Fact check: ಸೋನಿಯಾ ಗಾಂಧಿ ಹಿಂದೆ ಕ್ರೈಸ್ತ ಧರ್ಮ ಮತಾಂತರ ಸಂಬಂಧಿಸಿದ ಪುಸ್ತಕವಿತ್ತೇ?
ನವದೆಹಲಿ, ಜೂನ್ 01: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿರುವ ಫೋಟೋ ಒಂದರಲ್ಲಿ ಅವರ ಹಿಂದೆ 'ಪವಿತ್ರ ಬೈಬಲ್' ಹಾಗೂ ಜೀಸಸ್ ಕ್ರಿಸ್ತನ ಮೂರ್ತಿ ಮತ್ತು 'ಹೌ ಟು ಕನ್ವರ್ಟ್ ಇಂಡಿಯಾ ಇಂಟು ಕ್ರಿಶ್ಚಿಯನ್ ನೇಷನ್' ಎನ್ನುವ ಪುಸ್ತಕವಿತ್ತು ಎನ್ನುವ ಮಾತುಗಳು ಕೇಳಿಬಂದಿದೆ.
ಇದನ್ನು ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಸುಮತಿ ವೆಂಕಟೇಶ್ ಎಂಬುವವರು ಹಾಗೂ ಬಿಜೆಪಿ ಬೆಂಬಲಿಗರಾದ ರೇಣುಕಾ ಜೈನ್ ಟ್ವಿಟ್ಟರ್ನಲ್ಲಿ ಶೇರ್ ಮಾಡಿದ್ದರು. ಹಾಗೆಯೇ ಬಿಜೆಪಿ ಬೆಂಬಲಿಗರಾದ ಮೀನಾ ದಾಸ್ ನಾರಾಯಣ್ ಕೂಡ ಇದನ್ನು ಟ್ವೀಟ್ ಮಾಡಿದ್ದರು.
ಈ ಚಿತ್ರ ಫೇಸ್ಬುಕ್ನಲ್ಲಿ ಕೂಡ ವೈರಲ್ ಆಗಿದೆ, ಅಕ್ಟೋಬರ್ 2020ರಲ್ಲಿ ರಾಹುಲ್ ಗಾಂಧಿ ಇಂಧನ ಬೆಲೆ ಏರಿಕೆ ವಿರುದ್ಧ ಹಾಗೂ ರೈತರ ಪರವಾಗಿ ಪ್ರತಿಭಟನೆ ನಡೆಸಿದ್ದರು. ಆ ಸಮಯದಲ್ಲಿ ರಾಹುಲ್ ಗಾಂಧಿ ವಿಡಿಯೋ ಒಂದನ್ನು ಮಾಡಿದ್ದರು.

ಆ ವಿಡಿಯೋದ ಸ್ಕ್ರೀನ್ಶಾಟ್ ಇಟ್ಟುಕೊಂಡು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಆ ವಿಡಿಯೋದಲ್ಲಿ ಸೋನಿಯಾ ಗಾಂಧಿ ಅವರು ಕುಳಿತಿರುವ ಹಿಂಭಾಗದಲ್ಲಿರುವ ಶೆಲ್ಫ್ನಲ್ಲಿ ಭಾರತವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವುದು ಹೇಗೆ ಎನ್ನುವ ಪುಸ್ತಕವಿದೆ, ಹಾಗೆಯೇ ಬೈಬಲ್ ಪುಸ್ತಕವೂ ಅವರ ಹಿಂದಿದೆ ಎಂದು ಆರೋಪಿಸಲಾಗಿತ್ತು.
ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು, "ಈ ಎಡಿಟ್ ಮಾಡಿದ ಚಿತ್ರವನ್ನು ಹಂಚಿಕೊಳ್ಳುವ ಎಲ್ಲ ಸೋಷ್ಯಲ್ ಮೀಡಿಯಾ ಹ್ಯಾಂಡಲ್ಗಳ ವಿರುದ್ಧ ಎಫ್ಐಆರ್ ದಾಖಲಿಸಲು ನಾವು ನಿರ್ಧರಿಸಿದ್ದೇವೆ. ಅಮಿತ್ ಮಾಲ್ವೇರ್ ಮತ್ತು ಕಂಪನಿಯ ಕೊಳಕು ತಂತ್ರಗಳನ್ನು ಇನ್ನಷ್ಟು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಆದರೆ ಆ ಚಿತ್ರ ಸುಳ್ಳಾಗಿದ್ದು, ಸೋನಿಯಾ ಗಾಂಧಿ ಅವರ ಹಿಂದೆ ಅಂತಹ ಯಾವುದೇ ಪುಸ್ತಕವಿರಲಿಲ್ಲ ಎನ್ನುವ ಸ್ಪಷ್ಟನೆ ಲಭ್ಯವಾಗಿದೆ.

Fact Check
ಕ್ಲೇಮು
ಸೋನಿಯಾ ಗಾಂಧಿ ಹಿಂಭಾಗ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕುರಿತ ಪುಸ್ತಕವಿತ್ತು
ಪರಿಸಮಾಪ್ತಿ
ಸೋನಿಯಾ ಗಾಂಧಿ ಹಿಂಭಾಗ ಅಂತಹ ಯಾವುದೇ ಪುಸ್ತಕಗಳಿರಲ್ಲಿಲ್ಲ, ಎಲ್ಲವೂ ಸೃಷ್ಟಿ ಮಾಡಿತ್ತುರೇಟಿಂಗ್: False
Rating
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications