ನಮ್ ಮನೆ ವಿಷ್ಯಾ ರಮ್ಯಾ ಮಾತಾಡ್ಬೇಕಾ? ನನ್ ಮೊಮ್ಮಕ್ಕಳ ಬಗ್ಗೆ ಮಾತಾಡಿದ್ರೆ ಮಕ್ಕುಗಿತ್ತೀನಿ: ಯಶ್ ತಾಯಿ ಗರಂ
ನಟ ಯಶ್ ತಾಯಿ ಪುಷ್ಪಾ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟಿದ್ದಾರೆ. 'ಕೊತ್ತಲವಾಡಿ' ಸಿನಿಮಾ ನಿರ್ಮಿಸಿದ್ದು, ಪೃಥ್ವಿ ಅಂಬರ್ ನಟನೆಯ ಈ ಸಿನಿಮಾ ದೊಡ್ಡದಾಗಿ ಗೆಲ್ಲಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ಒಳ್ಳೆ ಸಿನಿಮಾಗಳನ್ನು ಮಾಡುವುದಾಗಿ ಪುಷ್ಪಾ ಭರವಸೆ ನೀಡಿದ್ದಾರೆ. ನಾನು ಹಣ ಮಾಡಲು ಸಿನಿಮಾ ರಂಗಕ್ಕೆ ಬಂದಿಲ್ಲ ಎಂದು ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಹೇಳಿದ್ದು, ಇನ್ನು ಒಳ್ಳೆ ಸಿನಿಮಾಗಳನ್ನು ಕೆಲವರು ಸೋಲಿಸುವ ಪ್ರಯತ್ನ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳಿಗೆ ಕೆಲವರು ಸುಳ್ಳು ರಿವ್ಯೂ ಹಾಕ್ತಾರೋ, ಸಿನಿಮಾಗಳನ್ನು ಕೊಲ್ಲುವ ಕೆಲಸ ಮಾಡುತ್ತಾರೆ ಎಂದು ನಿರ್ಮಾಪಕಿ ಪುಷ್ಪಾ ಅರುಣ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿ ದರ್ಶನ್ ಮತ್ತು ಪವಿತ್ರ ಗೌಡ ಸೇರಿ ಹಲವರನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ಆರೋಪಿಗಳೆಲ್ಲಾ ಹೊರಬಂದಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಸ್ಯಾಂಡಲ್ವುಡ್ ಕ್ವೀನ್ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ನ್ಯಾಯದ ಪರ ಹಾಕಿದ ಒಂದು ಪೋಸ್ಟ್ನಿಂದಾಗಿ ದರ್ಶನ್ ಫ್ಯಾನ್ಸ್ಗಳು ರೊಚ್ಚಿಗೆದ್ದಿದ್ರು, ಈ ವಿಚಾರ ಸ್ಯಾಂಡಲ್ವುಡ್ ನಲ್ಲಿ ಭಾರೀ ಸದ್ದು ಮಾಡಿತ್ತು. ದರ್ಶನ್ ಅಭಿಮಾನಿಗಳ ವಿರುದ್ದ ಬಿಸಿ ಮುಟ್ಟಿಸಿದ್ದ ನಟಿ ರಮ್ಯಾ ಸರಿಯಾದ ಪಾಠ ಕಲಿಸಿದ್ದರು.

ಸದ್ಯ ಸೋಶಿಯಲ್ ಮೀಡಿಯಾ ಟ್ರೋಲ್, ಫ್ಯಾನ್ಸ್ ವಾರ್ ಬಗ್ಗೆ ಮಾತನಾಡುತ್ತಾ ಸುದೀಪ್ ಹಾಗೂ ಯಶ್ ಮಕ್ಕಳ ಬಗ್ಗೆಯೂ ಕೆಲವರು ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು, ಅದು ನನ್ನ ಗಮನಕ್ಕೂ ಬಂದಿತ್ತು ಎಂದು ಕೆಲ ದಿನಗಳ ಹಿಂದೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿದ್ದರು. ತಮಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿ ರಮ್ಯಾ ಮಾತನಾಡಿದ್ದರು. ಎರಡು ವರ್ಷಗಳ ಹಿಂದೆ ನಾನು ಪೋಸ್ಟ್ ಮಾಡಿದ್ದೆ. ಯಶ್, ಸುದೀಪ್ ಫ್ಯಾನ್ಸ್ ವಾರ್ ವೇಳೆ ಅವರ ಹೆಂಡ್ತಿ ಮಕ್ಕಳ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ರು. ನನಗೆ ಆಗ ಬೇಸರವಾಗಿತ್ತು ಎಂದು ನಟಿ ರಮ್ಯಾ ಬೇಸರ ವ್ಯಕ್ತಪಸಿದ್ದರು.
ಯಶ್ ಹಾಗೂ ಅವರ ಮಕ್ಕಳ ಬಗ್ಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದರು ಎಂದು ನಟಿ ರಮ್ಯಾ ಹೇಳಿಕೆಯ ಬಗ್ಗೆ Talking Parrots ಯೂಟ್ಯೂಬ್ ಚಾನಲ್ ಸಂದರ್ಶನದಲ್ಲಿ ಯಶ್ ತಾಯಿ ಪುಷ್ಪಾ ಅವರು ಮಾತನಾಡಿ, ಒಬ್ಬ ಲೇಡಿಯಾಗಿ ರಮ್ಯಾ ಎದುರು ನಿಂತಿದ್ದಾರೆ. ಬೇರೆ ಯಾರೂ ಮಾತನಾಡಿಲ್ಲ. ಯಾಕ್ರಪ್ಪಾ ಹೀಗೆಲ್ಲಾ ಮಾಡ್ತೀರಾ? ಎಲ್ಲರೂ ಕೆಟ್ಟದಾಗಿ ಕಾಮೆಂಟ್ ಮಾಡಲ್ಲ, ಕೆಲವ್ರು ಮಾತ್ರ ಮಾಡ್ತೀರಾ? ಯಾಕೆ ಬೇಕು. ವಿದ್ಯಾವಂತರಾಗಿದ್ದೀರಾ, ಇದೆಲ್ಲ ತಪ್ಪಲ್ಲವೇ? ಯಾಕೆ ಕರ್ನಾಟಕದ ಹೆಸರು ಹಾಳು ಮಾಡ್ತೀರಾ? ಎಂದು ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.
ರಮ್ಯಾ ಬಂದು ಇಷ್ಟೆಲ್ಲಾ ಮಾತನಾಡ್ಬೇಕಾ? ನಮ್ ಯಶ್ ಮಕ್ಕಳ ಬಗ್ಗೆ ಮಾತನಾಡಿದ್ದಾರೆ? ಯಶ್ ಏನು ಆಗಬೇಕಿಲ್ಲ, ಅವರ ಮನೆಯವ್ರು ಏನು ಆಗಬೇಕಿಲ್ಲ, ಆದರೂ ಬಹಳ ಲೇಡಿಯಾಗಿ ಯಶ್ ಮನೆ ಬಗ್ಗೆ ಮಾತನಾಡಿದ್ರು. ನನಗೆ ಅಲ್ಲಿಯವರೆಗೂ ಗೊತ್ತಿರಲಿಲ್ಲ. ಗೊತ್ತಾಗಿದ್ರೆ, ಅವತ್ತೇ ಟಿವಿಯಲ್ಲಿ ಕೂತು ಮಾತಾಡ್ತಿದ್ದೆ. ನನ್ನ ಮೊಮ್ಮಕ್ಕಳ ಬಗ್ಗೆ ಮಾತಾಡಿದ್ರೆ ಮಕ್ಕುಗಿತ್ತೀನಿ. ನಾನು ಬದುಕಿರುವವರೆಗೂ ನಮ್ಮ ಮೊಮ್ಮಕ್ಕಳ ಬಗ್ಗೆ ಯಾರು ಮಾತನಾಡಲು ಬಿಡಲ್ಲ, ಅಂತ ಕೆಲ್ಸ ಅವರಪ್ಪನೇ ಮಾಡೋಕೆ ಬಿಡಲ್ಲ. ರಮ್ಯಾ ಬಂದು ನಮ್ ಮನೆ ವಿಷ್ಯಾ ಮಾತಾಡ್ಬೇಕಾ? ನಾನು ರಮ್ಯಾ ವಿಷ್ಯಾ ಮಾತಾಡ್ಬೇಕಾ? ಯಾಕ್ರಪ್ಪ ಹೀಗೆಲ್ಲಾ ಮಾಡ್ತೀರಾ? ಇದರಿಂದ ಎಲ್ಲರಿಗೂ ಸಮಸ್ಯೆ. ಒಂದು ವೇಳೆ ತಪ್ಪಾಗಿದ್ದರೆ ಕ್ಷಮೆ ಕೇಳಿ ಎಲ್ಲ ಬಿಟ್ಟುಬಿಡಿ ಎಂದು ಪುಷ್ಪಾ ಹೇಳಿದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications