Fact Check: ಭೂಪೇಶ್ ಬಘೇಲ್ ಗೆಲ್ಲಿಸುವಂತೆ ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ?
ಕಾಂಗ್ರೆಸ್ ಮುಖಂಡ ಭೂಪೇಶ್ ಬಘೆಲ್ ಅವರನ್ನು ಗೆಲ್ಲಿಸುವಂತೆ ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಸಾಮಾನ್ಯವಾಗಿ ವಿರೋಧ ಪಕ್ಷದವರನ್ನು ಗೆಲ್ಲಿಸದೇ ಇರಲು ಮನವಿ ಮಾಡುವುದಿದೆ. ಆದರೆ ಇಲ್ಲಿ ಬಿಜೆಪಿ ಪಕ್ಷದ ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ಅವರು ಕಾಂಗ್ರೆಸ್ ಮುಖಂಡ ಭೂಪೇಶ್ ಬಘೆಲ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆನ್ನುವ ವಿಡಿಯೋ ವೈರಲ್ ಆಗಿದೆ.
ಲೋಕಸಭೆ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರಬಲ ಪಕ್ಷಗಳ ಆರೋಪ ಪ್ರತ್ಯಾರೋಪದ ನಡುವೆ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಸಿಎಂ ಸಾಯಿ ಅವರು ಮಾಜಿ ಸಿಎಂ ಭೂಪೇಶ್ ಬಘೆಲ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಡಿಯೋದಲ್ಲಿ ಏನಿದೆ?
ಏಪ್ರಿಲ್ 19 ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ರಾಜ್ಯದ ಸಿಎಂ ವಿಷ್ಣು ದೇವ್ ಸಾಯಿ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ರಾಜ್ನಂದಗಾಂವ್ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೂಪೇಶ್ ಬಾಘೇಲ್ ಅವರು ಸ್ಪರ್ಧಿಸುತ್ತಿದ್ದಾರೆ. ಅವರನ್ನು ಗೆಲ್ಲಿಸುವಂತೆ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆ ಎಂದು ವೀಡಿಯೋದ ಶೀರ್ಷಿಕೆ ಹೇಳುತ್ತದೆ. ಹಾಗಾದರೆ ವೈರಲ್ ವಿಡಿಯೋದ ಹಿಂದಿರುವ ಸತ್ಯವೇನು ಎಂದು ತಿಳಿಯೋಣ.
ರಾಜ್ನಂದಗಾಂವ್ನಿಂದ ಸ್ಪರ್ಧಿಸುತ್ತಿರುವ ಭೂಪೇಶ್ ಬಾಘೇಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ವಿಡಿಯೋ ವೈರಲ್ ಆಗಿದ್ದು ಭಾರೀ ಆಶ್ಚರ್ಯ ಮೂಡಿಸಿದೆ. ಇಬ್ಬರು ಒಂದೇ ಪಕ್ಷದವರಲ್ಲ. ಆದರೂ ಬೇರೆ ಪಕ್ಷ ಅದರಲ್ಲೂ ಪ್ರಬಲ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಲು ಹೇಗೆ ಸಾಧ್ಯ ಎಂದು ಜನ ಆಶ್ಚರ್ಯಗೊಂಡಿದ್ದಾರೆ. ಆದರೆ ಈ ವಿಡಿಯೋ ಹಿಂದಿರುವ ಸತ್ಯವೇ ಬೇರೆ.
ವಿಡಿಯೋ ಯಾರು ಹಂಚಿಕೊಂಡರು?
tukaram_iyc ಹೆಸರಿನ Instagram ಬಳಕೆದಾರರು ಈ ವೀಡಿಯೊವನ್ನು ಶೀರ್ಷಿಕೆಯನ್ನು ಹೀಗೆ ಬರೆದಿದ್ದಾರೆ- "ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಜಿ ಅವರು ರಾಜನಂದಗಾಂವ್ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಭೂಪೇಶ್ ಬಾಘೇಲ್ ಜಿ ಪರ ಮುಕ್ತ ವೇದಿಕೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ!"
ಆದಾಗ್ಯೂ ಈ ವೀಡಿಯೊವನ್ನು ತನಿಖೆ ಮಾಡಿದಾಗ, ವಿಷಯ ಸಂಪೂರ್ಣವಾಗಿ ತಪ್ಪುದಾರಿಗೆಳೆಯುವಂತಿದೆ. Vishvas News ನ ವರದಿ ಪ್ರಕಾರ, ವೈರಲ್ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ವಿಡಿಯೋದ ಬಗ್ಗೆ ಬಿಜೆಪಿ ಛತ್ತೀಸ್ಗಢ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ. ವರದಿಯ ಪ್ರಕಾರ, ವೈರಲ್ ವೀಡಿಯೊ ಕ್ಲಿಪ್ ಏಪ್ರಿಲ್ 3 ರಂದು ಮಹಾಸಮುಂಡ್ನಲ್ಲಿ ನಡೆದ ರ್ಯಾಲಿಯಾಗಿದ್ದು, ಅಲ್ಲಿ ವಿಷ್ಣು ದೇವ್ ಸಾಯಿ ಭಾಷಣ ಮಾಡಿದರು, ಅದನ್ನು ಕ್ರಾಪ್ ಮಾಡಿ ವೈರಲ್ ಮಾಡಲಾಗಿದೆ.
ವೈರಲ್ ಆಗಿರುವ ವಿಡಿಯೋ ನಕಲಿ
ಸಿಎಂ ವಿಷ್ಣು ದೇವ್ ಸಾಯಿ ಅವರ ಭಾಷಣದ ವೀಡಿಯೊವನ್ನು 'News24 MP & Chhattisgarh' ನ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿಯೂ ಅಪ್ಲೋಡ್ ಮಾಡಲಾಗಿದೆ. ಮೂರು ನಿಮಿಷ 11 ಸೆಕೆಂಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೂಪೇಶ್ ಬಘೇಲ್ ಗೆಲುವಿಗೆ ಸಿಎಂ ಸೈ ಎನ್ನುತ್ತಿಲ್ಲ ಎಂಬುದು ಸ್ಪಷ್ಟವಾಗಿ ಕೇಳಿಬರುತ್ತದೆ. ಹೀಗಾಗಿ ವೈರಲ್ ವಿಡಿಯೋವನ್ನು ಎಡಿಟ್ ಮಾಡಿರುವುದು ಸ್ಪಷ್ಟವಾಗಿದೆ.

Fact Check
ಕ್ಲೇಮು
ಭೂಪೇಶ್ ಬಘೇಲ್ ಅವರನ್ನು ಗೆಲ್ಲಿಸುವಂತೆ ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆ.
ಪರಿಸಮಾಪ್ತಿ
ಭೂಪೇಶ್ ಬಘೇಲ್ ಅವರನ್ನು ಗೆಲ್ಲಿಸುವಂತೆ ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆನ್ನುವ ವಿಡಿಯೋವನ್ನು ಎಡಿಟ್ ಮಾಡಲಾಗಿದೆ.
Rating
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications