ಕನ್ನಡ ಚಿತ್ರರಂಗ ಉತ್ತುಂಗಕ್ಕೇರಲು ಯಶ್, ರಿಷಬ್, ನೀಲ್ ಕಾರಣ: ಬಾಲಿವುಡ್ ನಟ ಅನಿಲ್ ಕಪೂರ್
ಕನ್ನಡ ಚಿತ್ರರಂಗದ ಕಡೆ ಇಂದು ಇಡೀ ಭಾರತೀಯ ಸಿನಿಮಾರಂಗ ತಿರುಗಿ ನೋಡುತ್ತಿದೆ. ಕನ್ನಡದಲ್ಲಿ ತೆರೆಕಂಡು, ಬಹುಭಾಷೆಗಳಲ್ಲಿ ಮಿಂಚಿದ ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಮಾಡಿದ ಮೋಡಿ ಕಡಿಮೆಯೇನಲ್ಲ. ಸ್ಯಾಂಡಲ್ವುಡ್ ಅಂದ್ರೆ ಇಂದು ಬಾಲಿವುಡ್ನವರೂ ಹುಬ್ಬೇರಿಸಿ ನೋಡುವ ವಾತಾವರಣ ನಿರ್ಮಾಣವಾಗಿದೆ. ಇನ್ನು ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಕೂಡ ಕನ್ನಡ ಕಲಾವಿದರಿಗೆ ಭೇಷ್ ಎಂದಿದ್ದಾರೆ.
43 ವರ್ಷಗಳ ಹಿಂದೆ "ಪಲ್ಲವಿ ಅನು ಪಲ್ಲವಿ" ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅನಿಲ್ ಕಪೂರ್ ಪಾದಾರ್ಪಣೆ ಮಾಡಿದರು. ಈ ಹಿರಿಯ ನಟ ಈ ಚಿತ್ರದೊಂದಿಗಿನ ತಮ್ಮ ಆರಂಭಿಕ ಅನುಭವವನ್ನು ನೆನಪಿಸಿಕೊಳ್ಳುತ್ತಾ, ಕನ್ನಡ ಸಿನಿಮಾವನ್ನು ಜಾಗತಿಕ ವೇದಿಕೆಯಲ್ಲಿ ಭಾರತೀಯ ಸಿನಿಮಾವನ್ನು ಹೇಗೆ ಮರು ವ್ಯಾಖ್ಯಾನಿಸಲು ಸಹಾಯ ಮಾಡಿದೆ ಎಂಬುದನ್ನು ಶ್ಲಾಘಿಸಿದ್ದಾರೆ.

'ನಾನು ಕನ್ನಡ ಚಿತ್ರರಂಗಕ್ಕೆ 43 ವರ್ಷಗಳ ಹಿಂದೆ ನನ್ನ ಮೊದಲ ಹೆಜ್ಜೆ ಇಟ್ಟಿದ್ದೆ. ಅಂದಿನಿಂದ ಇಲ್ಲಿಯವರೆಗೆ, ಕನ್ನಡ ಚಿತ್ರರಂಗವು ಜಾಗತಿಕವಾಗಿ ಭಾರತೀಯ ಸಿನಿಮಾವನ್ನು ಹೇಗೆ ಮರು ವ್ಯಾಖ್ಯಾನಿಸುತ್ತಿದೆ ಮತ್ತು ಅಭಿವೃದ್ಧಿ ಹೊಂದುತ್ತಿದೆ ಎಂಬುದನ್ನು ನೋಡುವುದು ನಿಜಕ್ಕೂ ಅದ್ಭುತವಾಗಿದೆ' ಎಂದು ಅನಿಲ್ ಕಪೂರ್ ಕೊಂಡಾಡಿದ್ದಾರೆ.
ಕನ್ನಡದಲ್ಲಿ ನಟಿಸುವ ಆಸೆ
'ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದ ಮಟ್ಟವನ್ನು ಅಷ್ಟೊಂದು ಎತ್ತರಕ್ಕೆ ಕೊಂಡೊಯ್ದ ನಟ ಯಶ್, ಪ್ರಶಾಂತ್ ನೀಲ್, ರಿಷಬ್ ಶೆಟ್ಟಿ ಮತ್ತು ಈ ಸಿನಿಮಾಗಳ ಹಿಂದೆ ದುಡಿದ ಸಂಪೂರ್ಣ ತಂಡಕ್ಕೆ ನನ್ನ ಹೃದಯಪೂರ್ವಕ ವಂದನೆಗಳು. ಇಂತಹ ಅದ್ಭುತ ಚಿತ್ರರಂಗದೊಂದಿಗೆ ನನ್ನ ಸಂಬಂಧ ಇಲ್ಲಿಗೇ ಮುಗಿಯದೆ, ಮುಂದೆಯೂ ಮುಂದುವರಿಯಲಿ ಎಂಬ ಆಶಯ' ಎಂದಿದ್ದಾರೆ ನಟ ಅನಿಲ್ ಕಪೂರ್. ಕನ್ನಡ ಚಿತ್ರರಂಗದ ಕುರಿತು ಕಪೂರ್ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ಸ್ಯಾಂಡಲ್ವುಡ್ ಅಭಿಮಾನಿಗಳ ಮನಸ್ಸು ಗೆದ್ದಿವೆ.
ಸುಮಾರು 43 ವರ್ಷಗಳ ಹಿಂದೆ ಕನ್ನಡ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಟ್ಟ ಕ್ಷಣವನ್ನು ನೆನಪಿಸಿಕೊಂಡ ಅವರು ಅಂದಿನಿಂದ ಇಂದಿನವರೆಗೂ ಕನ್ನಡ ಸಿನಿಮಾಗಳು ತಲುಪಿರುವ ಎತ್ತರ ನಿಜಕ್ಕೂ ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ. ಆರಂಭದಲ್ಲಿ ಒಂದು ಪ್ರಾದೇಶಿಕ ಚಿತ್ರರಂಗವಾಗಿದ್ದ ಕನ್ನಡ ಸಿನಿಮಾ, ಇಂದು ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾವನ್ನು ಮರು ವ್ಯಾಖ್ಯಾನಿಸುವಷ್ಟು ಬೆಳವಣಿಗೆ ಕಂಡಿದೆ ಎಂಬುದು ಹೆಮ್ಮೆಯ ವಿಚಾರ ಎಂದಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳು ಕನ್ನಡ ಚಿತ್ರರಂಗಕ್ಕೆ ವಿಶ್ವಮಟ್ಟದ ಗುರುತನ್ನು ತಂದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದ ಮಟ್ಟವನ್ನು ಅಸಾಧಾರಣವಾಗಿ ಎತ್ತರಕ್ಕೆ ಕೊಂಡೊಯ್ದ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಟ ರಿಷಬ್ ಶೆಟ್ಟಿ ಹಾಗೂ ಈ ಸಿನಿಮಾಗಳ ಹಿಂದೆ ಶ್ರಮಿಸಿದ ಸಂಪೂರ್ಣ ತಂಡಕ್ಕೆ ಅವರು ಹೃದಯಪೂರ್ವಕ ವಂದನೆಗಳನ್ನು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಬೆಳವಣಿಗೆ ಕೇವಲ ವಾಣಿಜ್ಯ ಯಶಸ್ಸಿಗೆ ಸೀಮಿತವಾಗಿಲ್ಲ, ಬದಲಿಗೆ ಭಾರತೀಯ ಸಿನಿಮಾಗೆ ಹೊಸ ದಿಕ್ಕು ನೀಡುವಂತಹ ಪ್ರಯತ್ನಗಳು ಇಲ್ಲಿ ನಡೆಯುತ್ತಿವೆ. ಪ್ರಾದೇಶಿಕ ಭಾಷೆಯ ಗಡಿ ಮೀರಿ ಜಾಗತಿಕ ಪ್ರೇಕ್ಷಕರಿಗೆ ತಲುಪುವ ಶಕ್ತಿ ಕನ್ನಡ ಸಿನಿಮಾಗಳಲ್ಲಿ ಇಂದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇಂತಹ ಅದ್ಭುತ ಚಿತ್ರರಂಗದೊಂದಿಗೆ ತಮ್ಮ ಸಂಬಂಧ ಇಲ್ಲಿಗೇ ಮುಗಿಯಬಾರದು ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಮುಂದೆಯೂ ಕನ್ನಡ ಚಿತ್ರರಂಗದೊಂದಿಗೆ ತಮ್ಮ ಸಂಪರ್ಕ ಮುಂದುವರಿಯಬೇಕು ಹಾಗೂ ಉತ್ತಮ ಕಥೆಗಳು ಮತ್ತು ಹೊಸ ಪ್ರಯೋಗಗಳ ಭಾಗವಾಗುವ ಅವಕಾಶ ಸಿಗಲಿ ಎಂದು ಆಶಿಸಿದ್ದಾರೆ. ಅವರ ಈ ಮಾತುಗಳು ಕನ್ನಡ ಚಿತ್ರರಂಗದ ಸಾಧನೆಗೆ ಮತ್ತಷ್ಟು ಗೌರವ ಮತ್ತು ಹೆಮ್ಮೆಯನ್ನು ತಂದುಕೊಟ್ಟಿದ್ದು, ಸ್ಯಾಂಡಲ್ವುಡ್ನ ಜಾಗತಿಕ ಪಯಣಕ್ಕೆ ಮತ್ತೊಂದು ಮಾನ್ಯತೆ ದೊರೆತಂತಾಗಿದೆ.
ನೀವು ಲೆಜೆಂಡ್ ಎಂದ ರಿಷಬ್
'ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ ಸರ್! ನಿಮ್ಮ ಪ್ರಯಾಣ ಇಲ್ಲಿಂದ ಪ್ರಾರಂಭವಾಯಿತು ಮತ್ತು ಇಂದು ನೀವು ಭಾರತೀಯ ಚಿತ್ರರಂಗದ ನಿಜವಾದ ದಂತಕಥೆಯಾಗಿ ನಿಂತಿದ್ದೀರಿ. ನಿಮ್ಮನ್ನು ಭೇಟಿಯಾಗಲು ಮತ್ತು ಅಂತಹ ಅದ್ಭುತ ಸಂಭಾಷಣೆ ನಡೆಸಲು ನನಗೆ ಸಂಪೂರ್ಣ ಗೌರವವಾಗಿದೆ. ನಿಮ್ಮ ಪಲ್ಲವಿ ಅನುಪಲ್ಲವಿ ನನ್ನ ನೆಚ್ಚಿನ ಚಿತ್ರಗಳಲ್ಲಿ ಒಂದಾಗಿದೆ' ಎಂದು ರಿಷಬ್ ಶೆಟ್ಟಿ ಅನಿಲ್ ಕುಮಾರ್ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿದ್ದಾರೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications