"ಯಶ್ ಅಂದೇ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಧ್ವನಿ ಎತ್ತಿದ್ರು, ಇಂದು ಯಾವ ನಟನೂ ಬರಲಿಲ್ಲ"
ನಟ ವಿಷ್ಣುವರ್ಧನ್ ಸ್ಮಾರಕವನ್ನು ತೆರವು ಮಾಡಿದ ಘಟನೆ ಸಂಬಂಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದೇ ಜಾಗದಲ್ಲಿ ಸ್ಮಾರಕ ಮರುನಿರ್ಮಾಣವಾಗಬೇಕು ಎಂದು ಧ್ವನಿ ಎತ್ತಿದ್ದಾರೆ. ಇದೇ ವಿಚಾರವಾಗಿ ವಿಷ್ಣು ಅಳಿಯ ಅನಿರುದ್ಧ ಅವರು ಸಭೆ ಕರೆದಿದ್ದರು. ಈ ಸಭೆಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದ್ದಿದ್ದು, ಚರ್ಚೆ ವೇಳೆ ದೊಡ್ಡ ಹೈಡ್ರಾಮಾ ನಡೆದಿದೆ. ಅಲ್ಲದೆ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರವಾಗಿ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆಗಲೇ ಧ್ವನಿ ಎತ್ತಿದ್ದರು, ಈಗ ಯಾವ ನಟ ಕೂಡ ಈ ಬಗ್ಗೆ ಮುಂದೆ ಬರುತ್ತಿಲ್ಲ ಎಂದು ಪ್ರಸ್ತಾಪವಾಯಿತು. ಇದನ್ನು ಕೇಳಿ ಅಲ್ಲಿದ್ದವರೆಲ್ಲ ರೊಚ್ಚಿಗೆದ್ದಿರುವ ಪ್ರಸಂಗ ನಡೆದಿದೆ.
ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಅದರ ಮಾಲೀಕರು ನೆಲಸಮ ಮಾಡಿದ್ದರು. ಇದರಿಂದ ವಿಷ್ಣು ಅಭಿಮಾನಿಗಳು ಕೆರಳಿದ್ದರು. ಅದೇ ಜಾಗದಲ್ಲಿ ಸ್ಮಾರಕ ಮತ್ತೆ ನಿರ್ಮಿಸಬೇಕು ಎಂದು ಹೋರಾಟಕ್ಕೂ ಕರೆ ನೀಡಿದ್ದರು. ಈ ಎಲ್ಲದರ ಬಗ್ಗೆ ಚರ್ಚಿಸಲು ಅನಿರುದ್ಧ ಅವರು ಭಾನುವಾರ ವಿಷ್ಣುವರ್ಧನ್ ಅವರ ನಿವಾಸದಲ್ಲೇ ಸಭೆ ಕರೆದಿದ್ದರು. ಆಗ ಅಭಿಮಾನಿಗಳ ನಡುವೆಯೇ ಕೆಲದ ಮನಸ್ತಾಪಗಳು ಕಂಡುಬಂದಿವೆ. ಕೆಲವರು ಅನಿರುದ್ಧ ಅವರ ಮಾತಿಗೆ ಅಸಮಾಧಾನ ಹೊರಹಾಕಿದ್ದಾರೆ.

ಸಭೆಯಲ್ಲಿದ್ದ ವ್ಯಕ್ತಿಯೊಬ್ಬ ಯಶ್ ಪರವಾಗಿ ಧ್ವನಿ ಎತ್ತಿದರು. "ವಿಷ್ಣು ಸರ್ ಅವರ ಸ್ಮಾರಕದ ವಿಚಾರವಾಗಿ ಹಲವು ವರ್ಷಗಳ ಹಿಂದೆಯೇ ಮಲ್ಲೇಶ್ವರದಲ್ಲಿ ಹೋರಾಟ ನಡೆದಿತ್ತು. ಆಗ ಅಲ್ಲಿಗೆ ವಿಷ್ಣು ಸರ್ ಕುಟುಂಬ ಕೂಡ ಬಂದಿತ್ತು. ಆಗ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಬಂದಿದ್ದರು. ವಿಷ್ಣು ಸರ್ ಸ್ಮಾರಕದ ವಿಚಾರವಾಗಿ ಅವರು ಧ್ವನಿ ಎತ್ತಿದ್ದರು. ಆದರೆ ಈಗ ಯಾವ ನಾಯಕ ನಟನೂ ಈ ವಿಚಾರದ ಬಗ್ಗೆ ಧ್ವನಿ ಎತ್ತುತ್ತಿಲ್ಲ" ಎಂದು ಅಭಿಮಾನಿಯೊಬ್ಬರು ಪ್ರಸ್ತಾಪಿಸಿದರು.
ಯಶ್ ವಿಚಾರ ಯಾಕೆ?
ಇದರಿಂದ ಕೋಪಗೊಂಡ ವಿಷ್ಣುವರ್ಧನ್ ಅಭಿಮಾನಿಗಳು "ಇಲ್ಲಿ ಯಶ್ ವಿಚಾರವನ್ನ ಯಾಕೆ ತರುತ್ತಿದ್ದೀಯಾ?" ಎಂದು ಆತನ ಮೇಲೆ ರೇಗಿದರು. ಬಳಿಕ ಅವರು ಕೂಡಲೇ ಮಾತು ನಿಲ್ಲಿಸುವಂತೆ ಹೇಳಿ ಮೈಕ್ ಕಸಿದುಕೊಂಡಿರುವ ಘಟನೆ ನಡೆದಿದೆ. ಇಲ್ಲಿ ವಿಚಾರ ಅವರು ಬಂದ್ರು, ಅವರು ಬಂದ್ರು ಅನ್ನೋದಲ್ಲ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕು ಅಷ್ಟೇ ಎಂದು ಎಲ್ಲರೂ ಕೂಗಾಡಿದರು. ಈ ವಿಡಿಯೋ ವೈರಲ್ ಆಗಿದೆ.

ಕಿಚ್ಚ, ರಿಷಬ್, ಧ್ರುವ ಪೋಸ್ಟ್
ವಿಷ್ಣುವರ್ಧನ್ ಅವರ ಸ್ಮಾರಕ ತೆರವು ಮಾಡಿದ ವಿಚಾರವಾಗಿ ಮೊದಲಿಗೆ ನಟ ಕಿಚ್ಚ ಸುದೀಪ್ ತಮ್ಮ ಸುದೀರ್ಘ ಪೋಸ್ಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಬಳಿಕ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ರಿಷಬ್ ಶೆಟ್ಟಿ ಕೂಡ ಇದೇ ವಿಚಾರವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿಕ್ರಿಯಿಸಿದ್ದರು. ಕಿಚ್ಚ ಸುದೀಪ್ ಅವರು ಈ ಘಟನೆಯನ್ನ ಖಂಡಿಸಿದ್ದರು. ಆ ಸ್ಮಾರಕ ಮತ್ತೆ ನಿರ್ಮಾಣ ಮಾಡಲು ಎಲ್ಲಿಗೆ ಬರುವುದಕ್ಕೂ ಸಿದ್ಧ, ನಾನೇ ಮುಂದೆ ನಿಂತು ಆ ಕೆಲಸ ಮಾಡಿಸುತ್ತೇನೆ ಎಂದು ಭರವಸೆ ನೀಡಿದ್ದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications