ಒಟಿಟಿಯಲ್ಲಿ ಧೂಳೆಬ್ಬಿಸುತ್ತಿರುವ ವಿಜಯ್ ಸೇತುಪತಿ ನಟನೆಯ ಮಹಾರಾಜ
ಭಾರತದ ಖ್ಯಾತ ಚಲನಚಿತ್ರ ನಟರಲ್ಲಿ ಕಾಣಿಸಿಕೊಳ್ಳುವ ಒಂದು ಹೆಸರು ವಿಜಯ್ ಸೇತುಪತಿ. ಇವರು ಯಾವುದೇ ಪಾತ್ರಕ್ಕಾಗಿ ಬಣ್ಣ ಹಚ್ಚಿದರೂ ಸಹ, ಆ ಪಾತ್ರಕ್ಕೆ ನ್ಯಾಯ ಒದಗಿಸುವ ಕಲೆಗಾರ. ಪಾತ್ರದಲ್ಲಿ ಪರಕಾಯ ಪ್ರವೇಶವನ್ನು ಮಾಡವ ಕಲೆಯನ್ನು ಕರಗತ ಮಾಡಿಕೊಂಡಿರುವ ಇವರು ಸದ್ಯ ನೆಟ್ಫ್ಲಿಕ್ಸ್ನಲ್ಲಿ ತಮ್ಮದೇ ಹವಾ ಕ್ರಿಯೇಟ್ ಮಾಡಿದ್ದಾರೆ.
ಸೌತ್ ಸೂಪರ್ ಸ್ಟಾರ್ ಸದ್ಯ 'ಮಹಾರಾಜ' ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಹಾರಾಜ ವಿಜಯ್ ಸೇತುಪತಿ ಅವರ 50 ನೇ ಚಿತ್ರ. ಈ ಚಿತ್ರ ಬೆಳ್ಳಿ ಪರದೆಯ ಮೇಲೆ ಸದ್ದು ಮಾಡುತ್ತಿರುವಾಗಲೇ ಒಟಿಟಿಗೆ ಬಂದಿದೆ. ವಿಜಯ್ ಸೇತುವಪತಿ ಅವರು ನೈಜ ನಟನೆಯನ್ನು ನೋಡಿ ಜನ ಕ್ಲೀನ್ ಬೋಲ್ಡ್ ಆಗಿದ್ದಾರೆ.

ಮಹಾರಾಜ ವಿಜಯ್ ಸೇತುಪತಿ ಅವರ ವೃತ್ತಿಜೀವನದ 50 ನೇ ಚಿತ್ರವಾಗಿದೆ
ಬರಹಗಾರ-ನಿರ್ದೇಶಕ ನಿತಿಲನ್ ಸ್ವಾಮಿನಾಥನ್ ಚಿತ್ರದ ಕಥೆಯನ್ನು ಹೆಣೆದು ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ. ಪ್ರತಿ ಕ್ಷಣವೂ ಸಸ್ಪೆನ್ಸ್ ಕಾಯ್ದುಕೊಳ್ಳುವಂಥ ಟ್ವಿಸ್ಟ್ ಗಳನ್ನು ಚಿತ್ರದಲ್ಲಿ ಸೇರಿಸಿದ್ದಾರೆ. ಈ ಚಿತ್ರದ ಮೂಲಕ ಅವರು ತಮ್ಮಲ್ಲಿರುವ ಕ್ಲಾಸಿಕ್ ನಿರ್ದೇಶನವನ್ನು ಸಹ ವಿಶ್ವಕ್ಕೆ ತೋರಿಸಿದ್ದಾರೆ. ಮಹಾರಾಜ ವಿಜಯ್ ಸೇತುಪತಿ ಅವರ ವೃತ್ತಿಜೀವನದ 50 ನೇ ಚಿತ್ರವಾಗಿದ್ದು, ಈ ಚಿತ್ರದ ಮೂಲಕ ಅವರು ನಟನೆಯಲ್ಲಿ ನಂಬರ್ ಒನ್ ಎಂದು ಸಾಬೀತುಪಡಿಸಿದ್ದಾರೆ ಮತ್ತು ಅವರಿಂದ ಈ ಸ್ಥಾನವನ್ನು ಕಸಿದುಕೊಳ್ಳುವುದು ಯಾರಿಂದಲೂ ಸಾಧ್ಯವಿಲ್ಲ.
ಒಟಿಟಿಯಲ್ಲಿ ನಂಬರ್ ಒನ್
ಈ ಚಿತ್ರವು ಜೂನ್ 14 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಿತ್ತು ಮತ್ತು ಈಗ ಬಿಡುಗಡೆಯಾದ ಸುಮಾರು ಒಂದು ತಿಂಗಳ ನಂತರ, ಇದು OTT ಗೆ ಬಂದಿದೆ. ಪ್ರೇಕ್ಷಕರಿಂದ ಈ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆಯನ್ನು ಸಿಕ್ಕಿದೆ. ಅದು ಸ್ವಲ್ಪ ಸಮಯದೊಳಗೆ OTT ನಲ್ಲಿ ನಂಬರ್ ಒನ್ ಸ್ಥಾನ ತಲುಪಿದೆ.

ವಿಜಯ್ ಸೇತುಪತಿ ಅಭಿನಯದ ಮಹಾರಾಜ ಚಿತ್ರವು OTT ಪ್ಲಾಟ್ಫಾರ್ಮ್ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ ಮತ್ತು ಈಗ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ನಲ್ಲಿ ಟ್ರೆಂಡಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಚಿತ್ರವು OTT ಪ್ಲಾಟ್ಫಾರ್ಮ್ನಲ್ಲಿ ಹಿಂದಿಯಲ್ಲಿಯೂ ಲಭ್ಯವಿದೆ, ಇದರಿಂದಾಗಿ ಹಿಂದಿ ಭಾಷಿಕರು ಸಹ ಈ ಚಿತ್ರವನ್ನು ಎಂಜಾಯ್ ಮಾಡಬಹುದಾಗಿದೆ.
ಮಹಾರಾಜರ ಕಥೆ
ವಿಜಯ್ ಸೇತುಪತಿ ಅಭಿನಯದ 'ಮಹಾರಾಜ' ಚಿತ್ರದ ಕಥೆಯು ಮಹಾರಾಜ ಎಂಬ ಸಲೂನ್ ನಡೆಸುವ ವ್ಯಕ್ತಿಯ ಸುತ್ತ ಹೆಣೆಯಲಾಗಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ಮಹಾರಾಜನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವನ ಮತ್ತು ಅವರ ಮಗಳ ಸುತ್ತಮುತ್ತಲಿನ ಕಥೆ ಹೆಣೆಯಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications