Fact Check; ಬೆಂಗಳೂರಲ್ಲಿ ಕೋವಿಡ್ ಪರೀಕ್ಷೆ ಬಳಿಕ ಮಹಿಳೆ ನಾಪತ್ತೆ
ಬೆಂಗಳೂರು, ಸೆಪ್ಟೆಂಬರ್ 13: ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಅಂಬ್ಯುಲೆನ್ಸ್ನಲ್ಲಿ ತೆರಳಿದ್ದ ಮಹಿಳೆ ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದಾಳೆ ಎಂಬ ಸುದ್ದಿ ಹಬ್ಬಿತ್ತು. ಮಾಧ್ಯಮಗಳಲ್ಲಿಯೂ ಈ ಸುದ್ದಿ ಪ್ರಕಟವಾಗಿತ್ತು. ಬೆಂಗಳೂರು ಪೊಲೀಸರು FactCheck ಮೂಲಕ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.
ಗಂಡ-ಹೆಂಡತಿ ನಡುವೆ ಜಗಳ ನಡೆದು ನಡೆದು ಮಹಿಳೆ ಸ್ವ ಇಚ್ಛೆಯಿಂದ ಪರಿಚಿತ ವ್ಯಕ್ತಿಯೊಬ್ಬನ ಸಹಾಯದಿಂದ ಮನೆ ಬಿಟ್ಟು ತೆರಳಿರುವುದು ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ಮಹಿಳೆ ಸುರಕ್ಷಿತವಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಈ ಪ್ರಕರಣಕ್ಕೂ ಕೋವಿಡ್ ಪರೀಕ್ಷೆ ನಡೆಸುವ ಬಿಬಿಎಂಪಿ, ವೈದ್ಯಕೀಯ ಇಲಾಖೆಯ ಸಿಬ್ಬಂದಿಗಳಿಗೂ ಯಾವುದೇ ಸಂಬಂಧವಿಲ್ಲ. ಜನರು ಯಾವುದೇ ಆತಂಕ, ಮುಗುಗರಕ್ಕೆ ಒಳಗಾಗದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಬೆಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.

ಘಟನೆ ವಿವರ: ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಾಗ ಮಹಿಳೆಗೆ ಪಾಸಿಟೀವ್ ಬಂದಿತ್ತು, ಆಕೆ ಆಂಬ್ಯುಲೆನ್ಸ್ನಲ್ಲಿ ತೆರಳಿದ್ದಳು. ಬಳಿಕ ಕಾಣೆಯಾಗಿದ್ದಳು, 4/9/2020ರಂದು ನಡೆದ ಘಟನೆ ಬಗ್ಗೆ ಅಂದೇ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಗಂಡ ಮತ್ತು ಹೆಂಡತಿ ನಡುವೆ ಗಲಾಟೆ ನಡೆದಿತ್ತು. ಮಹಿಳೆ ಮನೆಯಿಂದ ಹೊರ ಹೋಗಲು ಬಯಸಿದ್ದಳು. ಅದಕ್ಕಾಗಿ ಸ್ನೇಹಿತನ ಸಹಾಯ ಪಡೆದಿದ್ದಳು. 8/9/2020ರಂದು ಆಕೆ ಮಾಡಿದ ದೂರವಾಣಿ ಕರೆಯನ್ನು ತನಿಖಾಧಿಕಾರಿಗಳು ರೆಕಾರ್ಡ್ ಮಾಡಿಕೊಂಡಿದ್ದಾರೆ.
‘Covid positive’ woman in Bengaluru goes missing after ambulance picks her up -Facts – Karnataka State Police FactCheck https://t.co/8jqvndQZOh
— DGP KARNATAKA (@DgpKarnataka) September 13, 2020
ಮಹಿಳೆಯ ಧ್ವನಿಯನ್ನು ದೂರು ನೀಡಿದ ಪತಿ ಗುರುತಿಸಿದ್ದಾರೆ. ಮಹಿಳೆ ಸುರಕ್ಷಿತವಾಗಿದ್ದು, ಸಾಂಸಾರಿಕ ತೊಂದರೆಯನ್ನು ಬಗೆಹರಿಸಿಕೊಳ್ಳುವೆ ಎಂದು ಆಕೆ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.

Fact Check
ಕ್ಲೇಮು
ಬೆಂಗಳೂರಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಅಂಬ್ಯುಲೆನ್ಸ್ನಲ್ಲಿ ತೆರಳಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ
ಪರಿಸಮಾಪ್ತಿ
ಈ ವರದಿಯನ್ನು ಬೆಂಗಳೂರು ಪೊಲೀಸರು ನಿರಾಕರಿಸಿದ್ದಾರೆ.
Rating
-
ನಿಮ್ಮ ಸ್ಕಿನ್ ಟೋನ್ ಗೆ ಮ್ಯಾಚ್ ಆಗುವ ಲಿಪ್ಸ್ಟಿಕ್ ಶೇಡ್ ಕಂಡುಹಿಡಿಯಲು 7 ಟಿಪ್ಸ್ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications