"ಯಶ್ ಅಂದೇ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಧ್ವನಿ ಎತ್ತಿದ್ರು, ಇಂದು ಯಾವ ನಟನೂ ಬರಲಿಲ್ಲ"
ನಟ ವಿಷ್ಣುವರ್ಧನ್ ಸ್ಮಾರಕವನ್ನು ತೆರವು ಮಾಡಿದ ಘಟನೆ ಸಂಬಂಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದೇ ಜಾಗದಲ್ಲಿ ಸ್ಮಾರಕ ಮರುನಿರ್ಮಾಣವಾಗಬೇಕು ಎಂದು ಧ್ವನಿ ಎತ್ತಿದ್ದಾರೆ. ಇದೇ ವಿಚಾರವಾಗಿ ವಿಷ್ಣು ಅಳಿಯ ಅನಿರುದ್ಧ ಅವರು ಸಭೆ ಕರೆದಿದ್ದರು. ಈ ಸಭೆಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದ್ದಿದ್ದು, ಚರ್ಚೆ ವೇಳೆ ದೊಡ್ಡ ಹೈಡ್ರಾಮಾ ನಡೆದಿದೆ. ಅಲ್ಲದೆ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರವಾಗಿ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆಗಲೇ ಧ್ವನಿ ಎತ್ತಿದ್ದರು, ಈಗ ಯಾವ ನಟ ಕೂಡ ಈ ಬಗ್ಗೆ ಮುಂದೆ ಬರುತ್ತಿಲ್ಲ ಎಂದು ಪ್ರಸ್ತಾಪವಾಯಿತು. ಇದನ್ನು ಕೇಳಿ ಅಲ್ಲಿದ್ದವರೆಲ್ಲ ರೊಚ್ಚಿಗೆದ್ದಿರುವ ಪ್ರಸಂಗ ನಡೆದಿದೆ.
ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಅದರ ಮಾಲೀಕರು ನೆಲಸಮ ಮಾಡಿದ್ದರು. ಇದರಿಂದ ವಿಷ್ಣು ಅಭಿಮಾನಿಗಳು ಕೆರಳಿದ್ದರು. ಅದೇ ಜಾಗದಲ್ಲಿ ಸ್ಮಾರಕ ಮತ್ತೆ ನಿರ್ಮಿಸಬೇಕು ಎಂದು ಹೋರಾಟಕ್ಕೂ ಕರೆ ನೀಡಿದ್ದರು. ಈ ಎಲ್ಲದರ ಬಗ್ಗೆ ಚರ್ಚಿಸಲು ಅನಿರುದ್ಧ ಅವರು ಭಾನುವಾರ ವಿಷ್ಣುವರ್ಧನ್ ಅವರ ನಿವಾಸದಲ್ಲೇ ಸಭೆ ಕರೆದಿದ್ದರು. ಆಗ ಅಭಿಮಾನಿಗಳ ನಡುವೆಯೇ ಕೆಲದ ಮನಸ್ತಾಪಗಳು ಕಂಡುಬಂದಿವೆ. ಕೆಲವರು ಅನಿರುದ್ಧ ಅವರ ಮಾತಿಗೆ ಅಸಮಾಧಾನ ಹೊರಹಾಕಿದ್ದಾರೆ.

ಸಭೆಯಲ್ಲಿದ್ದ ವ್ಯಕ್ತಿಯೊಬ್ಬ ಯಶ್ ಪರವಾಗಿ ಧ್ವನಿ ಎತ್ತಿದರು. "ವಿಷ್ಣು ಸರ್ ಅವರ ಸ್ಮಾರಕದ ವಿಚಾರವಾಗಿ ಹಲವು ವರ್ಷಗಳ ಹಿಂದೆಯೇ ಮಲ್ಲೇಶ್ವರದಲ್ಲಿ ಹೋರಾಟ ನಡೆದಿತ್ತು. ಆಗ ಅಲ್ಲಿಗೆ ವಿಷ್ಣು ಸರ್ ಕುಟುಂಬ ಕೂಡ ಬಂದಿತ್ತು. ಆಗ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಬಂದಿದ್ದರು. ವಿಷ್ಣು ಸರ್ ಸ್ಮಾರಕದ ವಿಚಾರವಾಗಿ ಅವರು ಧ್ವನಿ ಎತ್ತಿದ್ದರು. ಆದರೆ ಈಗ ಯಾವ ನಾಯಕ ನಟನೂ ಈ ವಿಚಾರದ ಬಗ್ಗೆ ಧ್ವನಿ ಎತ್ತುತ್ತಿಲ್ಲ" ಎಂದು ಅಭಿಮಾನಿಯೊಬ್ಬರು ಪ್ರಸ್ತಾಪಿಸಿದರು.
ಯಶ್ ವಿಚಾರ ಯಾಕೆ?
ಇದರಿಂದ ಕೋಪಗೊಂಡ ವಿಷ್ಣುವರ್ಧನ್ ಅಭಿಮಾನಿಗಳು "ಇಲ್ಲಿ ಯಶ್ ವಿಚಾರವನ್ನ ಯಾಕೆ ತರುತ್ತಿದ್ದೀಯಾ?" ಎಂದು ಆತನ ಮೇಲೆ ರೇಗಿದರು. ಬಳಿಕ ಅವರು ಕೂಡಲೇ ಮಾತು ನಿಲ್ಲಿಸುವಂತೆ ಹೇಳಿ ಮೈಕ್ ಕಸಿದುಕೊಂಡಿರುವ ಘಟನೆ ನಡೆದಿದೆ. ಇಲ್ಲಿ ವಿಚಾರ ಅವರು ಬಂದ್ರು, ಅವರು ಬಂದ್ರು ಅನ್ನೋದಲ್ಲ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕು ಅಷ್ಟೇ ಎಂದು ಎಲ್ಲರೂ ಕೂಗಾಡಿದರು. ಈ ವಿಡಿಯೋ ವೈರಲ್ ಆಗಿದೆ.

ಕಿಚ್ಚ, ರಿಷಬ್, ಧ್ರುವ ಪೋಸ್ಟ್
ವಿಷ್ಣುವರ್ಧನ್ ಅವರ ಸ್ಮಾರಕ ತೆರವು ಮಾಡಿದ ವಿಚಾರವಾಗಿ ಮೊದಲಿಗೆ ನಟ ಕಿಚ್ಚ ಸುದೀಪ್ ತಮ್ಮ ಸುದೀರ್ಘ ಪೋಸ್ಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಬಳಿಕ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ರಿಷಬ್ ಶೆಟ್ಟಿ ಕೂಡ ಇದೇ ವಿಚಾರವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿಕ್ರಿಯಿಸಿದ್ದರು. ಕಿಚ್ಚ ಸುದೀಪ್ ಅವರು ಈ ಘಟನೆಯನ್ನ ಖಂಡಿಸಿದ್ದರು. ಆ ಸ್ಮಾರಕ ಮತ್ತೆ ನಿರ್ಮಾಣ ಮಾಡಲು ಎಲ್ಲಿಗೆ ಬರುವುದಕ್ಕೂ ಸಿದ್ಧ, ನಾನೇ ಮುಂದೆ ನಿಂತು ಆ ಕೆಲಸ ಮಾಡಿಸುತ್ತೇನೆ ಎಂದು ಭರವಸೆ ನೀಡಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications