ಚಂದನ್ ಶೆಟ್ಟಿ-ನಿವೇದಿತಾ ಗೌಡ ಮಧ್ಯ ಹುಳಿ ಹಿಂಡಿದ್ಯಾರು?: ಪ್ರಥಮ್ ಬಿಚ್ಚಿಟ್ಟ ಸತ್ಯವೇನು?
ಕನ್ನಡ ಮನೋರಂಜನಾ ಲೋಕದ ಕ್ಯೂಟ್ ಜೋಡಿ ಎನಿಸಿಕೊಂಡಿದ್ದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದಾರೆ. ನಿನ್ನೆ ಜೂನ್ 07ರ ಸಂಜೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಡಿವೋರ್ಸ್ ವಿಚಾರ ಭಾರೀ ಬಿರುಗಾಳಿಯನ್ನೇ ಎಬ್ಬಿಸಿತ್ತು.
ಮೊದಲು ಇದು ಸುಳ್ಳು ಸುದ್ದಿ ಎನ್ನಲಾಗಿತ್ತು. ಬಳಿಕ ಸಿನಿಮಾ ಪ್ರಮೋಷನ್ಗೆ ಹೀಗೆ ಮಾಡಿರಬಹುದು ಎಂದುಕೊಳ್ಳಲಾಗಿತ್ತು. ಆದರೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಂಪತಿ ದಿಢೀರ್ ಶಾಕ್ ಕೊಟ್ಟಿದ್ದು, ತಾವು ಪರಸ್ಪರ ಒಪ್ಪಿ ದೂರಾಗುತ್ತಿರುವ ಬಗ್ಗೆ ಅಧೀಕೃತವಾಗಿ ತಿಳಿಸಿದ್ದಾರೆ.

ಚಂದನ್ ಹಾಗೂ ನಿವೇದಿತಾ ವಿಚ್ಛೇದನಕ್ಕಾಗಿ ಗುರುವಾರ ಶಾಂತಿನಗರದ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ಇಬ್ಬರೂ ಮತ್ತೆ ಕೋರ್ಟ್ಗೆ ಹಾಜರಾಗಿದ್ದು, ಕೋರ್ಟ್ ವಿಚ್ಛೇದನವನ್ನು ಕೂಡ ಮಂಜೂರು ಮಾಡಿದೆ. ಬಳಿಕ ಇಬ್ಬರೂ ಕೈ ಕೈ ಹಿಡಿದುಕೊಂಡು ಕೋರ್ಟ್ನಿಂದ ಹೊರ ನಡೆದಿದ್ದಾರೆ.
ಕಳೆದ ಒಂದು ವಾರದ ಹಿಂದೆ ಜೊತೆಯಾಗಿ ಕಾಣಿಸಿಕೊಂಡಿದ್ದ ಜೋಡಿ, ವಿಚ್ಛೇದನ ಬಳಿಕವೂ ಕೈ ಕೈ ಹಿಡಿದುಕೊಂಡು ಕೋರ್ಟ್ನಿಂದ ಹೊರ ಬಂದ ಜೋಡಿ ದೂರಾಗುವ ನಿರ್ಧಾರ ಯಾಕೆ ಮಾಡಿದರು. ಇಬ್ಬರ ಮಧ್ಯ ಬಿರುಕು ತಂದವರ್ಯಾರು ಎನ್ನುವುದು ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.

ಈ ಬಗ್ಗೆ ಚಂದನ್ ಶೆಟ್ಟಿ ಆಪ್ತ ಬಿಗ್ಬಾಸ್ ವಿನ್ನರ್ ಪ್ರಥಮ್ ಮಾತನಾಡಿದ್ದಾರೆ. 'ಈಗಿನ ಕಾಲದಲ್ಲಿ ಬದುಕೋದು ತುಂಬಾ ಕಷ್ಟ. ಲೈಫ್ ಸರಿ ಇಲ್ಲ. ಹೋದ ವಾರ ಸರಿ ಇದ್ದವರು ಈಗ ಹೀಗಾಗಿದೆ ಅಂದರೆ ಮಧ್ಯ ಯಾರೋ ಕೈ ಆಡಿಸಿರುತ್ತಾರೆ. ಯಾರೋ ಮಧ್ಯ ಬರದೇ ಹೀಗೆ ಆಗಿಲ್ಲ. ಯಾರೋ ಕಿವಿ ಚುಚ್ಚುವವರು ಇರುತ್ತಾರೆ. ಅವನು ಹಂಗೆ..ಇವಳು ಹಿಂಗೆ ಎನ್ನುವವರು ಇರುತ್ತಾರೆ. ಈ ರೀತಿ ಮಾತನಾಡಿ ಅವರಿಬ್ಬರ ಮಧ್ಯ ಬಿರುಕು ತಂದಿದ್ದಾರೆ ಎನ್ನುವುದು ಪ್ರಥಮ್ ಅವರ ಅಭಿಪ್ರಾಯವಾಗಿದೆ.
ಇನ್ನು ಈ ರೀತಿಯಾಗಿ ಡಿಸ್ಟರ್ಬ್ ಆಗಬೇಡಿ. ನೀವಿಬ್ಬರು ನಮ್ಮವರು. ನಾನು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಗೆ ಕೇಳಿ ಕೊಳ್ಳುತ್ತೇನೆ. ನೀವು ಕೆಟ್ಟರೆ, ಜೀವನಕ್ಕೆ ತೊಂದರೆ ಮಾಡಿಕೊಂಡರೆ ಸಂತೋಷಪಡುವರು ಸಾವರಿರಾರು ಜನ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇವನಿಗೆ ಹೀಗೆ ಆಗಬೇಕಿತ್ತು. ಅವಳಿಗೆ ಹಾಗೇ ಆಗಬೇಕಿತ್ತು ಎಂದು ಖುಷಿ ಪಡುವವರಿದ್ದಾರೆ. ಜನ ಒಳ್ಳೆಯವರಿಲ್ಲ ಅರ್ಥ ಮಾಡಿಕೊಳ್ಳಿ ಎಂದರು.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications