Fact Check: ಕೊರೊನಾ ಲಸಿಕೆ ಹಾಕಿಸಿಕೊಂಡವರು ಅನಸ್ತೇಶಿಯಾ ಪಡೆದರೆ ಸಾವು?
ನವದೆಹಲಿ, ಜೂನ್ 16: ಪ್ರತಿಯೊಬ್ಬರೂ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಲು ಹವಣಿಸುತ್ತಿದ್ದಾರೆ. ಆದರೆ ಒಮ್ಮೆ ಕೊರೊನಾ ಲಸಿಕೆ ಪಡೆದ ಬಳಿಕ ನೀವು ಯಾವುದೇ ಶಸ್ತ್ರ ಚಿಕಿತ್ಸೆಗೆ ಒಳಗಾಗುವುದಾದರೆ ಆ ಸಂದರ್ಭದಲ್ಲಿ ನೋವು ಮರೆಯಾಗುವಂತೆ ನೀಡುವ ಅನಸ್ತೇಶಿಯಾದಿಂದ ಸಾವು ಸಂಭವಿಸಬಹುದು ಎನ್ನುವ ವರದಿಗಳು ಹರಿದಾಡುತ್ತಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಕೊರೊನಾ ಲಸಿಕೆ ಪಡೆದವರು ಅನಸ್ತೇಶಿಯಾ ಪಡೆದರೆ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗುತ್ತಿದೆ.
ಆದರೆ ಲಸಿಕೆ ಪಡೆದವರು ಅನಸ್ತೇಶಿಯಾ ಪಡೆದರೆ ಸಾವು ಸಂಭವಿಸುತ್ತದೆ ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ, ಆದರೆ ಎರೆಡು ಲಸಿಕೆಯ ಪ್ರಯೋಜನ ಪಡೆಯಲು ಲಸಿಕೆ ಪಡೆದ ಬಳಿಕ ತಕ್ಷಣವೇ ಯಾವುದೇ ಶಸ್ತ್ರ ಚಿಕಿತ್ಸೆಗೆ ಒಳಗಾಗದಂತೆ ತಜ್ಞರು ಸಲಹೆ ನೀಡುತ್ತಾರೆ.

ಯಾವುದೇ ಲಸಿಕೆ ತಯಾರಕರು ಲಸಿಕೆ ಹಾಕಿಸಿಕೊಂಡವರನ್ನು ಅರಿವಳಿಕೆ ಒಳಗೊಂಡ ಶಸ್ತ್ರಚಿಕಿತ್ಸೆಯಿಂದ ದೂರವಿರುವಂತೆ ಹೇಳಿಲ್ಲ. ಐಸಿಎಂಆರ್ನ ಸಾಂಕ್ರಾಮಿಕ ರೋಗಗಳ ವಿಭಾಗದ ಮುಖ್ಯಸ್ಥ ಡಾ. ಸಮಿರನ್ ಪಾಂಡಾ ಹೇಳುವ ಪ್ರಕಾರ, '' ಕೊರೊನಾ ಲಸಿಕೆ ಪಡದವರು ಅನಸ್ತೇಶಿಯಾ ಪಡೆದರೆ ಸಾವು ಸಂಭವಿಸುವುದಿಲ್ಲ, ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ, ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ'' ಎಂದು ಹೇಳಿದ್ದಾರೆ.
ಮಲೇಷ್ಯನ್ ಸೊಸೈಟಿ ಆಫ್ ಅನಸ್ತೇಸಿಯೋಲಾಜಿಸ್ಟ್ ಆಂಡ್ ಕಾಲೇಜ್ ಆಫ್ ಅನಸ್ತೇಶಿಯಾಲಾಜಿಸ್ಟ್ ಕೂಡ ಈ ಸುದ್ದಿ ಜನರ ಹಾದಿಯನ್ನು ತಪ್ಪಿಸುವಂತದ್ದು ಎಂದು ಹೇಳಿದೆ.
ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಈ ಕುರಿತು ಮಾತನಾಡಿ, ''ವಾಟ್ಸಾಪ್ನಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇಲ್ಲಿಯವರೆಗೆ ಲಸಿಕೆ ಪಡೆದವರು ಅನಸ್ತೇಶಿಯಾದಿಂದ ಮೃತಪಟ್ಟ ಯಾವುದೇ ಘಟನೆಗಳು ವರದಿಯಾಗಿಲ್ಲ'' ಎಂದು ತಿಳಿಸಿದ್ದಾರೆ.

Fact Check
ಕ್ಲೇಮು
ಕೊರೊನಾ ಲಸಿಕೆ ಪಡೆದಿದ್ದವರು ಅನಸ್ತೇಶಿಯಾ ಪಡೆದರೆ ಸಾವು ಸಂಭವಿಸುತ್ತದೆ.
ಪರಿಸಮಾಪ್ತಿ
ಕೊರೊನಾ ಲಸಿಕೆ ಪಡೆದಿದ್ದವರು ಕೊರೊನಾ ಲಸಿಕೆ ಪಡೆದರೆ ಸಾವು ಸಂಭವಿಸುತ್ತದೆ ಎಂಬುದು ಸುಳ್ಳು ಅದಕ್ಕೆ ಯಾವುದೇ ಪುರಾವೆ ಇಲ್ಲ.
Rating
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications