ಕನ್ನಡದಲ್ಲಿ ಅದ್ಭುತ ನಿರೂಪಣೆ ಮೂಲಕ ಸಮಾರಂಭಗಳಿಗೆ ವಿಶಿಷ್ಟ ಮೆರಗು ತಂದುಕೊಡುತ್ತಿದ್ದ ಅಪರ್ಣಾ: ಹುಲಿಕಲ್ ನಾಗರಾಜ್
ಕನ್ನಡದ ನಟಿ, ನಿರೂಪಕಿ, ರಾಜ್ಯ ರಾಜಧಾನಿ ಬೆಂಗಳೂರು ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ ಅವರು ಜುಲೈ 11ರಂದು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪರ್ಣಾ ಅಂತಿಮ ದರ್ಶನ ಪಡೆದಿರುವ ಸಿನಿ ತಾರೆಯರು, ರಾಜಕೀಯ ಗಣ್ಯರು ಅವರ ಜೊತೆಗಿನ ನೆನಪುಗಳನ್ನು ಹಂಚಿಕೊಳ್ಳುತ್ತಾ ಕಣ್ಣೀರಿಟ್ಟಿದ್ದಾರೆ. ಹಾಗೆಯೇ ಹುಲಿಕಲ್ ನಟರಾಜ್ ಕೂಡ ಸಂತಾಪ ಸೂಚಿಸಿದ್ದಾರೆ.
ನಾಡಿನ ಅತ್ಯಂತ ಪ್ರಖ್ಯಾತ ಬಹು ಭಾಷಾ ನಿರೂಪಕಿ, ಉತ್ತಮ ನಟಿ, ನಮ್ಮ ಪರಿಷತ್ತು ಮತ್ತು ಬಹು ಮುಖ್ಯ ಸಮಾರಂಭಗಳಲ್ಲಿ ತುಂಬಾ ಸೃಜನ ಶೀಲ ನಿರೂಪಕಿಯಾಗಿದ್ದರು. ಅಲ್ಲದೆ ಅನೇಕ ರಾಷ್ಟ್ರೀಯ ಸಮಾರಂಭಗಳಲ್ಲಿಯೂ ತನ್ನ ಸ್ಪಷ್ಟ ಹಾಗೂ ಸುಂದರ ಕನ್ನಡದಿಂದ ಸಮಾರಂಭಗಳಿಗೆ ಒಂದು ವಿಶಿಷ್ಟ ಮೆರುಗನ್ನು ತಂದುಕೊಡುತ್ತಿದ್ದ ಅಪರೂಪದ ಕಲಾವಿದೆ ಶ್ರೀಮತಿ ಅಪರ್ಣಾ ಅವರ ನಿಧನದ ಸುದ್ದಿ ತುಂಬಾ ಅಘಾತ ತಂದಿದೆ. ಆವರ ಕುಟುಂಬಕ್ಕೆ ದು:ಖ ತಡೆದುಕೊಳ್ಳುವ ಶಕ್ತಿ ತುಂಬೋಣ ಎಂದು ಹುಲಿಕಲ್ ನಟರಾಜ್ ಕಣ್ಣೀರಿಟ್ಟಿದ್ದಾರೆ.

1985ರಲ್ಲಿ ತೆರೆಗೆ ಬಂದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಸಣದ ಹೂವು ಸಿನಿಮಾ ಮೂಲಕ ಚಂದನವನಕ್ಕೆ ಅಪರ್ಣಾ ಟವರು ಆಗಮಿಸಿದ್ದು, ಬಳಿಕ ತುಂಬಾ ಚಿತ್ರಗಳಲ್ಲಿ ನಟನೆ ಮಾಡಿದರು. ಕಿರುತೆರೆಯಲ್ಲಿಯೂ ಗುರುತಿಸಿಕೊಂಡರು. ಆದರೆ, ಸಿನಿಮಾಗಳಿಗಿಂತ ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ನಿರೂಪಣೆ. ಸರಿಸುಮಾರು 7,000ಕ್ಕೂ ಹೆಚ್ಚು ವೇದಿಕೆ ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿದ್ದ ಹೆಗ್ಗಳಿಕೆ ಅಪರ್ಣಾ ಅವರದ್ದಾರೆ.
ಅಪರ್ಣಾ ಅವರು ಮೂಲತಃ ಚಿಕ್ಕಮಗಳೂರಿನ ಪಂಚನಹಳ್ಳಿಯವರು. ತಂದೆ ಕೆ.ಎಸ್. ನಾರಾಯಣಸ್ವಾಮಿ ಸಿನಿಮಾ ಪತ್ರಕರ್ತ. ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಅಪರ್ಣಾ, ಚಿಕ್ಕಂದಿನಿಂದಲೇ ಓದಿನಲ್ಲಿ ಮುಂದಿದ್ದು, ಶಾಲಾ ದಿನಗಳಲ್ಲಿಯೇ ವೇದಿಕೆ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದು, ನಿರೂಪಣೆಯ ಜವಾಬ್ದಾರಿ ಹೊತ್ತಿದ್ದರು. ಇನ್ನು ತಂದೆಯ ನಿಧನದ ಬಳಿಕ ಬೆಂಗಳೂರಿನ ಮಲ್ಲೇಶ್ವರಕ್ಕೆ ಬಂದು ನೆಲೆಸಿದ್ದು, ಬಳಿಕ ನಾಗರಾಜ್ ವಸ್ತಾರೆ ಜೊತೆಗೆ ವಿವಾಹ ಆದರು. ಆದರೆ, ಈ ಜೋಡಿಗೆ ಮಕ್ಕಳಾಗಿಲ್ಲ. ಆ ಕೊರಗೂ ಅಪರ್ಣಾ ಅವರನ್ನು ಕಾಡಿತ್ತು.
ಅವರು ಆಕಾಶವಾಣಿಯಲ್ಲಿ ನಿರೂಪಣೆ ಮಾಡಿ ಎಲ್ಲರ ಮನೆ ಮಾತಾಗಿದ್ದರಾಗಿದ್ದರು. 1993-2010ರ ವರೆಗೂ ಆಕಾಶವಾಣಿಯಲ್ಲಿ ಕೆಲಸ ಮಾಡಿದ ಅವರು, ಟಿ.ಎನ್ ಸೀತಾರಾಮ್ ಅವರ ಮಾಯಾಮೃಗ, ಮುಕ್ತ ಧಾರವಾಹಿಗಳಲ್ಲೂ ನಟನೆ ಮಾಡುವ ಅವಕಾಶವನ್ನು ಪಡೆದುಕೊಂಡರು. ಜೊತೆಗೆ ನಿರೂಪಣೆ, ಆರೋಗ್ಯ ಕಾರ್ಯಕ್ರಮಗಳು, ನೇರಪ್ರಸಾರ ಕಾರ್ಯಕ್ರಮಗಳು, ಸಂದರ್ಶನಗಳನ್ನೂ ನಡೆಸಿಕೊಟ್ಟರು. ಅಲ್ಲದೆ, ಸಿನಿಮಾಗಳಲ್ಲೂ ಕಾಣಿಸಿಕೊಂಡರು. ಮಜಾಟಾಕೀಸ್ ಮೂಲಕ ಇನ್ನೂ ಎತ್ತರಕ್ಕೆ ಬೆಳೆದರು.
-
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Bengaluru: ಬೆಂಗಳೂರಲ್ಲಿ ಟೀ ಶಾಪ್ನಲ್ಲಿ 10 ಭಾಷೆ ಮಾತನಾಡುವವರು ಸಿಗ್ತಾರೆ: ನಾರ್ಥಿ ಯುವತಿ ವೈರಲ್ ಪೋಸ್ಟ್ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ











Click it and Unblock the Notifications