕೆಯಾಗಿದೆ. 29 ಮಂದಿ ಸೆಲೆಬ್ರಿಟಿಗಳು ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳು ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳನ್ನು ಜಾಹೀರಾತು ಮಾಡಿ, ಅನಧಿಕೃತವಾಗಿ ಕೋಟ್ಯಾಂತರ ರೂಪಾಯಿ ಹಣ ಸೃಷ್ಟಿಯಾಗಲು ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ಪಿಎಂಎಲ್ಎ ಕೇಸ್ನಡಿ ನಾಲ್ವರು ಕಲಾವಿದರಿಂದ ವಿವರಗಳನ್ನು ಕೇಳಿದೆ.
ಈ ಸೆಲೆಬ್ರಿಟಿಗಳಲ್ಲಿ ಕೆಲವರು, ತಾವು ಉತ್ಪಾದಿಸುವ ಅಪ್ಲಿಕೇಶನ್ಗಳು ಮತ್ತು ಉತ್ಪನ್ನಗಳ ನಿಖರವಾದ ಕಾರ್ಯನಿರ್ವಹಣೆಯ ಬಗ್ಗೆ ತಮಗೆ ತಿಳಿದಿಲ್ಲ ಎಂದು ಈ ಹಿಂದೆ ಹೇಳಿದ್ದಾರೆ. ಬೆಟ್ಟಿಂಗ್ನಂತಹ ಯಾವುದೇ ತಪ್ಪು ಅಥವಾ ಕಾನೂನುಬಾಹಿರ ಚಟುವಟಿಕೆಗಾಗಿ ಈ ವೇದಿಕೆಗಳೊಂದಿಗೆ ತಾವು ಸಂಬಂಧ ಹೊಂದಿಲ್ಲ ಎಂದೂ ಸ್ಪಷ್ಟಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ. ಹೈದರಾಬಾದ್ನಲ್ಲಿರುವ ತನ್ನ ವಲಯ ಕಚೇರಿಯ ಮುಂದೆ ಹಾಜರಾಗುವಂತೆ ಇಡಿ ಜುಲೈ 23 ರಂದು ನಟ ರಾಣಾ ದಗ್ಗುಬಾಟಿಗೆ, ಜುಲೈ 30 ರಂದು ಪ್ರಕಾಶ್ ರಾಜ್, ಆಗಸ್ಟ್ 6ರಂದು ವಿಜಯ್ ದೇವರಕೊಂಡ, ಹಾಗೂ ಆಗಸ್ಟ್ 13ರಂದು ಬರುವಂತೆ ಲಕ್ಷ್ಮಿ ಮಂಚು ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ನಟರಿಗೆ ಸಂಕಷ್ಟ ಎದುರಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications