ನಟಿ ಸರೋಜಾದೇವಿಗೆ ತಮಿಳುನಾಡು ಸಿಎಂ ಆಗುವ ಅವಕಾಶ ಕೈತಪ್ಪಿದ್ದು ಹೇಗೆ?
B.Saroja Devi Passes Away:ಪದ್ಮಭೂಷಣ ಪುರಸ್ಕೃತ ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನರಾಗಿದ್ದು, ಇಡೀ ಚಿತ್ರರಂಗ ಶೋಕದಲ್ಲಿದೆ. 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿ "ಅಭಿನಯ ಸರಸ್ವತಿ" ಎಂದೇ ಹೆಸರುವಾಸಿಯಾಗಿದ್ದ ಅವರು ತಮ್ಮ ಅಮೋಘ ನಟನೆಯಿಂದ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ತಮಿಳು ಚಿತ್ರರಂಗದಲ್ಲೂ ಸರೋಜಾದೇವಿ ಅವರು ಟಾಪ್ ನಟಿಯಾಗಿ ಮಿಂಚಿದ್ದರು. ಅಲ್ಲದೆ ಇವರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗುವ ಅವಕಾಶವೂ ಅರಸಿ ಬಂದಿತ್ತು, ಕೊನೆಯ ಸಮಯದಲ್ಲಿ ಅವಕಾಶ ಕೈತಪ್ಪಿತ್ತು ಎಂಬ ವಿಚಾರ ಬಹಿರಂಗವಾಗಿದೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಈ ವಿಚಾರವನ್ನು ಹೇಳಿದ್ದಾರೆ. ಸರೋಜಾದೇವಿ ಅವರು ಕರ್ನಾಟಕದವರೇ, ಕನ್ನಡಿಗರೇ, ಅವರು ಕನ್ನಡ ಚಿತ್ರಗಳಿಗಿಂತ ಹೆಚ್ಚಾಗಿ ತಮಿಳು ಚಿತ್ರಗಳಲ್ಲಿ ನಟಿಸಿದ್ದರು. ಇವರು ಸಿನಿಮಾರಂಗಕ್ಕೆ ಬರುವ ಮುನ್ನ ರಾಜ್ಯ ಕಂಡಂತಹ ಮಹಾನ್ ಸಂಗೀತಕಾರರಾದ ಹೊನ್ನಪ್ಪ ಭಾಗವತರು ಅವರ ಹತ್ತಿರ ಸಂಗೀತ ಕಲಿಯುತ್ತಿದ್ದರು. ಅವರೇ ಇವರನ್ನು ಸಿನಿಮಾರಂಗಕ್ಕೆ ಪರಿಚಯಿಸಿದ್ದರು ಎಂದು ನೆನೆದಿದ್ದಾರೆ.

ಇವರು ತಮಿಳುನಾಡಿನಲ್ಲಿ ಎಂ.ಜಿ.ರಾಮಚಂದ್ರನ್ ಅವರ ಜೊತೆ ಹಲವು ವರ್ಷಗಳ ಕಾಲ ನಟಿಸಿದ್ದರು. ಲೆಕ್ಕಾಚಾರವಾಗಿ ಹೇಳುವುದಾದರೆ ಸರೋಜಾದೇವಿ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ಅಷ್ಟೊತ್ತೊಗೆ ಜೆ.ಜಯಲಲಿತಾ ಅವರು ಅಲ್ಲಿಗೆ ಬಂದರು. ಹೀಗೆ ತಮಿಳು ಚಿತ್ರರಂಗದಲ್ಲಿಯೂ ಹಲವು ವರ್ಷಗಳ ಕಾಲ ಸಿನಿಮಾಗಳಲ್ಲಿ ಸರೋಜಾದೇವಿ ಮಿಂಚಿದ್ದರು ಎಂದು ವಾಟಾಳ್ ಹೇಳಿದ್ದಾರೆ.
ಆಗ ನಾಡು ಕಂಡ ಆದರ್ಶ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಜೊತೆ ಸರೋಜಾದೇವಿ ಅವರ ಮದುವೆಯಾಗುತ್ತೆ ಎನ್ನುವ ಚಿಂತನೆಯೂ ನಡೆದಿತ್ತು. ಇವರು ಚನ್ನಪಟ್ಟಣ, ಅವರು ಮದ್ದೂರಿನವರಾಗಿದ್ದರಿಂದ ಈ ಸುದ್ದಿಯೂ ಹರಡಿತ್ತು. ಇವರ ಚಿಂತನೆ ನಮ್ಮ ನಾಡಿನಲ್ಲಿ ಅದ್ಭುತ ಕೆಲಸ ಮಾಡಿದ್ದಾರೆ. ನಿಜಕ್ಕೂ ಇವರ ನಿಧನದಿಂದ ನಮ್ಮ ನಾಡಿಗೆ ಅಪಾರವಾಗಿ ನೋವಾಗಿದೆ. ಮೂರು ವರ್ಷದ ಹಿಂದೆ ನನ್ನೊಂದಿಗೆ ಅವರು ಫೋನ್ನಲ್ಲಿ ಮಾತನಾಡಿದ್ರು. ಇಂದು ಅವರ ನಿಧನದ ಸುದ್ದಿ ಕೇಳಿ ತುಂಬಾ ನೋವಾಯಿತು ಎಂದಿದ್ದಾರೆ.

ಐವತ್ತು ವರ್ಷದ ಹಿಂದೆ ಇವರ ಕಿತ್ತೂರು ರಾಣಿ ಚೆನ್ನಮ್ಮ ಸಿನಿಮಾದಲ್ಲಿ ಇವರು ಚೆನ್ನಮ್ಮನ ಪಾತ್ರ ಅದ್ಭುತವಾಗಿ ನಿರ್ವಹಿಸಿದ್ದರು. ಅಂದು ಸುಭಾಷ್ ಚಂದ್ರ ಬೋಸ್ ಅವರ ಪುತ್ರಿ ಕೂಡ ಈ ಸಿನಿಮಾ ನೋಡಲು ಬಂದಿದ್ದರು. ಅದು ಇಡೀ ನಾಡಿನ ಮಹಾನ್ ನಾಯಕನ ಒಬ್ಬ ಮಗಳು ಕಿತ್ತೂರು ರಾಣಿ ಚೆನ್ನಮ್ಮನ ಸಿನಿಮಾ ನೋಡಲು ಬಂದ್ರು ಅಂದ್ರೆ ನಿಜಕ್ಕೂ ಸರೋಜಾದೇವಿ ಅವರಿಗೆ ಸಿಕ್ಕ ದೊಡ್ಡ ಗೌರವ ಎಂದು ನೆನೆದಿದ್ದಾರೆ.
ದಶಾವರದಲ್ಲಿ ಅಂತ್ಯಕ್ರಿಯೆ
ಬಿ.ಸರೋಜಾದೇವಿ ಅವರ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ಮಂಗಳವಾರ (ಜು.15) ಅಂತ್ಯಕ್ರಿಯೆ ನಡೆಯಲಿದೆ. ನಾಳೆ ಬೆಳಿಗ್ಗೆ 11:30ರವರೆಗೂ ಬೆಂಗಳೂರಿನ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇದೆ. ಬಳಿಕ ಪಾರ್ಥಿವ ಶರೀರ ಚನ್ನಪಟ್ಟಣಕ್ಕೆ ತೆರಳಲಿದೆ. ಅಲ್ಲಿ ದಶಾವರದ ಕಣ್ವ ಡ್ಯಾಂ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಅವರ ತಾಯಿ ರುದ್ರಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಬೇಕು ಎನ್ನುವುದು ಅವರ ಕೊನೆಯಾಸೆ ಎಂದಿದ್ದಾರೆ.
-
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
ಕೇರಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 9 ರಿಂದ ಮತದಾನ ಆರಂಭ , ಮೇ 4ಕ್ಕೆ ಫಲಿತಾಂಶ -
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ












Click it and Unblock the Notifications