Fact check: ಕಾಂಗ್ರೆಸ್ ಗೆಲುವಿನ ಸಂಕೇತವಾಗಿ ಬಿಜೆಪಿ ಧ್ವಜದ ಮೇಲೆ ಗೋಹತ್ಯೆ- ಇದರ ಹಿಂದಿರುವ ಸತ್ಯವೇನು?
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರ್ಣಾಯಕ ಗೆಲುವು ಸಾಧಿಸಿದ ನಂತರ ಕೆಲ ಸಂದೇಶಗಳನ್ನು ಹರಿ ಬಿಡಲಾಗಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ರಾಕ್ಷಸರನ್ನಾಗಿಸುವ ಹುರುಪಿನ ಪ್ರಚಾರ ಮುನ್ನೆಲೆಗೆ ಬಂದಿದೆ. ಹತ್ಯೆಗೀಡಾದ ಹಸುವನ್ನು ಭಾರತೀಯ ಜನತಾ ಪಕ್ಷದ ಧ್ವಜದ ಮೇಲೆ ಮಲಗಿರುವ ಎರಡು ಭೀಕರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಈ ಫೋಟೋಗಳನ್ನು ಶೇರ್ ಮಾಡಿದವರು ಕರ್ನಾಟಕಕ್ಕೆ ಲಿಂಕ್ ಮಾಡಿದ್ದಾರೆ. ಮುಸ್ಲಿಂ ಬೆಂಬಲಿಗರು ಬಿಜೆಪಿ ಧ್ವಜದ ಮೇಲೆ ಗೋಹತ್ಯೆ ಮಾಡುವ ಮೂಲಕ ಕಾಂಗ್ರೆಸ್ ವಿಜಯೋತ್ಸವವನ್ನು ಆಚರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ವೈರಲ್ ಫೋಟೋಗಳನ್ನು ಹಂಚಿಕೊಳ್ಳುವಾಗ ಟ್ವಿಟರ್ ಬಳಕೆದಾರರು ಹೀಗೆ ಬರೆದಿದ್ದಾರೆ- "ಅನಾಗರಿಕರು. ಇದು ಕರ್ನಾಟಕದಿಂದ ಬಂದಿದೆ ಎಂದು ಹೇಳುವ ವೀಡಿಯೊ ನನಗೆ ಸಿಕ್ಕಿತು. ಇಸ್ಲಾಮಿಕ್ ಮತಾಂಧರು ಕಾಂಗ್ರೇಸ್ ಗೆಲುವಿನ ವಿಜಯವನ್ನು ಆಚರಿಸಲು ಬಿಜೆಪಿ ಧ್ವಜದ ಮೇಲೆ ಹಸುವನ್ನು ಕತ್ತರಿಸುವ ಮೂಲಕ ಆಚರಿಸಿದರು. ಟ್ವಿಟರ್ ನನಗೆ ವೀಡಿಯೊವನ್ನು ಅಪ್ಲೋಡ್ ಮಾಡಲು ಅನುಮತಿಸುತ್ತಿಲ್ಲ. ಆದ್ದರಿಂದ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದೇನೆ' ಎಂದು ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಆದರೆ ಈ ವೈರಲ್ ಫೋಟೋಗಳು ಮಣಿಪುರದಿಂದ ಬಂದವುಗಳಾಗಿವೆ. ಜೊತೆಗೆ ಒಂದು ವರ್ಷಕ್ಕಿಂತ ಹಳೆಯದಾಗಿವೆ ಎಂದು ಇಂಡಿಯಾ ಟುಡೇ ತನಿಖೆಯು ಕಂಡುಹಿಡಿದಿದೆ.
ತನಿಖೆ
ವೈರಲ್ ಪೋಸ್ಟ್ಗೆ ಪ್ರತಿಕ್ರಿಯೆಯಾಗಿ, ಒಬ್ಬ ವ್ಯಕ್ತಿ ಚಿತ್ರಗಳು ಮಣಿಪುರದಲ್ಲಿ 2022 ರ ಘಟನೆಯಲ್ಲಿ ತೆಗೆಯಲಾಗಿವೆ ಎಂದು ಹೇಳಿದ್ದಾನೆ. ಈ ಹೇಳಿಕೆಯ ನಂತರ ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ಟ್ವಿಟರ್ನಲ್ಲಿ ಹುಡುಕಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖವಾಣಿ ಆರ್ಗನೈಸರ್ಗಾಗಿ ಕೆಲಸ ಮಾಡುವ ನಿಶಾಂತ್ ಆಜಾದ್ ಎಂಬ ವ್ಯಕ್ತಿಯಿಂದ ಜನವರಿ 31, 2022 ರಂದು ಈ ಫೋಟೋಗಳನ್ನು ಟ್ವೀಟ್ ಮಾಡಿರುವುದನ್ನು ನಾವು ನೋಡಿದ್ದೇವೆ. ಇದು ವಿಡಿಯೋವನ್ನು ಹೊಂದಿದ್ದು, ಅದರ ಸ್ಕ್ರೀನ್ಶಾಟ್ಗಳು ಈಗ ವೈರಲ್ ಆಗಿವೆ. ಕೆಲವು ಪುರುಷರು ಹೊಲದಲ್ಲಿ ಹಸುವಿನ ಮೃತದೇಹವನ್ನು ಪರೀಕ್ಷಿಸುತ್ತಿರುವುದನ್ನು ಕ್ಲಿಪ್ ತೋರಿಸಿದೆ. ಅದರ ಸೀಳಿದ ಗಂಟಲಿನಿಂದ ಸೋರಿಕೆಯಾದ ರಕ್ತವು ಬಿಜೆಪಿ ಧ್ವಜದ ಮೇಲೆ ಚಿಮುತ್ತಿದೆ.

ಟ್ವೀಟ್ನಲ್ಲಿ ಹೀಗೆ ಬರೆಯಲಾಗಿದೆ: "ಮಣಿಪುರ: ಬಿಜೆಪಿ ಧ್ವಜವನ್ನು ಇಟ್ಟುಕೊಂಡು ಮುಸ್ಲಿಮರು ಹಸುವನ್ನು ಕೊಂದರು. ಈ ಗೂಂಡಾಗಳು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಬಿಜೆಪಿ ಮಣಿಪುರ ಅಧ್ಯಕ್ಷ ಎ ಸರ್ದಾ ದೇವಿ ಅವರನ್ನು ನಿಂದಿಸಿದ್ದಾರೆ''.
ಫೆಬ್ರವರಿ 1, 2022 ರಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಇಂಫಾಲ್ ಫ್ರೀ ಪ್ರೆಸ್ ಸುದ್ದಿ ವರದಿಯ ಸ್ಕ್ರೀನ್ಶಾಟ್ನೊಂದಿಗೆ ಟ್ವೀಟ್ಗೆ ಪ್ರತಿಕ್ರಿಯಿಸಿ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಆ ವರ್ಷದ ಮಣಿಪುರ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಲಿಲಾಂಗ್ನಲ್ಲಿ ಬಿಜೆಪಿ ಧ್ವಜದ ಮೇಲೆ ಹಸುವನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿರುವ ಸುದ್ದಿ ವರದಿಯನ್ನು ಕಾಣಬಹುದು. ಈ ಕೃತ್ಯದಲ್ಲಿ ಭಾಗಿಯಾದ ನಜ್ಬುಲ್ ಹುಸೇನ್, ಅಬ್ದುರ್ ರಶೀದ್ ಮತ್ತು ಎಂಡಿ ಆರಿಫ್ ಖಾನ್ ವಿರುದ್ಧ ಪ್ರಾಣಿ ಕ್ರೌರ್ಯ ತಡೆ ಕಾಯ್ದೆ 1960 ರ ಅಡಿಯಲ್ಲಿ ಪ್ರಕರಣ ಮತ್ತು ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿ ಹಿಂದೂ ಮತ್ತು ದಿ ನಾಗಾಲ್ಯಾಂಡ್ ಪೋಸ್ಟ್ ಮತ್ತು ಟೈಮ್ಸ್ ಆಫ್ ಇಂಡಿಯಾದಂತಹ ಇತರ ಮಾಧ್ಯಮಗಳಿಂದ ಈ ಘಟನೆಯ ಕುರಿತು ಸುದ್ದಿ ವರದಿಗಳನ್ನು ಕಂಡುಕೊಳ್ಳಲಾಗಿದೆ. ಹೀಗಾಗಿ, ಈ ಘಟನೆಗೂ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ.

Fact Check
ಕ್ಲೇಮು
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವನ್ನು ಹಸು ಕುತ್ತಿಗೆ ಕತ್ತರಿಸುವ ಮೂಲಕ ಆಚರಣೆ
ಪರಿಸಮಾಪ್ತಿ
ವೈರಲ್ ವಿಡಿಯೋಕ್ಕೂ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೂ ಯಾವುದೇ ಸಂಬಂಧವಿಲ್ಲ
Rating
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications