Yash visit Dharmasthala: ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಯಾಕೆ? ಕಾರಣ ಇಲ್ಲಿದೆ...
ರಾಕಿಂಗ್ ಸ್ಟಾರ್ ಯಶ್ ಕಳೆದ ದಿನ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತ ದೇವರ ದರ್ಶನ ಪಡೆದು ಹರಕೆ ತೀರಿಸಿ ಅನ್ನ ಪ್ರಸಾದ ಸ್ವೀಕರಿಸಿದರು. ಪತ್ನಿ ರಾಧಿಕಾ ಪಂಡಿತ್ ಹಾಗೂ ತಮ್ಮಿಬ್ಬರ ಮಕ್ಕಳೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಆಗಾಗ ಅವರು ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆಯುತ್ತಲೇ ಇರುತ್ತಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಯಶ್ ಧಾರ್ಮಿಕ ಆಚರಣೆಗಳ ವಿಚಾರದಲ್ಲಿ ಮಾತ್ರ ಹಿಂದೆ ಉಳಿದಿಲ್ಲ. ಸಿನಿಮಾ ಶೂಟಿಂಗ್ನಲ್ಲಿ ಎಷ್ಟೇ ಬ್ಯೂಸಿ ಆಗಿದ್ದರೂ ಕೂಡ ದೇವರ ಪೂಜೆ, ಹಬ್ಬ ಹರಿದಿನಗಳ ಆಚರಣೆ ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡುವುದು ಮಾತ್ರ ಯಶ್ ತಪ್ಪಿಸಿಲ್ಲ.

ಅದರಲ್ಲೂ ವಿಶೇಷವಾಗಿ ಧರ್ಮಸ್ಥಳಕ್ಕೆ ಯಶ್ ಆಗಾಗ ಭೇಟಿ ಮಾಡುತ್ತಲೇ ಇರುತ್ತಾರೆ. ಅದಕ್ಕೆ ಕಾರಣ ಅವರ ತಂದೆ. ಯಶ್ ತಾವು ಧರ್ಮಸ್ಥಳಕ್ಕೆ ಭೇಟಿ ನೀಡುವ ಕಾರಣವನ್ನು ಈ ಹಿಂದೆ ಹೇಳಿದ್ದರು. ಅದನ್ನು ಈಗ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಯಶ್ ಅವರು ಅಂದು ಹೇಳಿದ್ದು ಏನು ಗೊತ್ತಾ..?
'ಅಪ್ಪ ಯಾವಾಗಲೂ ಹೇಳುತ್ತಾ ಇರುತ್ತಾರೆ. ಧರ್ಮಸ್ಥಳ ಮಂಜುನಾಥನ ಬೇಡಿಕೋ ಎಲ್ಲದೂ ಆಗುತ್ತದೆ. ಆ ನಂಬಿಕೆಯಲ್ಲಿ ಬೆಳೆದು ಬಂದವರು ನಾವು, ಸಂಪೂರ್ಣ ಕರ್ನಾಟಕ ಆ ನಂಬಿಕೆಯಲ್ಲಿ ಬದುಕುತ್ತಾ ಇದೆ. ನನಗೆ ಇದ್ದಿದ್ದು ಒಂದೇ ನಂಬಿಕೆ ಎಂದರೆ ಮಂಜುನಾಥ ಸ್ವಾಮಿ ಕೈ ಬಿಡಲ್ಲ' ಎಂದು ಯಶ್ ಅವರು ಈ ಮೊದಲು ಹೇಳಿಕೊಂಡಿದ್ದರು.

ಆದರೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸದ್ಯ ಟಾಕ್ಸಿಕ್ ಸಿನಿಮಾ ಶೂಟಿಂಗ್ ಆರಂಭವಾಗುತ್ತಿರುವ ಬೆನ್ನೆಲೆಯಲ್ಲಿ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು ಎನ್ನಲಾಗುತ್ತಿದೆ.
ಕಳೆದ ದಿನ ಮಂಗಳೂರಿನ ಬೆಳ್ತಂಗಡಿ ತಾಲೂಕು ಸೂರಿಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ದಂಪತಿ ಭೇಟಿ ನೀಡಿದರು. ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಯಶ್ ಕುಟುಂಬ ದೇವಸ್ಥಾನಕ್ಕೆ ಭೇಟಿ ನೀಡದೆ.
ಈ ವೇಳೆ ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆ (ಆರೋಗ್ಯ ಸಮಸ್ಯೆಗಾಗಿ ಮಾಡಿಕೊಂಡಿದ್ದ ಹರಕೆ)ಯನ್ನು ಯಶ್ ತೀರಿಸಿದ್ದಾರೆ. ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಕುಟುಂಬ ಸಮೇತ ಯಶ್ ಭೇಟಿ ನೀಡಿದ್ದಾರೆ. ಅಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆಯವರನ್ನು ಯಶ್ ಮತ್ತು ನಿರ್ಮಾಪಕ ವೆಂಕಟ್ ಭೇಟಿ ಮಾಡಿ ಆಶೀರ್ವಾದ ಪಡೆದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications