Kamal Haasan: ಭಾಷೆ ಹೇರಿಕೆಯಿಂದ ಯಾರು ಕಲಿಯಲ್ಲ.... ಈ ವಿಚಾರದಲ್ಲಿ ನಾನು ಕನ್ನಡಪರ ಎಂದ ಕಮಲ್ ಹಾಸನ್!
Kamal Haasan: ಒಂದು ಭಾಷೆಯನ್ನು ಹೇರಿಕೆ ಮಾಡಿದರೆ ಯಾರು ಕಲಿಯುತ್ತಾರೆ ಅಂತ ನಟ ಕಮಲ್ ಹಾಸನ್ ಅವರು ಪ್ರಶ್ನೆ ಮಾಡಿದ್ದಾರೆ. ಅವರು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಭಾಷಾ ವಿಚಾರವಾಗಿ ಮಾತನಾಡಿರುವ ಶೇ 90 ವಿಷಯಗಳು ಭಾಷಾ ವಿವಾದ ಸ್ವರೂಪವನ್ನೇ ಪಡೆದುಕೊಂಡಿವೆ. ತಮಿಳು ಭಾಷೆಯಿಂದಲೇ ಕನ್ನಡ ಉದಯಿಸಿದೆ. ಕನ್ನಡದ ತಾಯಿ ತಮಿಳು ಅಂತ ನಟ ಕಮಲ್ ಹಾಸನ್ ಹೇಳಿರುವ ವಿವಾದ ಇನ್ನೂ ತಣ್ಣಗಾಗಿಲ್ಲ. ಈ ರೀತಿ ಇರುವಾಗಲೇ ಮತ್ತೊಂದು ಹೇಳಿಕೆಯನ್ನು ನೀಡುವ ಮೂಲಕ ಮತ್ತೆ ಚರ್ಚೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಅಭಿಯಾನ ಜೋರಾಗಿದೆ. ಕರ್ನಾಟಕಕ್ಕೆ ಬರುವವರು ಹಿಂದಿ ಕಲಿಯಬೇಕು ಎಂದು ಒತ್ತಾಯಿಸಲಾಗುತ್ತಿದೆ. ಈ ರೀತಿ ಇರುವಾಗಲೇ ನಾನು ಹಿಂದಿ ಏಕೆ ಕಲಿತೆ ಹಾಗೂ ಹೇರಿಕೆಯಿಂದ ಯಾರೂ ಯಾವುದೇ ಭಾಷೆ ಕಲಿಯಲ್ಲ ಎನ್ನುವ ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಭಾಷೆಯ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ಅವರು ಒಂದಿಲ್ಲೊಂದು ಹೇಳಿಕೆಗಳನ್ನು ಕೊಡುತ್ತಲ್ಲೇ ಇದ್ದಾರೆ. ಮೊದಲನೆಯದಾಗಿ ನಿಮ್ಮ ಸುತ್ತಮುತ್ತಲಿನ ರಾಜ್ಯಗಳ ಭಾಷೆ ಕಲಿಯಿರಿ ಆ ಮೇಲೆ ಹಿಂದಿ ಕಲಿಯುವಿರಂತೆ ಅಂತ ಹೇಳಿದ್ದರು. ಇದಾದ ಮೇಲೆ ತಮಿಳಿನಿಂದ ಕನ್ನಡ ಬಂದಿದೆ ಎಂದಿದ್ದರು. ಇದೀಗ ನಾನ್ಯಾಕೆ ಹಿಂದಿ ಕಲಿತೆ ಹಾಗೂ ಭಾಷೆ ಹೇರಿಕೆಯ ವಿಚಾರವಾಗಿ ಅವರು ಮಾತನಾಡಿದ್ದಾರೆ. ಈ ಮೂಲಕ ಒಂದೂವರೆ ತಿಂಗಳ ಅವಧಿಯಲ್ಲಿ ಅವರು ಭಾಷಾ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಹೇಳಿಕೆಗಳನ್ನು ಕೊಟ್ಟಂತೆ ಆಗಿದೆ.

ಕಮಲ್ ಹಾಸನ್ ಅವರು ನಟರಷ್ಟೇ ಅಲ್ಲ ಅವರು ತಮಿಳುನಾಡಿನ ಉದಯೋನ್ಮುಖ ಪಕ್ಷದ ರಾಜಕಾರಣಿಯೂ ಹೌದು ಹೀಗಾಗಿ ಅವರು ನೀಡುವ ಹೇಳಿಕೆಗಳನ್ನು ರಾಜಕಾರಣಿಯೊಬ್ಬರ ಮಾತುಗಳಂತೆಯೂ ಗಮಿಸಲಾಗುತ್ತದೆ. ಇವರು ಇದೀಗ ಅಲ್ಲಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯಸಭೆ ಪ್ರವೇಶ ಮಾಡುವ ತರಾತುರಿಯಲ್ಲಿ ಇದ್ದಾರೆ. ಹೀಗಾಗಿ ಅವರು ಭಾಷೆಯ ಬಗ್ಗೆ ಕೊಡುತ್ತಿರುವ ಹೇಳಿಕೆಗಳು ಭಾರೀ ಚರ್ಚೆಗೆ ಕಾರಣವಾಗಿದೆ.
ಯಾವುದೇ ಭಾಷೆಯನ್ನು ಹೇರಿಕೆ ಮಾಡಿದರೆ ಯಾರೂ ಕಲಿಯುವುದಿಲ್ಲ. ಅನಿವಾರ್ಯತೆ ಸೃಷ್ಟಿಯಾದರೆ ಮಾತ್ರ ಕಲಿಯುತ್ತಾರೆ ಎಂದಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದ್ದಾರೆ. 1981ರ ಹಿಟ್ ಹಿಂದಿ ಚಿತ್ರ ಏಕ್ ದುಜೇ ಕೆ ಲಿಯೆ ಬಗ್ಗೆ ಚರ್ಚೆ ನಡೆದಿದ್ದು ಆ ವೇಳೆ ಭಾಷೆ ಹಾಗೂ ಭಾಷೆ ಹೇರಿಕೆಯ ಬಗ್ಗೆಯೂ ಮಾತನಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಹಿಂದಿ ಹೇರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು ಎನ್ನುವ ಪ್ರಶ್ನೆಗೆ ನಾನು ಈ ವಿಚಾರದಲ್ಲಿ ಪಂಜಾಬ್ನ ಪರವಾಗಿ ನಿಲ್ಲುತ್ತೇನೆ. ಅಲ್ಲದೇ ಕರ್ನಾಟಕದ ಪರವಾಗಿ & ಆಂಧ್ರ ಪರವಾಗಿ ನಿಲ್ಲುತ್ತೇನೆ ಎಂದೂ ಸೇರಿಸಿದ್ದಾರೆ.
ಭಾಷೆಯನ್ನು ನಾವು ಯಾವುದೇ ಹೇರಿಕೆ ಇಲ್ಲದೆ ಇದ್ದಾಗ ಮಾತ್ರ ಕಲಿಯುತ್ತೇವೆ. ಅಂತಿಮವಾಗಿ ಶಿಕ್ಷಣದ ಬಗ್ಗೆ ಮಾತನಾಡಬೇಕು. ಆ ದಾರಿಯಲ್ಲಿ ಅಡೆತಡೆಗಳು ಇರಬಾರದು ಎಂದಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications