Zameer Ahmed: ನಾವಿಬ್ಬರೂ ಸ್ನೇಹಿತರು..! ದರ್ಶನ್ ಬಂಧನದ ಬಗ್ಗೆ ಜಮೀರ್ ಖಾನ್ ಹೇಳಿದ್ದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಜುಲೈ 4ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್ರ ಆಪ್ತ ಸ್ನೇಹಿತ ಎಂದೇ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ಈ ವಿಚಾರದಲ್ಲಿ ಇಷ್ಟು ದಿನ ಮೌನವಾಗಿದ್ದರು, ಈಗ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಉಪ್ಪು ತಿಂದವರು ನೀರು ಕುಡಿಯಬೇಕು, ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆ ಎಂದಿದ್ದಾರೆ.

ನಾನು ದರ್ಶನ್ ಪರ ಲಾಬಿ ಮಾಡಿದ್ದೇನೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅದೆಲ್ಲ ಸುಳ್ಳು ದರ್ಶನ್ರನ್ನು ರಕ್ಷಣೆ ಮಾಡಲು ನಾನು ಪ್ರಯತ್ನ ಮಾಡಿಲ್ಲ. ನಾನು ದರ್ಶನ್ ಪರವಾಗಿದ್ದೇನೆ ಎಂದು ಹೇಳಲಾಗುತ್ತಿದೆ, ಈ ವಿಚಾರದಲ್ಲಿ ನಾನು ದರ್ಶನ ಪರ ವಹಿಸಲ್ಲ, ಕಾನೂನು ಪ್ರಕಾರ ತನಿಖೆಯಾಗಲಿದ್ದು, ನ್ಯಾಯಾಲಯದಲ್ಲಿ ಇದು ತೀರ್ಮಾನವಾಗಲಿದೆ ಎಂದರು.
ನಾವಿಬ್ಬರೂ ಸ್ನೇಹಿತರು
ನಾನು ಮತ್ತು ದರ್ಶನ್ ಉತ್ತಮ ಸ್ನೇಹಿತರು, ಆದರೆ ಇಂತಹ ಪ್ರಕರಣದಲ್ಲಿ ದರ್ಶನ್ ಅವರಿಗೆ ನನ್ನ ಬೆಂಬಲ ಇಲ್ಲ. ನಾವಿಬ್ಬರೂ ಉತ್ತಮ ಸ್ನೇಹಿತರೇ ಆದರೆ ಈ ರೀತಿ ತಪ್ಪು ನಡೆದಾಗ ಯಾರು ಬೆಂಬಲ ಕೊಡುತ್ತಾರೆ? ಅವರ ಪರವಾಗಿ ಯಾರು ನಿಲ್ಲುತ್ತಾರೆ ಎಂದು ಪ್ರಶ್ನೆ ಮಾಡಿದರು. ತಪ್ಪು ಯಾರೇ ಮಾಡಿದ್ರು ತಪ್ಪೇ, ಅದು ದರ್ಶನ್ ಆಗಿರಲಿ ಅಥವಾ ಇನ್ಯಾರೇ ಇರಲಿ ಎಂದರು.
ನಟ ದರ್ಶನ್ ಮತ್ತು ಜಮೀರ್ ಖಾನ್ ಉತ್ತಮ ಸ್ನೇಹಿತರು, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಮೀರ್ ಖಾನ್ ದರ್ಶನ್ ಸಿನಿಮಾ ಹಾಡಿನ ರೀಲ್ಸ್ ಹಂಚಿಕೊಂಡು ದರ್ಶನ್ರನ್ನು ನೆನಪಿಸಿಕೊಂಡಿದ್ದರು.
ಜಮೀರ್ ಮಗ ಝೈದ್ ಖಾನ್ ಅವರ ಮೊದಲ ಸಿನಿಮಾ ಬನಾರಸ್ಗೆ ದರ್ಶನ್ ಪ್ರಚಾರ ಮಾಡಿದ್ದರು. ರಂಜಾನ್, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದರ್ಶನ್ ತಪ್ಪದೇ ಜಮೀರ್ ಮನೆಗೆ ಭೇಟಿ ನೀಡಿ ಹಬ್ಬದೂಟ ಸವಿಯುತ್ತಿದ್ದರು. ಈಗ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರೆ, ಜಮೀರ್ ಕೂಡ ಬೆಂಬಲ ಇಲ್ಲ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಜುಲೈ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಲ್ಲರೂ ಈಗ ಪರಪ್ಪನ ಅಗ್ರಹಾರದಲ್ಲಿದ್ದಾರೆ.
ದರ್ಶನ್ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ್ದಾರೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications