Get Updates
Get notified of breaking news, exclusive insights, and must-see stories!

Fact Check: ಭೂಪೇಶ್ ಬಘೇಲ್ ಗೆಲ್ಲಿಸುವಂತೆ ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ?

ಕಾಂಗ್ರೆಸ್ ಮುಖಂಡ ಭೂಪೇಶ್ ಬಘೆಲ್ ಅವರನ್ನು ಗೆಲ್ಲಿಸುವಂತೆ ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಸಾಮಾನ್ಯವಾಗಿ ವಿರೋಧ ಪಕ್ಷದವರನ್ನು ಗೆಲ್ಲಿಸದೇ ಇರಲು ಮನವಿ ಮಾಡುವುದಿದೆ. ಆದರೆ ಇಲ್ಲಿ ಬಿಜೆಪಿ ಪಕ್ಷದ ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಅವರು ಕಾಂಗ್ರೆಸ್ ಮುಖಂಡ ಭೂಪೇಶ್ ಬಘೆಲ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆನ್ನುವ ವಿಡಿಯೋ ವೈರಲ್ ಆಗಿದೆ.

ಲೋಕಸಭೆ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರಬಲ ಪಕ್ಷಗಳ ಆರೋಪ ಪ್ರತ್ಯಾರೋಪದ ನಡುವೆ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಸಿಎಂ ಸಾಯಿ ಅವರು ಮಾಜಿ ಸಿಎಂ ಭೂಪೇಶ್ ಬಘೆಲ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Fact Check Chhattisgarh CM Vishnu Dev Sai Requests Bhupesh Baghel To Win

ವಿಡಿಯೋದಲ್ಲಿ ಏನಿದೆ?

ಏಪ್ರಿಲ್ 19 ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ರಾಜ್ಯದ ಸಿಎಂ ವಿಷ್ಣು ದೇವ್ ಸಾಯಿ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ರಾಜ್‌ನಂದಗಾಂವ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೂಪೇಶ್ ಬಾಘೇಲ್ ಅವರು ಸ್ಪರ್ಧಿಸುತ್ತಿದ್ದಾರೆ. ಅವರನ್ನು ಗೆಲ್ಲಿಸುವಂತೆ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆ ಎಂದು ವೀಡಿಯೋದ ಶೀರ್ಷಿಕೆ ಹೇಳುತ್ತದೆ. ಹಾಗಾದರೆ ವೈರಲ್ ವಿಡಿಯೋದ ಹಿಂದಿರುವ ಸತ್ಯವೇನು ಎಂದು ತಿಳಿಯೋಣ.

ರಾಜ್‌ನಂದಗಾಂವ್‌ನಿಂದ ಸ್ಪರ್ಧಿಸುತ್ತಿರುವ ಭೂಪೇಶ್ ಬಾಘೇಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ವಿಡಿಯೋ ವೈರಲ್ ಆಗಿದ್ದು ಭಾರೀ ಆಶ್ಚರ್ಯ ಮೂಡಿಸಿದೆ. ಇಬ್ಬರು ಒಂದೇ ಪಕ್ಷದವರಲ್ಲ. ಆದರೂ ಬೇರೆ ಪಕ್ಷ ಅದರಲ್ಲೂ ಪ್ರಬಲ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಲು ಹೇಗೆ ಸಾಧ್ಯ ಎಂದು ಜನ ಆಶ್ಚರ್ಯಗೊಂಡಿದ್ದಾರೆ. ಆದರೆ ಈ ವಿಡಿಯೋ ಹಿಂದಿರುವ ಸತ್ಯವೇ ಬೇರೆ.

ವಿಡಿಯೋ ಯಾರು ಹಂಚಿಕೊಂಡರು?

tukaram_iyc ಹೆಸರಿನ Instagram ಬಳಕೆದಾರರು ಈ ವೀಡಿಯೊವನ್ನು ಶೀರ್ಷಿಕೆಯನ್ನು ಹೀಗೆ ಬರೆದಿದ್ದಾರೆ- "ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಜಿ ಅವರು ರಾಜನಂದಗಾಂವ್ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಭೂಪೇಶ್ ಬಾಘೇಲ್ ಜಿ ಪರ ಮುಕ್ತ ವೇದಿಕೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ!"

ಆದಾಗ್ಯೂ ಈ ವೀಡಿಯೊವನ್ನು ತನಿಖೆ ಮಾಡಿದಾಗ, ವಿಷಯ ಸಂಪೂರ್ಣವಾಗಿ ತಪ್ಪುದಾರಿಗೆಳೆಯುವಂತಿದೆ. Vishvas News ನ ವರದಿ ಪ್ರಕಾರ, ವೈರಲ್ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ವಿಡಿಯೋದ ಬಗ್ಗೆ ಬಿಜೆಪಿ ಛತ್ತೀಸ್‌ಗಢ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ. ವರದಿಯ ಪ್ರಕಾರ, ವೈರಲ್ ವೀಡಿಯೊ ಕ್ಲಿಪ್ ಏಪ್ರಿಲ್ 3 ರಂದು ಮಹಾಸಮುಂಡ್‌ನಲ್ಲಿ ನಡೆದ ರ್‍ಯಾಲಿಯಾಗಿದ್ದು, ಅಲ್ಲಿ ವಿಷ್ಣು ದೇವ್ ಸಾಯಿ ಭಾಷಣ ಮಾಡಿದರು, ಅದನ್ನು ಕ್ರಾಪ್ ಮಾಡಿ ವೈರಲ್ ಮಾಡಲಾಗಿದೆ.

ವೈರಲ್ ಆಗಿರುವ ವಿಡಿಯೋ ನಕಲಿ

ಸಿಎಂ ವಿಷ್ಣು ದೇವ್ ಸಾಯಿ ಅವರ ಭಾಷಣದ ವೀಡಿಯೊವನ್ನು 'News24 MP & Chhattisgarh' ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿಯೂ ಅಪ್‌ಲೋಡ್ ಮಾಡಲಾಗಿದೆ. ಮೂರು ನಿಮಿಷ 11 ಸೆಕೆಂಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೂಪೇಶ್ ಬಘೇಲ್ ಗೆಲುವಿಗೆ ಸಿಎಂ ಸೈ ಎನ್ನುತ್ತಿಲ್ಲ ಎಂಬುದು ಸ್ಪಷ್ಟವಾಗಿ ಕೇಳಿಬರುತ್ತದೆ. ಹೀಗಾಗಿ ವೈರಲ್ ವಿಡಿಯೋವನ್ನು ಎಡಿಟ್ ಮಾಡಿರುವುದು ಸ್ಪಷ್ಟವಾಗಿದೆ.

Fact Check

ಕ್ಲೇಮು

ಭೂಪೇಶ್ ಬಘೇಲ್ ಅವರನ್ನು ಗೆಲ್ಲಿಸುವಂತೆ ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆ.

ಪರಿಸಮಾಪ್ತಿ

ಭೂಪೇಶ್ ಬಘೇಲ್ ಅವರನ್ನು ಗೆಲ್ಲಿಸುವಂತೆ ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಮನವಿ ಮಾಡಿದ್ದಾರೆನ್ನುವ ವಿಡಿಯೋವನ್ನು ಎಡಿಟ್ ಮಾಡಲಾಗಿದೆ.

Rating

Misleading
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+