ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ.. ಪವಿತ್ರಾಗೌಡ ಏನಾಗ್ಬೇಕು?-ಮಾಹಿತಿ, ವಿವರ

ನಟಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪದ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್‌ ಬಂಧನವಾಗಿದ್ದು ಒಂದು ಕಡೆಯಾದರೆ, ಮತ್ತೊಂದೆಡೆ ವಿಚಾರಣೆ ವೇಳೆ ಈ ಪವಿತ್ರಗೌಡ ಎನ್ನುವವರು ದರ್ಶನ್‌ಗ ಏನಾಗಬೇಕು ಎನ್ನುವ ಪ್ರಶ್ನೆಗಳು ಹೊಟ್ಟಿಕೊಂಡಿದ್ದವು. ಇನ್ನು ಈ ಬಗ್ಗೆ ವಕೀಲರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪವಿತ್ರ ಗೌಡ ಅವರು ನಟ ದರ್ಶನ್‌ನ ಸಹನಟಿ ಮಾತ್ರ. ಅವರು ಮದುವೆಯಾಗಿಲ್ಲ ಎಂದು ದರ್ಶನ್ ಪರ ವಕೀಲ ಅನಿಲ್ ಬಾಬು ಸ್ಪಷ್ಟನೆ ನೀಡಿದ್ದಾರೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾದರೆ, ನಟ ದರ್ಶನ್‌ ಎ2 ಆರೋಪಿಯಾಗಿದ್ದಾನೆ.

What is the relationship between actor Darshan and Pavithra Gowda know details

ಚಿತ್ರದುರ್ಗದ ನಿವಾಸಿ ರೇಣುಕಸ್ವಾಮಿ (33) ಅವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ 14 ಜನರನ್ನು ಈ ವಾರದ ಆರಂಭದಲ್ಲಿ ಬಂಧಿಸಲಾಗಿತ್ತು. ತನಿಖೆಯ ವೇಳೆ ರೇಣುಕಾಸ್ವಾಮಿ ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಬಳಿಕ ನಟ ದರ್ಶನ್ ಮತ್ತು ಗ್ಯಾಂಗ್‌ ರೇಣುಕಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಶೆಡ್‌ನಲ್ಲಿ ಕೂಡುಹಾಕಿ ಬರ್ಬರವಾಗಿ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂದು ತಿಳಿದುಬಂದಿತ್ತು.

ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್ ಪರ ವಕೀಲ ಅನಿಲ್ ಬಾಬು, ದರ್ಶನ್ ಬಂಧನದ ನಂತರ ಎರಡು ಬಾರಿ ಭೇಟಿಯಾಗಿದ್ದೇನೆ. ಕೆಲವರು ಪವಿತ್ರಾ ಗೌಡ ಅವರನ್ನು ದರ್ಶನ್ ಅವರ ಪತ್ನಿ ಎಂದು ಹೇಳಿರುವುದಕ್ಕೆ ಅವರ ಪತ್ನಿ ವಿಜಯಲಕ್ಷ್ಮಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ವಿಜಯಲಕ್ಷ್ಮಿ ಅವರು ಕಾನೂನುಬದ್ಧವಾಗಿ ದರ್ಶನ್‌ ಅವರನ್ನು ವಿವಾಹವಾದ ಪತ್ನಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಬೇರೆ ಯಾರೂ ಅವರಿಗೆ ಪತ್ನಿ ಇಲ್ಲ ಎಂದು ಮಾಧ್ಯಮಗಳಿಗೆ ಮತ್ತು ಕರ್ನಾಟಕದ ಜನರಿಗೆ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಅನಿಲ್ ಬಾಬು ಹೇಳಿದ್ದಾರೆ.

ಈ ದಂಪತಿಗೆ ಒಬ್ಬ ಮಗನಿದ್ದಾನೆ, ಪವಿತ್ರಾ ಗೌಡ ದರ್ಶನ್ ಅವರ ಸಹ ಕಲಾವಿದೆ ಮತ್ತು ಸ್ನೇಹಿತೆಯಾಗಿದ್ದು, ಅವರ ನಡುವೆ ಯಾವುದೇ ಸಂಬಂಧವಿಲ್ಲ. ದರ್ಶನ್ ಅವರ ಪತ್ನಿ ಪವಿತ್ರಾ ಗೌಡ ಎಂದು ಪೊಲೀಸರು ಮತ್ತು ಅಧಿಕಾರಿಗಳು ಕೇಳಿದಾಗ, ಅನಿಲ್ ಬಾಬು ಅವರು ತಪ್ಪಾಗಿ ಹಾಗೆ ಮಾಡಿದ್ದಾರೆ ಎಂದು ಹೇಳಿದರು.

ಪವಿತ್ರಾ ಗೌಡ ಅವರು ದರ್ಶನ್ ಅವರ ಪತ್ನಿ ಎಂದು ಸಾಬೀತುಪಡಿಸಲು ಯಾವುದೇ ದಾಖಲೆಗಳಿಲ್ಲ. ಅವರು ಮದುವೆಯಾಗಿದ್ದರೆ, ಕೆಲವು ದಾಖಲೆಗಳು ಇರಬೇಕಾಗಿತ್ತು. ಆದರೆ ಅವರು ದರ್ಶನ್ ಅವರ ಪತ್ನಿ ಎಂದು ತೋರಿಸಲು ಏನೂ ಇಲ್ಲ ಎಂದು ಅನಿಲ್ ಬಾಬು ಹೇಳಿದ್ದಾರೆ.

"ದರ್ಶನ್ ಒಬ್ಬರನ್ನು ಮಾತ್ರ ಮದುವೆಯಾಗಿದ್ದಾರೆ, ಅದು ವಿಜಯಲಕ್ಷ್ಮಿ" ಅವರನ್ನು ಎಂದು ಹೇಳಿದರು. ಇನ್ನು ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಬಗ್ಗೆ ಮಾತನಾಡಿದ ಅನಿಲ್ ಬಾಬು ಅವರು, "ಅವರು ಚೆನ್ನಾಗಿಯೇ ಇದ್ದಾರೆ. ಪೊಲೀಸರ ಸಮ್ಮುಖದಲ್ಲಿ ನಾವು ಅವರ ಆರೋಗ್ಯ ಸ್ಥಿತಿ, ಇತ್ಯಾದಿ ಪ್ರಶ್ನೆಗಳನ್ನು ಕೇಳಲು ಸಾಧ್ಯವಿಲ್ಲ. ದರ್ಶನ್ ಅವರ ಭುಜ ಮತ್ತು ಪಾದದಲ್ಲಿ ನೋವು ಇತ್ತು," ಎಂದು ತಿಳಿಸಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+