Fact Check: ಪ್ರತಿಭಟನೆ ವೇಳೆ ಬಿಜೆಪಿ ನಾಯಕ ಮನೋಜ್ ತಿವಾರಿ ಮೇಲೆ ಹಲ್ಲೆ?
ನವದೆಹಲಿ, ಅಕ್ಟೋಬರ್ 18: ಬಿಜೆಪಿ ಸಂಸದ ಮನೋಜ್ ತಿವಾರಿ ಆಸ್ಪತ್ರೆಯ ಹಾಸಿಗೆಯ ಮೇಲೆ ತಲೆ ಮತ್ತು ಕುತ್ತಿಗೆಗೆ ಬ್ಯಾಂಡೇಜ್ ಹಾಕಿಕೊಂಡು ಮಲಗಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾತ್ರವಲ್ಲದೆ ಅವರನ್ನು ದೆಹಲಿಯಲ್ಲಿ ಸಾರ್ವಜನಿಕರು ಥಳಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಕೆಲವರು ಇದೇ ಸಂದೇಶವನ್ನಿಟ್ಟುಕೊಂಡು ವ್ಯಂಗ್ಯವಾಡುತ್ತಿದ್ದಾರೆ. ಹಾಗಾದರೆ ಪ್ರತಿಭಟನೆ ವೇಳೆ ನಿಜವಾಗಲೂ ಮನೋಜ್ ತಿವಾರಿ ಮೇಲೆ ಜನರು ಹಲ್ಲೆ ನಡೆಸಿದರೇ?. ಇದರ ಬಗ್ಗೆ ಇಂಡಿಯಾ ಟುಡೇ ಫೇಕ್ ನ್ಯೂಸ್ ವಾರ್ ರೂಮ್ ಫ್ಯಾಕ್ಟ್ ಚೆಕ್ ಮಾಡಿದೆ.
ಈ ಫೋಟೋವನ್ನು ತಿವಾರಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಅಕ್ಟೋಬರ್ 12 ರಂದು ತೆಗೆದುಕೊಳ್ಳಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಗಾಯಗೊಂಡ ನಂತರ ಸಂಸದರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಛಠ್ ಆಚರಣೆ; ಕೋವಿಡ್ ಮೂರನೇ ಅಲೆಯ ಭೀತಿ ಹಿನ್ನಲೆಯಲ್ಲಿ ಡಿಡಿಎಂಎ ಕೊರೊನಾ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಜಾತ್ರೆಗಳನ್ನು ಆಯೋಜಿಸುವಂತಿಲ್ಲ. ಯಾವುದೇ ಪ್ರಸಾದ ವಿತರಣೆ ಮಾಡುವಂತಿಲ್ಲ, ಗುಂಪುಗೂಡುವಿಕೆ ಮತ್ತು ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವನ್ನು ನಿಷೇಧಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ನದಿಯ ದಡದಲ್ಲಿ ಛಠ್ ಪೂಜೆಯನ್ನು ಮಾಡುವುದನ್ನು ನಿರ್ಬಂಧಿಸಲಾಗಿದೆ. ಮಾತ್ರವಲ್ಲದೆ ಕೋವಿಡ್ ಹರಡುವುದನ್ನು ತಪ್ಪಿಸಲು ಛಠ್ ಆಚರಣೆಗಳನ್ನು ಈ ವರ್ಷ ನಿರ್ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಈ ಹಿಂದೆ ಹೇಳಿದ್ದರು.
ಪ್ರತಿಭಟನೆ ನಡೆದಿದ್ದು ಯಾಕೆ?; ಕೋವಿಡ್ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ನದಿ ತೀರದಲ್ಲಿ ಛಠ್ ಆಚರಣೆಗಳನ್ನು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ನಿಷೇಧಿಸಿದೆ.
ಡಿಡಿಎಂಎ ಆದೇಶದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಸೆಪ್ಟೆಂಬರ್ 30ರ ಆದೇಶದಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ಜಾತ್ರೆಗಳು ಮತ್ತು ಆಹಾರ ಮಳಿಗೆಗಳನ್ನು ನಿಷೇಧಿಸಿತ್ತು. ನಗರದಲ್ಲಿ ಛಠ್ ಕೂಟಗಳನ್ನು ನಿಷೇಧಿಸಿದ ದೆಹಲಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟಿಸುತ್ತಿದ್ದರು.
— Manoj Tiwari 🇮🇳 (@ManojTiwariMP) October 12, 2021
ನಗರದಲ್ಲಿ ಛಠ್ ಕೂಟಗಳನ್ನು ನಿಷೇಧಿಸಿರುವ ದೆಹಲಿ ಸರ್ಕಾರದ ವಿರುದ್ಧ ಮನೋಜ್ ತಿವಾರಿ ಹಾಗೂ ಬೆಂಬಲಿಗರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟಿಸುತ್ತಿದ್ದರು. ಪ್ರತಿಭಟನೆಯ ಮೊದಲು ಅವರು ಪ್ರತಿಭಟನೆಗೆ ಸೇರುವಂತೆ ಜನರಿಗೆ ಮನವಿಯನ್ನು ಮಾಡಿದ್ದರು.
ಬಿಜೆಪಿ ವಕ್ತಾರರ ಸ್ಪಷ್ಟನೆ; ವೈರಲ್ ಹೇಳಿಕೆಯನ್ನು ಮತ್ತಷ್ಟು ಪರಿಶೀಲಿಸಲು ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಸಂಪರ್ಕಿಸಲಾಯಿತು. "ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರು ಮಾತ್ರ ಹಾಜರಿದ್ದರು. ಬ್ಯಾರಿಕೇಡ್ನಿಂದ ಬಿದ್ದು ತಿವಾರಿ ಗಾಯಗೊಂಡರು. ಯಾರೂ ಅವರ ಮೇಲೆ ಹಲ್ಲೆ ನಡೆಸಲಿಲ್ಲ ಹಾಗಾಗಿ ನಾವು ಯಾವುದೇ ದೂರು ದಾಖಲಿಸಿಲ್ಲ" ಎಂದು ಹೇಳಿದ್ದಾರೆ.
ದೆಹಲಿ ಪೊಲೀಸರು ಕೂಡ ತಿವಾರಿ ಅವರನ್ನು ದೂಷಿಸಿದ ಬಗ್ಗೆ ಯಾವುದೇ ದೂರು ಇಲ್ಲ ಎಂದು ದೃಢಪಡಿಸಿದ್ದಾರೆ. "ಪ್ರತಿಭಟನೆಯ ಸಮಯದಲ್ಲಿ ಅವರು ಗಾಯಗೊಂಡರು. ಅವರನ್ನು ನಿಂದಿಸಿದರೆಂದು ಯಾವುದೇ ದೂರು ಬಂದಿಲ್ಲ" ಎಂದು ದೆಹಲಿ ಪೊಲೀಸ್ ಪಿಆರ್ಒ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ.
ಆದ್ದರಿಂದ, ಭೋಜ್ಪುರಿ ಗಾಯಕನಾದ ರಾಜಕಾರಣಿಯನ್ನು ದೆಹಲಿಯಲ್ಲಿ ಸಾರ್ವಜನಿಕರು ಥಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ವರದಿಗಳು ನಿಜವಲ್ಲ ಎಂಬುದು ಸ್ಪಷ್ಟವಾಗಿದೆ.

Fact Check
ಕ್ಲೇಮು
ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನಾ ನಿರತ ಸಂಸದ ಮನೋಜ್ ತಿವಾರಿಗೆ ಸಾರ್ವಜನಿಕರಿಂದ ಥಳಿತ
ಪರಿಸಮಾಪ್ತಿ
ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನಾ ನಿರತ ಸಂಸದ ಮನೋಜ್ ತಿವಾರಿಗೆ ಸಾರ್ವಜನಿಕರಿಂದ ಥಳಿತವಾಗಿಲ್ಲ.
Rating
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications