Zameer Ahmed: ನಾವಿಬ್ಬರೂ ಸ್ನೇಹಿತರು..! ದರ್ಶನ್ ಬಂಧನದ ಬಗ್ಗೆ ಜಮೀರ್ ಖಾನ್ ಹೇಳಿದ್ದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಜುಲೈ 4ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್ರ ಆಪ್ತ ಸ್ನೇಹಿತ ಎಂದೇ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ಈ ವಿಚಾರದಲ್ಲಿ ಇಷ್ಟು ದಿನ ಮೌನವಾಗಿದ್ದರು, ಈಗ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಉಪ್ಪು ತಿಂದವರು ನೀರು ಕುಡಿಯಬೇಕು, ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆ ಎಂದಿದ್ದಾರೆ.

ನಾನು ದರ್ಶನ್ ಪರ ಲಾಬಿ ಮಾಡಿದ್ದೇನೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅದೆಲ್ಲ ಸುಳ್ಳು ದರ್ಶನ್ರನ್ನು ರಕ್ಷಣೆ ಮಾಡಲು ನಾನು ಪ್ರಯತ್ನ ಮಾಡಿಲ್ಲ. ನಾನು ದರ್ಶನ್ ಪರವಾಗಿದ್ದೇನೆ ಎಂದು ಹೇಳಲಾಗುತ್ತಿದೆ, ಈ ವಿಚಾರದಲ್ಲಿ ನಾನು ದರ್ಶನ ಪರ ವಹಿಸಲ್ಲ, ಕಾನೂನು ಪ್ರಕಾರ ತನಿಖೆಯಾಗಲಿದ್ದು, ನ್ಯಾಯಾಲಯದಲ್ಲಿ ಇದು ತೀರ್ಮಾನವಾಗಲಿದೆ ಎಂದರು.
ನಾವಿಬ್ಬರೂ ಸ್ನೇಹಿತರು
ನಾನು ಮತ್ತು ದರ್ಶನ್ ಉತ್ತಮ ಸ್ನೇಹಿತರು, ಆದರೆ ಇಂತಹ ಪ್ರಕರಣದಲ್ಲಿ ದರ್ಶನ್ ಅವರಿಗೆ ನನ್ನ ಬೆಂಬಲ ಇಲ್ಲ. ನಾವಿಬ್ಬರೂ ಉತ್ತಮ ಸ್ನೇಹಿತರೇ ಆದರೆ ಈ ರೀತಿ ತಪ್ಪು ನಡೆದಾಗ ಯಾರು ಬೆಂಬಲ ಕೊಡುತ್ತಾರೆ? ಅವರ ಪರವಾಗಿ ಯಾರು ನಿಲ್ಲುತ್ತಾರೆ ಎಂದು ಪ್ರಶ್ನೆ ಮಾಡಿದರು. ತಪ್ಪು ಯಾರೇ ಮಾಡಿದ್ರು ತಪ್ಪೇ, ಅದು ದರ್ಶನ್ ಆಗಿರಲಿ ಅಥವಾ ಇನ್ಯಾರೇ ಇರಲಿ ಎಂದರು.
ನಟ ದರ್ಶನ್ ಮತ್ತು ಜಮೀರ್ ಖಾನ್ ಉತ್ತಮ ಸ್ನೇಹಿತರು, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಮೀರ್ ಖಾನ್ ದರ್ಶನ್ ಸಿನಿಮಾ ಹಾಡಿನ ರೀಲ್ಸ್ ಹಂಚಿಕೊಂಡು ದರ್ಶನ್ರನ್ನು ನೆನಪಿಸಿಕೊಂಡಿದ್ದರು.
ಜಮೀರ್ ಮಗ ಝೈದ್ ಖಾನ್ ಅವರ ಮೊದಲ ಸಿನಿಮಾ ಬನಾರಸ್ಗೆ ದರ್ಶನ್ ಪ್ರಚಾರ ಮಾಡಿದ್ದರು. ರಂಜಾನ್, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದರ್ಶನ್ ತಪ್ಪದೇ ಜಮೀರ್ ಮನೆಗೆ ಭೇಟಿ ನೀಡಿ ಹಬ್ಬದೂಟ ಸವಿಯುತ್ತಿದ್ದರು. ಈಗ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರೆ, ಜಮೀರ್ ಕೂಡ ಬೆಂಬಲ ಇಲ್ಲ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಜುಲೈ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಲ್ಲರೂ ಈಗ ಪರಪ್ಪನ ಅಗ್ರಹಾರದಲ್ಲಿದ್ದಾರೆ.
ದರ್ಶನ್ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ್ದಾರೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications