ಕಾಂತಾರ-1 ಶೂಟಿಂಗ್ ವೇಳೆ ಆಗಿದ್ದೇನು? ಕ್ಲಾರಿಟಿ ಕೊಟ್ಟ ಹೊಂಬಾಳೆ ಫಿಲ್ಮ್ಸ್
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ ಚಾಪ್ಟರ್-1 (Kantara Chapter 1) ಚಿತ್ರೀಕರಣದ ಸಂದರ್ಭದಲ್ಲಿ ನಿನ್ನೆ ಭಾರೀ ಅನಾಹುತ ನಡೆದಿದೆ ಎಂದು ಹೇಳಲಾಗುತ್ತಿದೆ. ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ 30ಕ್ಕೂ ಹೆಚ್ಚು ಮಂದಿ ಇದ್ದ ದೋಣಿ ಮುಗುಚಿ ಬಿದ್ದಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವಿಚಾರವಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ (Hombale Films) ಸ್ಪಷ್ಟನೆ ನೀಡಿದೆ. ಕಾಂತಾರ ಶೂಟಿಂಗ್ ವೇಳೆ ನಿಜಕ್ಕೂ ನಡೆದಿದ್ದೇನು ಎಂಬುದನ್ನೂ ವಿವರಿಸಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಮೇಲಿನ ಕೊಪ್ಪದ ಮಾಣಿ ಹಿನ್ನೀರಿನ ಪ್ರದೇಶದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ದೋಣಿ ಮುಗುಚಿತ್ತು ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಈ ಬಗ್ಗೆ ಹೊಂಬಾಳೆ ಫಿಲಂಸ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅಸಲಿಗೆ ನಿನ್ನೆ ಶೂಟಿಂಗ್ ವೇಳೆ ನಡೆದಿದ್ದೇನು ಎಂದು ವಿವರಿಸಿದ್ದಾರೆ.

ಶನಿವಾರ ಸಂಜೆ ಭಾರಿ ಗಾಳಿ ಹಾಗೂ ಮಳೆಯಿಂದಾಗಿ ಶೂಟಿಂಗ್ಗಾಗಿ ಹಾಕಲಾಗಿದ್ದ ಶಿಪ್ ಸೆಟ್ ಹಾನಿಗೆ ಒಳಗಾಗಿದೆ. ನಾವು ಹಿನ್ನೀರಿನ ಭಾಗದಲ್ಲಿ ಯಾವುದೇ ಶೂಟಿಂಗ್ ನಡೆಸಿಲ್ಲ. ಶಿಪ್ ಸೆಟ್ ಹಾಕಿ ಶೂಟಿಂಗ್ ಮಾಡಲಾಗಿದೆ. ಕೊಪ್ಪದ ಮಾಣಿ ಹಿನ್ನೀರಿನ ಪ್ರದೇಶದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಈ ಘಟನೆ ನಡೆದ ಜಾಗಕ್ಕೂ ಶೂಟಿಂಗ್ ನಡೆದ ಜಾಗಕ್ಕೂ ಬಹಳ ಅಂತರವಿದೆ. ಸುದ್ದಿ ಹರಿದಾಡಿದಂತೆ ಇಲ್ಲಿ ಯಾವುದೇ ದುರಂತ ನಡೆದಿಲ್ಲ. ನಟರು ಸಹನಟರೆಲ್ಲರೂ ಆರೋಗ್ಯವಾಗಿದ್ದಾರೆ. ನೀರಿನ ಭಾಗದಲ್ಲಿ ನಮ್ಮ ಯಾವುದೇ ಚಿತ್ರೀಕರಣ ಇಲ್ಲ. ಇಂದು (ಭಾನುವಾರ) ಕೂಡ ಶೂಟಿಂಗ್ ನಡೆಯುತ್ತಿದೆ. ಇಲ್ಲಿ ಶೂಟಿಂಗ್ ನಡೆಸಲು ಸ್ಥಳೀಯ ಪಂಚಾಯಿತಿ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟವರಿಂದ ಎಲ್ಲ ರೀತಿಯ ಅನುಮತಿ ಪಡೆದುಕೊಂಡಿದ್ದೇವೆ ಎಂದೂ ಅವರು ಸ್ಪಷ್ಟನೆ ನೀಡಿದ್ದಾರೆ.
ನೀರಿನ ಭಾಗದಲ್ಲಿ ನಮ್ಮ ಯಾವುದೇ ಶೂಟಿಂಗ್ ಇಲ್ಲ. ಆದರೂ ನಾವು ಭದ್ರತಾ ಕ್ರಮಗಳನ್ನು ಪಾಲಿಸಿದ್ದೇವೆ. ಬೋಟ್ಗಳು, ಮೀನುಗಾರರು, ಈಜುಪಟುಗಳು, ಸ್ಕೂಬಾ ಡೈವರ್ಸ್, ಲೈಫ್ ಜಾಕೆಟ್ ಸೇರಿದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ನಾವು ಹಾಕಿದ್ದ ಸೆಟ್ನಲ್ಲಿದ್ದ ಶಿಪ್ ಮಳೆ, ಗಾಳಿಗೆ ಪಲ್ಟಿ ಹೊಡೆದಿದೆ. ಆಗ ಅಲ್ಲಿ ಯಾರೂ ಇರಲಿಲ್ಲ. ಅಲ್ಲಿಂದ ಶೂಟಿಂಗ್ ನಡೆಯುತ್ತಿದ್ದ ಸ್ಥಳ ದೂರವಿದೆ. ಇನ್ನು ಸಿನಿಮಾ ಸೆಟ್ನ ವಸ್ತುಗಳು ನೀರಿನಲ್ಲಿ ಮುಳುಗಿ ಹಾಳಾಗಿವೆ ಎನ್ನುವುದು ಕೂಡು ಸುಳ್ಳು. ಇಂದು ಎಂದಿನಂತೆಯೇ ಶೂಟಿಂಗ್ ಮುಂದುವರಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಿನ್ನೆ ಶೂಟಿಂಗ್ ವೇಳೆ ಚಿತ್ರತಂಡದವರಿದ್ದ ದೋಣಿ ಮುಗುಚಿತ್ತು. ಇದರಲ್ಲಿ ರಿಷಬ್ ಶೆಟ್ಟಿ ಕೂಡ ಇದ್ದರು. ನೀರಿನಲ್ಲಿ ದೋಣಿ ಮುಗುಚಿ ಬಿದ್ದಿದ್ದರಿಂದ ಎಲ್ಲರೂ ನೀರಿನಲ್ಲಿ ಈಜಿಕೊಂಡು ಪ್ರಾಣ ಉಳಿಸಿಕೊಂಡಿದ್ದರು ಎಂದು ನಿನ್ನೆ ಸುದ್ದಿ ಹರಿದಾಡಿತ್ತು. ಇಂದು ಹೊಂಬಾಳೆ ಫಿಲ್ಮ್ಸ್ ಈ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications