Fact Check: ತುಟ್ಟಿಭತ್ಯೆ ಹೆಚ್ಚಳ ಅಧಿಕೃತ ಅದೇಶ ಹೊರಬಂದಿದೆಯೇ?
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಆದೇಶ ಪ್ರತಿಯೊಂದು ಹರಿದಾಡುತ್ತಿದೆ. ಆದರೆ, ಈ ಕುರಿತಂತೆ ಯಾವುದೇ ಆದೇಶ ಇನ್ನೂ ಅಧಿಕೃತವಾಗಿ ಹೊರ ಬಂದಿಲ್ಲ ಎಂದು PIB ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ.
ತುಟ್ಟಿಭತ್ಯೆ ಹಾಗೂ ತುಟ್ಟಿಭತ್ಯೆ ಪರಿಹಾರ ಘೋಷಣೆ ಬಗ್ಗೆ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಡಿಎ ಹೆಚ್ಚಳವಾದರೂ ನೇರವಾಗಿ ಸಂಬಳ ಏರಿಕೆ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಆದರೆ, ಈಗ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವ ಶುಭ ಸುದ್ದಿ ಸಿಕ್ಕಿದೆ. ಈಗ ತುಟ್ಟಿಭತ್ಯೆ ಪರಿಹಾರ (DA arrear) ಬಾಕಿ ಎಂದಿಗೆ ಸಿಗಬಹುದು ಎಂಬ ನಿರೀಕ್ಷೆಗೆ ಉತ್ತರ ಸಿಕ್ಕಿದೆ. ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಡಿಆರ್ ಬಾಕಿ ಮೊತ್ತ ಪಾವತಿ ಬಗ್ಗೆ ಸುಳಿವು ನೀಡಿದ್ದು, ಹೊಸ ವರ್ಷದಲ್ಲಿ ಸರಿ ಸುಮಾರು 2 ಲಕ್ಷ ರು ನಷ್ಟು ಬಾಕಿಮೊತ್ತ ಸಿಗಲಿದೆ. ಆದರೆ, ಇನ್ನೂ ಅಧಿಕೃತವಾಗಿ ಈ ಬಗ್ಗೆ ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಂಡಿಲ್ಲ ಹಾಗೂ ಆದೇಶವಂತೂ ಪ್ರಕಟವಾಗಿಲ್ಲ.
A #Fake order issued in the name of the Ministry of Finance claiming that the 'Dearness Allowance & Dearness Relief payable to Central Govt employees and pensioners will be kept in abeyance' is in circulation.#PIBFactCheck
— PIB Fact Check (@PIBFactCheck) January 3, 2022
▶️No such order has been issued by the @FinMinIndia. pic.twitter.com/DnZ4IY91FF
ನಕಲಿ ಆದೇಶವುಳ್ಳ ಸಂದೇಶದಲಿ ಏನಿದೆ?:
''ಓಮಿಕ್ರಾನ್ (ಕೋವಿಡ್ 19, ಸಾರ್ಸ್ 2) ಸೋಂಕು ಹೆಚ್ಚಳವಾಗುತ್ತಿದ್ದು, ಈ ಸಂದರ್ಭದಲ್ಲಿ ತುಟ್ಟಿಭತ್ಯೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಸಲ್ಲುವಂತೆ ಡಿಎ ಹಾಗೂ ಡಿಎ ಪರಿಹಾರವನ್ನು ಹಾಲಿ ದರದಂತೆ ನೀಡಲಾಗ್ತುತಿದೆ ಎಂದು ಈ ಮೂಲಕ ತಿಳಿಸಲಾಗಿದೆ'' ಎಂದು ಆದೇಶದ ಪ್ರತಿಯಲ್ಲಿ ಹೇಳಲಾಗಿದೆ.

ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಈ ಮೊತ್ತ ಸಲ್ಲಬೇಕಾಗಿದ್ದು, ಹೆಚ್ಚುವರಿ ಮೊತ್ತವನ್ನು ಆರ್ಥಿಕ ಇಲಾಖೆ ಭರಿಸಲಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಸತ್ಯಾಸತ್ಯತೆ: ಸದರಿ ಆದೇಶ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಯಾರೂ ಈ ಪತ್ರವನ್ನು ಹಂಚುವುದಾಗಿ, ನಂಬುವುದಾಗಿ ಮಾಡಬೇಡಿ ಎಂದು ಪ್ರೆಸ್ ಬ್ಯೂರೋ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಫೇಕ್ ಸ್ಟ್ಯಾಂಪ್ ಹಾಕಿ ಆದೇಶ ಪ್ರತಿ ಬಗ್ಗೆ ಟ್ವೀಟ್ ಮಾಡಿದ್ದು, ಈ ರೀತಿ ಯಾವುದೇ ಆದೇಶವನ್ನು ವಿತ್ತ ಸಚಿವಾಲಯ ನೀಡಿಲ್ಲ ಎಂದು ತಿಳಿಸಲಾಗಿದೆ.
ಡಿಎ ಹೆಚ್ಚಳ ಬಗ್ಗೆ ಯಾವಾಗ ನಿರೀಕ್ಷಿಸಬಹುದು?
ಕೊರೊನಾವೈರಸ್ ಸಾಂಕ್ರಾಮಿಕದ ಕಾಲದಲ್ಲಿ ಕಳೆದ ಎರಡು ವರ್ಷಗಳಿಂದ ಡಿಎ ಹೆಚ್ಚಳ ಮಾಡಲಾಗಿರಲಿಲ್ಲ. ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು [ಡಿಆರ್] 01.01.2020, 01.07.2020 ಮತ್ತು 01.01.2021, ಸ್ಥಗಿತಗೊಳಿಸಲಾಗಿತ್ತು.
ಸದ್ಯದ ಲೆಕ್ಕಾಚಾರದಂತೆ ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿದೆ. ಸೆಪ್ಟೆಂಬರ್ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದೆ. ಜೊತೆಗೆ 18 ತಿಂಗಳ ಬಾಕಿ ಮೊತ್ತವೂ ಸಿಗಲಿದೆ. ಕೇಂದ್ರ ಬೊಕ್ಕಸಕ್ಕೆ 12,150 ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ. ಡಿಎ ಹೆಚ್ಚಳದಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ.
ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಡಿಆರ್ ಬಾಕಿ ಮೊತ್ತ ಪಾವತಿ ಬಗ್ಗೆ ಸುಳಿವು ನೀಡಿದ್ದು, ಹೊಸ ವರ್ಷದಲ್ಲಿ ಸರಿ ಸುಮಾರು 2 ಲಕ್ಷ ರು ನಷ್ಟು ಬಾಕಿ ಮೊತ್ತ ಸಿಗಲಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದ್ದು, ಬಹುತೇಕ ಇದೇ ಮೊತ್ತಕ್ಕೆ ಸಮ್ಮತಿ ಸಿಗಲಿದೆ ಎಂದು ಅನೇಕ ಮಾಧ್ಯಮಗಳು ವರದಿ ಮಾಡಿವೆ.
ತುಟ್ಟಿಭತ್ಯೆ ಪ್ರಸ್ತುತ ಶೇಕಡಾ 31 ರಷ್ಟಿದೆ. ತುಟ್ಟಿಭತ್ಯೆ ಪರಿಹಾರ ಶೇ 3ರಷ್ಟಿದೆ. ಈ ವರ್ಷ ಜುಲೈ ಮೊದಲು, ಇದು 17 ಪ್ರತಿಶತದಷ್ಟಿತ್ತು, ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಡಿಎ ಶೇ 28ರಿಂದ ಶೇ 31ಕ್ಕೇರಿಕೆಯಾಗಲಿದೆ.
ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ, ಆದೇಶ ಯಾವಾಗ ಹೊರ ಬರಲಿದೆ ಎಂಬ ಮಾಹಿತಿ ಇನ್ನೂ ಖಚಿತವಾಗಿಲ್ಲ. ಬಜೆಟ್ ಅಧಿವೇಶನಕ್ಕೂ ಮುನ್ನ ಆದೇಶ ಹೊರ ಬರಬಹುದು ಎಂಬ ನಿರೀಕ್ಷೆಯಿದೆ.
Recommended Video

Fact Check
ಕ್ಲೇಮು
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಆದೇಶ ನೀಡಲಾಗಿದೆ.
ಪರಿಸಮಾಪ್ತಿ
ಸದರಿ ಆದೇಶ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು ಈ ರೀತಿ ಯಾವುದೇ ಆದೇಶವನ್ನು ವಿತ್ತ ಸಚಿವಾಲಯ ನೀಡಿಲ್ಲ ಎಂದು ಪ್ರೆಸ್ ಬ್ಯೂರೋ ಆಫ್ ಇಂಡಿಯಾ ತಿಳಿಸಿದೆ.
Rating
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications