Fact Check: ನಟಿ ದೀಪಿಕಾ ಪಡುಕೋಣೆ ಟಿ-ಶರ್ಟ್ ಮೇಲೆ ರೈತರ ಪರ ಬರಹ
ನವದೆಹಲಿ, ಸೆಪ್ಟೆಂಬರ್ 28: ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಯೆದುರು ವಿಚಾರಣೆಗೆ ಒಳಗಾಗುವ ಸಂದರ್ಭದಲ್ಲಿ ನಟಿ ದೀಪಿಕಾ ಪಡುಕೋಣೆ ಧರಿಸಿದ್ದ ಟಿ ಶರ್ಟ್ನಲ್ಲಿ ನಾನು ಭಾರತೀಯ ರೈತರ ಪರವಾಗಿ ನಿಲ್ಲುತ್ತೇನೆ ಎನ್ನುವ ಬರಹವಿತ್ತು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಅಂದಿನ ಫೋಟೊಗಳನ್ನು ತೆಗೆಸಿ ನೋಡಿದಾಗ ಚಿತ್ರವನ್ನು ಫೋಟೊಶಾಪ್ ಮಾಡಿರುವುದು ತಿಳಿದುಬಂದಿದೆ. ಹಾಗೂ ಆ ಫೋಟೊ ಕೂಡ 2018ರಲ್ಲಿ ತೆಗೆದಿದ್ದು ಎಂಬ ಮಾಹಿತಿ ಲಭ್ಯವಾಗಿದೆ.
ದೀಪಿಕಾ ಪಡುಕೋಣೆ ಏರ್ಪೋರ್ಟ್ನಿಂದ ಬರುವ ವೇಳೆ ಈ ಫೋಟೊ ಕ್ಲಿಕ್ಕಿಸಲಾಗಿತ್ತು. ಹಾಗೆಯೇ ದೀಪಿಕಾ ಅವರ ಟಿ ಶರ್ಟ್ ಮೇಲೆ ಯಾವುದೇ ಬರಹವೂ ಇರಲಿಲ್ಲ, ಖಾಲಿ ಇತ್ತು ಎಂಬುದು ಕೂಡ ತಿಳಿದುಬಂದಿದೆ.

ಮುಂಬೈನಲ್ಲಿ ಎನ್ಸಿಬಿ ತನಿಖೆ ವೇಳೆ ದೀಪಿಕಾ ಪಲಾಜೋ ಸ್ಯೂಟ್ ಧರಿಸಿದ್ದರು. ಹಾಗೆಯೇ ಮುಖದಲ್ಲಿ ಮಾಸ್ಕ್ ಕೂಡ ಇತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಮತ್ತು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎನ್ಸಿಬಿ ವಿಚಾರಣೆಗೆ ಹಾಜರಾಗಿದ್ದ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ಅವರ ಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಯ (ಎನ್ಸಿಬಿ) ವಿಚಾರಣೆಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ನಟಿ ಸಾರಾ ಅಲಿಖಾನ್ ಶನಿವಾರ ಬೆಳಿಗ್ಗೆ ಹಾಜರಾದರು.
ದೀಪಿಕಾ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್ ಅವರನ್ನು ಎನ್ಸಿಬಿಯ ವಿಶೇಷ ತಂಡ ಶುಕ್ರವಾರ ವಿಚಾರಣೆಗೆ ಒಳಪಡಿಸಿತ್ತು. ಶುಕ್ರವಾರ ರಾತ್ರಿಯೇ ದೀಪಿಕಾ ಅವರು ಕಾನೂನು ಸಲಹೆಗಾರರನ್ನು ಭೇಟಿಯಾಗಿದ್ದರು.
ವಿಚಾರಣೆ ವೇಳೆ ತಾವೂ ಹಾಜರಿರಬಹುದೇ ಎಂದು ದೀಪಿಕಾ ಪತಿ, ನಟ ರಣವೀರ್ ಸಿಂಗ್ ಮನವಿ ಮಾಡಿದ್ದರು ಎಂದು ವರದಿಯಾಗಿತ್ತು. ಆದರೆ, ಅಂತಹ ಯಾವುದೇ ಮನವಿ ಬಂದಿಲ್ಲ ಎಂದು ಬಳಿಕ ಎನ್ಸಿಬಿ ಸ್ಪಷ್ಟನೆ ನೀಡಿತ್ತು.
ಉಳಿದಂತೆ ನಟಿಯರಾದ ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಕೂಡ ಎನ್ಸಿಬಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದು ಈ ವೇಳೆ ಸಾರಾ ಅಲಿಖಾನ್ ಫೋನ್ ಅನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

Fact Check
ಕ್ಲೇಮು
ಎನ್ಸಿಬಿ ತನಿಖೆ ವೇಳೆ ನಟಿ ದೀಪಿಕಾ ಪಡುಕೋಣೆ ಭಾರತದ ರೈತರನ್ನು ಬೆಂಬಲಿಸುವಂತಹ ಬರಹ ಅವರ ಟಿ-ಶರ್ಟ್ ಮೇಲಿತ್ತು.
ಪರಿಸಮಾಪ್ತಿ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಚಿತ್ರ ಹಳೆಯದು, ದೀಪಿಕಾ ಪಡುಕೋಣೆ ಅವರ ಟಿ-ಶರ್ಟ್ ಮೇಲೆ ಅಂತಹ ಯಾವುದೇ ಬರಹವಿರಲಿಲ್ಲ. ಅವರು ಎನ್ಸಿಬಿ ತನಿಖೆ ವೇಳೆ ಪಲಾಜೋ ಸ್ಯೂಟ್ ಧರಿಸಿದ್ದರು.
Rating
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications