Fake: ದೀಪಿಕಾ, ರಣವೀರ್ ಜೊತೆ ಇರುವುದು ದಾವೂದ್ ಇಬ್ರಾಹಿಂ ಅಲ್ಲ
ನವದೆಹಲಿ, ಆಗಸ್ಟ್ 24: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಭಾಗವಹಿಸಿದ್ದ ಸಭೆಯಲ್ಲಿ ದಾವೂದ್ ಇಮ್ರಾಹಿಂ ಕೂಡ ಇದ್ದ ಎನ್ನುವ ವಿಷಯ ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಅದಕ್ಕೆ ಕಾರಣವಾಗಿದ್ದು ಒಂದು ಫೋಟೊ, ಆ ಚಿತ್ರ ನೋಡಿ ದಾವೂದ್ ಕೂಡ ಭಾಗಿಯಾಗಿದ್ದರು ಎನ್ನಲಾಗಿತ್ತು, ಸುಶಾಂತ್ ಜಸ್ಟೀಸ್ ಗ್ರೂಪ್ ಎನ್ನುವ ಗ್ರೂಪ್ ಈ ಚಿತ್ರವನ್ನು ಅಪ್ಲೋಡ್ ಮಾಡಿತ್ತು.
ಆ ಚಿತ್ರದಲ್ಲಿ ಕೆಂಪು ಬಣ್ಣದಲ್ಲಿ ಮಾರ್ಕ್ ಮಾಡಿರುವ ವ್ಯಕ್ತಿ ದಾವೂದ್ ಇಬ್ರಾಹಿಂ ಎಂದು ಹೇಳಲಾಗಿತ್ತು. ಆ ಚಿತ್ರದಲ್ಲಿರುವವರು ದಾವೂದ್ ಇಬ್ರಾಹಿಂ ಅಲ್ಲ ಸಂಜಯ್ ಲೀಲಾ ಬನ್ಸಾಲಿ , ಈ ಫೋಟೊ 2013ರದ್ದು, ಗೋಲಿಯೋಂಕಿ ರಾಸ್ಲೀಲಾ ರಾಮ್ಲೀಲಾ ಶೂಟಿಂಗ್ ಸೆಟ್ನಲ್ಲಿ ತೆಗೆದಿರುವ ಚಿತ್ರವಿದು ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂದೀಪ್ ಸಿಂಗ್ ಇನ್ಸ್ಟಾಗ್ರಾಂನಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಂಜಯ್ ಲೀಲಾ ಬನ್ಸಾಲಿ, ದೀಪಿಕಾ, ರಣವೀರ್, ಆರ್ ವರ್ಮನ್, ಸಿದ್ಧಾರ್ಥ್ ಹಾಗೂ ವಾಸಿಖ್ ಖಾನ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಇಫ್ತಾರ್ ಕೂಟದಲ್ಲಿ ಆ ಚಿತ್ರವನ್ನು ತೆಗೆದಿದ್ದು ಎಂದು ನೆನಪಿಸಿಕೊಂಡಿದ್ದಾರೆ.
ಸಾಕಷ್ಟು ಮಂದಿ ಇನ್ಸ್ಟಾಗ್ರಾಂ ಬಳಕೆದಾರರು ಅವರು ದಾವೂದ್ ಅಲ್ಲವಾಸಿಖ್ ಖಾನ್ ಎಂದು ಹೇಳಿದ್ದರು. ವಾಸಿಖ್ ಖಾನ್ ರಾಮ್ಲೀಲಾ ಸೇರಿದಂತೆ ಸಾಕಷ್ಟು ಸಿನಿಮಾ ನಿರ್ದೇಶನ ಮಾಡಿದ್ದಾರೆ.
ದಾವೂದ್ ಇಬ್ರಾಹಿಂ ಪಾಕಿಸ್ತಾನದ ನೆಲದಲ್ಲೇ ಇದ್ದಾನೆ ಎಂದು ಪಾಕಿಸ್ತಾನ ಹೇಳಿಕೆ ನೀಡಿ, ಬಳಿಕ ಇಲ್ಲ ಇಲ್ಲ ದಾವೂದ್ ಇಲ್ಲಿಲ್ಲ ಎಂದು ಹೇಳಿತ್ತು. ಪಾಕಿಸ್ತಾನವು ಕಳೆದ 20 ವರ್ಷಗಳಿಂದ ದಾವೂದ್ ಇಬ್ರಾಹಿಂಗೆ ಆಶ್ರಯ ನೀಡಿದೆ ಎಂದು ಭಾರತೀಯ ಏಜೆನ್ಸಿಗಳು ಹೇಳುತ್ತಿವೆ.

Fact Check
ಕ್ಲೇಮು
ದೀಪಿಕಾ, ರಣವೀರ್ ಜೊತೆ ಇರುವುದು ದಾವೂದ್ ಇಬ್ರಾಹಿಂ
ಪರಿಸಮಾಪ್ತಿ
ನಟಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಅವರು ಭಾಗವಹಿಸಿದ್ದ ಸಭೆಯಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಇದ್ದರು ಎಂಬ ಸುಳ್ಳು ಸುದ್ದಿ ಹರಿದಾಡಿತ್ತು. ಆದರೆ ಅದು ಸುಳ್ಳು ಎಂದು ಸಂದೀಪ್ ಸ್ಪಷ್ಟಪಡಿಸಿದ್ದಾರೆ.
Rating
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications