Kendasampige: ಕೆಂಡಸಂಪಿಗೆ ಧಾರಾವಾಹಿಯಿಂದ ಕಾವ್ಯ ಹೊರ ಬಂದಿದ್ದೇಕೆ? ಅಸಲಿ ವಿಚಾರ ಬಿಚ್ಚಿಟ್ಟ ನಟಿ
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡಸಂಪಿಗೆ ಧಾರಾವಾಹಿ ದಿನದಿಂದ ದಿನಕ್ಕೆ ಇಂಟ್ರಸ್ಟಿಂಗ್ ಅನಿಸುತ್ತಿದ್ದು, ಕಥೆ ರೋಚಕ ತಿರುವಿನತ್ತ ಸಾಗುತ್ತಿದ್ದೆ. ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ಈ ಮಧ್ಯ ಧಾರಾವಾಹಿ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ವೀಕ್ಷಕರಿಗೆ ಬೇಸರ ತಂದಿದೆ.
ಕೆಂಡಸಂಪಿಗೆ ಧಾರಾವಾಹಿಯಲ್ಲಿ ನಾಯಕಿ ಸುಮನಾ ಆಗಿ ಅಭಿನಯಿಸುತ್ತಿದ್ದ ಕಾವ್ಯ ಶೈವ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈವರೆಗೂ ಸುಮನಾ ಆಗಿ ಕಿರುತೆರೆ ಪ್ರೇಕ್ಷಕರ ಮನಸು ಗೆದ್ದಿದ್ದ ಕಾವ್ಯ ಶೈವ ದಿಢೀರ್ ಧಾರಾವಾಹಿಯಿಂದ ಹೊರ ಬಂದಿದ್ದಾರೆ. ಸದ್ಯ ಸುಮನಾ ಪಾತ್ರಕ್ಕೆ ಹೊಸ ನಟಿ ಬಂದಿದ್ದು, ಪ್ರೇಕ್ಷಕರು ಹಳೆಯ ಸುಮನಾ ಪಾತ್ರವನ್ನು ಮೆಚ್ಚಿಕೊಂಡಿದ್ದರು.

ಧಾರಾವಾಹಿ ಉತ್ತಮವಾಗಿ ವೀಕ್ಷಣೆ ಕಾಣುತ್ತಿರುವಾಗಲೇ ಸುಮನಾ ಪಾತ್ರಧಾರಿಯನ್ನು ಏಕೆ ಬದಲಾಯಿಸಲಾಯಿತು. ಅಥವಾ ಕಾವ್ಯ ಶೈವ ಧಾರಾವಾಹಿಯಿಂದ ಯಾಕೆ ಹೊರಬಂದರು ಎನ್ನುವ ಪ್ರಶ್ನೆ ಪ್ರೇಕ್ಷಕರನ್ನು ಕಾಡುತ್ತಿದೆ. ಹೀಗಾಗಿ ಸ್ವತಃ ನಟಿ ಕಾವ್ಯ ಶೈವ ಧಾರಾವಾಹಿಯಿಂದ ಹೊರ ಬಂದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಮಾಡಿರುವ ನಟಿ ಕಾವ್ಯ, 'ತುಂಬಾ ಜನ ಮೆಸೇಜ್ ಮಾಡಿದ್ದೀರಾ, ಎಲ್ಲರದೂ ಒಂದೇ ಪ್ರಶ್ನೆ. ನಾನು ಯಾಕೆ ಕೆಂಡಸಂಪಿಗೆ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎನ್ನುವುದು. ನಾನಾ ಕಾರಣದಿಂದ ನಾನು ಆ ಪ್ರಾಜೆಕ್ಟ್ನ ಕಂಪ್ಲೀಟ್ ಮಾಡೋಕೆ ಆಗಲಿಲ್ಲ. ಕ್ಷಮೆ ಇರಲಿ ಅದಕ್ಕೆ. ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದ್ರೂ ಆಗಲಿಲ್ಲ'

'ಈಗ ಎಷ್ಟು ಪ್ರೀತಿ ಕೊಡುತ್ತಿದ್ದೀರೋ ಮುಂದೆನೂ ಅದಕ್ಕಿಂತ ಜಾಸ್ತಿ ಪ್ರೀತಿ ಕೊಟ್ಟು ಸಪೋರ್ಟ್ ಮಾಡಿ. ಹಾಗೆ ನನಗೆಷ್ಟು ಪ್ರೀತಿ ಕೊಟ್ಟಿದ್ದೀರೋ ಹೊಸ ಸುಮನಾ ಪಾತ್ರಕ್ಕೂ ಅಷ್ಟೇ ಪ್ರೀತಿ ಹಂಚಿ ಅಂತಾ ಕೇಳಿಕೊಳ್ಳುತ್ತೇನೆ' ಎಂದು ನಟಿ ಕಾವ್ಯ ಶೈವ ವಿಡಿಯೋ ಮೂಲಕ ಕೆಂಡಸಂಪಿಗೆ ವೀಕ್ಷಕರಿಗೆ ಮನವಿ ಮಾಡಿಕೊಂಡಿದ್ದಾರೆ. ನಟಿ ಕಾವ್ಯ ಈ ವಿಡಿಯೋ ನೋಡಿದ ಅಭಿಮಾನಿಗಳು ಈ ಪಾತ್ರದಲ್ಲಿ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಕಮೆಂಟ್ ಮಾಡಿದ್ದಾರೆ.
ಇದೀಗ ಕಾವ್ಯಾ ಶೈವ ಅವರು ನಿರ್ವಹಿಸುತ್ತಿದ್ದ ಸುಮನ ಪಾತ್ರಕ್ಕೆ ಬೇರೊಬ್ಬರು ಆಯ್ಕೆಯಾಗಿದ್ದಾರೆ. ಈ ಹಿಂದೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜೇನುಗೂಡು ಎಂಬ ಧಾರಾವಾಹಿಯಲ್ಲಿ ಪ್ರಾಚಿ ಎಂಬ ಪಾತ್ರವನ್ನು ನಿರ್ವಹಿಸಿದ್ದರು ಮಧುಮಿತಾ ಇನ್ನು ಮುಂದೆ ಸುಮನಾ ಪಾತ್ರಕ್ಕೆ ಜೀವ ತುಂಬಲಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications