"ಯುವ" ಸಿನಿಮಾದ ಮೊದಲ ಹಾಡು ಕೆಲವೇ ಕ್ಷಣಗಳಲ್ಲಿ ಬಿಡುಗಡೆ- ಎಲ್ಲಿ ಹಾಗೂ ವಿಶೇಷ ಅತಿಥಿ ಯಾರು?-ಮಾಹಿತಿ, ವಿವರ
ಚಾಮರಾಜನಗರ, ಮಾರ್ಚ್, 02: ಯುವ ರಾಜ್ಕುಮಾರ್ ಹಾಗೂ "ಸಿಂಗಾರ ಸಿರಿ" ಸಪ್ತಮಿ ಗೌಡ ಜೋಡಿಯಾಗಿ ನಟನೆ ಮಾಡಿರುವ ಬಹುನಿರೀಕ್ಷಿತ "ಯುವ" ಸಿನಿಮಾದ ಮೊದಲ ಹಾಡಿನ ಬಿಡುಗಡೆ ಇನ್ನೂ ಕೆಲವೇ ಕ್ಷಣಗಳಲ್ಲಿ ಚಾಮರಾಜನಗರದಲ್ಲಿ ಆಗಲಿದೆ.
"ಯುವ" ಸಿನಿಮಾಗೆ ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದು, ಮೊದಲ ಹಾಡಿನ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಸಂತೋಷ್ ಆನಂದ್ರಾಮ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಹಾಡಿಗೆ ಬಹಳ ಮಹತ್ವ ನೀಡಲಾಗಿರುತ್ತದೆ. ಹಾಗೆಯೇ ಇದೀಗ ಇಂದು (ಮಾರ್ಚ್ 02) 'ಯುವ' ಚಿತ್ರದ ಮೊದಲ ಹಾಡು ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.

ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಯುವ ರಾಜಕುಮಾರ್ ನಟನೆಯ ಯುವ ಚಿತ್ರದ "ಒಬ್ಬನೇ ಶಿವ ಒಬ್ಬನೇ ಯುವ" ಎಂಬ ಮೊದಲ ಹಾಡು ಇಂದು ಸಂಜೆ 6 ಗಂಟೆಗೆ ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ರಿಲೀಸ್ ಆಗಲಿದೆ. ಈ ವೇಳೆ ಅಣ್ಣಾವ್ರ ಕುಟುಂಬ ಭಾಗಿಯಾಗಲಿದೆ.
ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ರಾಘಣ್ಣ ಕುಟುಂಬ ಭಾಗಿಯಾಗಲಿದ್ದಾರೆ. ಹಾಡನ್ನು ವಿಶೇಷ ಅತಿಥಿಯೊಬ್ಬರು ಬಿಡುಗಡೆ ಮಾಡಲಿದ್ದಾರೆ ಎಂದಷ್ಟೇ ಚಿತ್ರತಂಡ ಹೇಳಿದ್ದು, ಯಾರು ಆ ವಿಶೇಷ ಆತಿಥಿ ಎಂಬುದನ್ನು ಸಸ್ಪೆನ್ಸ್ ಆಗಿಟ್ಟಿದೆ.
ಒಟ್ಟಿನಲ್ಲಿ ಅಣ್ಣಾವ್ರ ತವರಲ್ಲಿ ಯುವ ರಾಜ್ ಕುಮಾರ್ ಅವರ ಮೊದಲ ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಉಂಟುಮಾಡಿದೆ.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications