Yuva Rajkumar: 'ಯುವ' ಮೊದಲ ಹಾಡು ಬಿಡುಗಡೆ ಅಪ್ಡೇಟ್ ಕೊಟ್ಟ ಚಿತ್ರತಂಡ
ಬೆಂಗಳೂರು, ಫೆಬ್ರವರಿ 26: ರಾಜವಂಶದ ಕುಡಿ 'ಯುವ ರಾಜಕುಮಾರ್' ನಟನೆಯ ಯುವ (Yuva) ಸಿನಿಮಾ ತಂಡದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ದೊಡ್ಮನೆಯ ಲಕ್ಷಾಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ 'ಯುವ' ಸಿನಿಮಾದ ಮೊದಲ ಹಾಡು ಬಿಡುಗಡೆ ದಿನಾಂಕ ಘೋಷಣೆ ಆಗಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಂತರ ರಾಜವಂಶ ಕುಡಿ ಮೂರನೇ ತಲೆಮಾರಿನ ಯುವರಾಜ್ ಕುಮಾರ್ (Yuva raj Kumar) ನಟನೆಯ ಮೊದಲ ಸಿನಿಮಾ ಮೇಲೆ ಬಹಳಷ್ಟು ನಿರೀಕ್ಷೆಗಳು ಮೂಡಿವೆ. ಸಿನಿಮಾ ರಿಲೀಸ್ ಮೊದಲೇ 'ಯುವ' ಸಿನಿಮಾ ಸಾಕಷ್ಟು ಕ್ರೇಜ್ ಹುಟ್ಟಿಸಿದೆ. ಬೃಹತ್ ಕಾರ್ಯಕ್ರಮದ ಮೂಲಕ ಹಾಡು ಬಿಡುಗಡೆಗೊಳ್ಳಲಿದೆ.

ಸಾಂಗ್ ಪೋಸ್ಟರ್ ವೈರಲ್
'ಯುವ' ಸಿನಿಮಾ ಮಾರ್ಚ್ 28 ರಂದು ಬಿಡುಗಡೆ ಆಗಲಿದೆ. ಇದೀಗ ಯುವ ಚಿತ್ರತಂಡವು ಮಹತ್ವ ಸುದ್ದಿ ನೀಡಿದ್ದು, ಯುವ ಸಿನಿಮಾದ ಹಾಡನ್ನು ಇದೇ ಮಾರ್ಚ್ 2ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ. ಈ ಕುರಿತು ಬಿಡುಗಡೆ ಮಾಡಲಾದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಾಂಗ್ ಬಿಡುಗಡೆ ಮಾಹಿತಿಯನ್ನು ನಟ ಯುವರಾಜ್ ಕುಮಾರ್ ಸೇರಿದಂತೆ ಚಿತ್ರತಂಡ ಹಂಚಿಕೊಂಡಿದೆ. 'ಒಬ್ಬನೇ ಶಿವ-ಒಬ್ಬನೇ 'ಯುವ' ಎಂಬ ಚಿತ್ರದ ಹಾಡನ್ನು ಬಿಡುಗಡೆ ಮಾಡಲಾಗುವುದು ಎಂದು ದಿನಾಂಕ್ ಫಿಕ್ಸ್ ಮಾಡಿದೆ.
The First Single from #YUVA ~ #ObbaneShivaObbaneYuva out on March 2nd
— YuvaRajkumar (@yuva_rajkumar) February 26, 2024
Launch Event : Chamarajanagar Temple Ground. @SanthoshAnand15 @vkiragandur @hombalefilms @hombalegroup @chaluvegowda @gowda_sapthami @b_ajaneesh #VishwasKashyap @DopShreesha #Ashik pic.twitter.com/u94aAi1pTj
ಸಾಂಗ್ ಬಿಡುಗಡೆಯ ಇವೆಂಟ್ ಎಲ್ಲಿ?
ಯುವರಾಜ್ ಕುಮಾರ್ ಅವರ ಮೊದಲ ಸಿನಿಮಾವನ್ನು ಭರ್ಜರಿಯಾಗಿ ತೆರೆಗೆ ತರಲು ತೆರೆಮರೆಯಲ್ಲಿ ಭಾರಿ ಕಸರತ್ತು ನಡೆಯುತ್ತಿದೆ ಎನ್ನಲಾಗಿದೆ. ಇದೀಗ ಯುವ ಸಿನಿಮಾದ ಮೊದಲ ಹಾಡನ್ನು ಚಾಮರಾಜನಗರದ ದೇವಸ್ಥಾನ ಮೈದಾನದಲ್ಲಿ ಮಾರ್ಚ್ 2ರಂದು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

ಯುವ ರಾಜ್ ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣ Xನಲ್ಲಿ ಸಾಂಗ್ ರಿಲೀಸ್ ಪೋಸ್ಟರ್ ಹಂಚಿಕೊಂಡಿದೆ. ಕಂಪು ಬಣ್ಣದ ಈ ಪೋಸ್ಟ್ನಲ್ಲಿ 1st singl 0BBANE SHIVA OBBANE YUVA ಎಂದು ಬರೆಯಲಾಗಿದೆ. ಯುವ ರಾಜಕುಮಾರ್ ಸಹ ಆಫೋಟೊದಲ್ಲಿ ಕಾಣುವುದನ್ನು ನೋಡಬಹುದು.
ಇದು ಲಿರಿಕಲ್ ಸಾಂಗ್
ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟೀಂ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಇದು ಲಿರಿಕಲ್ ಹಾಡು ಎಂದು ಹೇಳಲಾಗಿದೆ. ಸಿನಿಮಾಗಾಗಿ ಕಾತರದಿಂದ ಕಾಯುತ್ತಿರುವ ದೊಡ್ಮನೆ ಅಭಿಮಾನಿಗಳ ಬಳಗ ಈ ಹಾಡನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ.
ಮಿಸ್ಟರ್ ಆಂಡ್ ಮಿಸ್ ರಾಮಾಚಾರಿ, ರಾಜಕುಮಾರ್, ಯುವರತ್ನ ದಂತಹ ಸೂಪರ್ ಹಿಟ್ ಸಿನಿಮಾ ನೀಡಿರುವ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರುತ್ತಿದೆ. ಸಿನಿಮಾ ಜತೆಗೆ ಹಾಡುಗಳು ಸಾಕಷ್ಟು ಕುತೂಹಲ ಕೆರಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications