Fact Check: ಗಾಲ್ವಾನ್ ಕಣಿವೆಯಲ್ಲಿ ಸೈನಿಕರು ಗಣಪತಿ ಹಬ್ಬ ಆಚರಿಸಿದರೇ?
ನವದೆಹಲಿ, ಆಗಸ್ಟ್ 31: ಭಾರತ ಮತ್ತು ಚೀನಾ ನಡುವೆ ಗಡಿ ಭಾಗದಲ್ಲಿ ಉದ್ವಿಗ್ನತೆ ಉಂಟಾಗಿದ್ದ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆಯ ಯೋಧರು ಇತ್ತೀಚೆಗೆ ಗಣೇಶ ಚತುರ್ಥಿ ಆಚರಣೆ ಮಾಡಿದ್ದರು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.
'ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಗಣಪತಿ ಬಪ್ಪಾ. ಲಡಾಖ್ನಲ್ಲಿರುವ ನಮ್ಮ ಉತ್ಸಾಹಿ ಸೈನಿಕರಿಗೆ ಜೈ ಹಿಂದ್' ಎಂದು ಕ್ಯಾಪ್ಷನ್ ನೀಡಲಾಗಿದೆ. ಭಾರತೀಯ ಸೇನೆಯ ಸೈನಿಕರು ಡ್ರಮ್ಗಳನ್ನು ಬಾರಿಸುತ್ತಾ ಅದರ ಲಯಕ್ಕೆ ತಕ್ಕಂತೆ ನರ್ತಿಸುವುದನ್ನು ವಿಡಿಯೋ ತೋರಿಸುತ್ತದೆ. ಈ ವಿಡಿಯೋವನ್ನು ಟ್ವಿಟ್ಟರ್ ಹಾಗೂ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಹಂಚಿಕೊಂಡಿದ್ದು, ಭಾರತೀಯ ಸೈನಿಕರಲ್ಲಿ ಉತ್ಸಾಹ ತುಂಬಿಕೊಂಡಂತೆ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.
ಇದು ಭಾರತೀಯ ಸೇನೆಯ ಸೈನಿಕರು ಗಣೇಶ ಚತುರ್ಥಿ ಆಚರಿಸಿದ ವಿಡಿಯೋ ಎನ್ನುವುದು ಸತ್ಯ. ಗಾಲ್ವಾನ್ ಕಣಿವೆಯಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿರುವ ಈ ವಿಡಿಯೋ ಈಗಿನದ್ದಲ್ಲ. ಇದು ಶಿಂಗೋ ನದಿ ಕಣಿವೆಯಲ್ಲಿ 2019ರಲ್ಲಿ ಸೆರೆಹಿಡಿಯಲಾಗಿದ್ದ ವಿಡಿಯೋ ಎನ್ನುವುದನ್ನು 'ಒನ್ ಇಂಡಿಯಾ' ನಡೆಸಿದ ಪರಿಶೀಲನೆ ತಿಳಿಸಿದೆ.

ಈ ವಿಡಿಯೋವನ್ನು 2019ರ ಸೆಪ್ಟೆಂಬರ್ನಲ್ಲಿ ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗಿತ್ತು. ಕಾರ್ಗಿಲ್ ಸಮೀಪದ ಶಿಂಗೋ ನದಿ ಕಣಿವೆ ಬಳಿ 2019ರಲ್ಲಿ ಮರಾಠಾ ಲೈಟ್ ಇನ್ಫ್ಯಾಂಟ್ರಿ ರೆಜಿಮೆಂಟ್ ಗಣೇಶ ಚತುರ್ಥಿ ಆಚರಿಸಿದ ಸಂದರ್ಭದಲ್ಲಿ ಚಿತ್ರೀಕರಿಸಲಾದ ವಿಡಿಯೋ ಇದು. ಇಲ್ಲಿಂದ ಗಾಲ್ವಾನ್ ಕಣಿವೆ ಸುಮಾರು 229 ಕಿ.ಮೀ. ದೂರದಲ್ಲಿದೆ.

Fact Check
ಕ್ಲೇಮು
ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೈನಿಕರು ಗಣೇಶ ಚತುರ್ಥಿ ಆಚರಿಸಿದರು.
ಪರಿಸಮಾಪ್ತಿ
ಇದು ಶಿಂಗೋ ನದಿ ಕಣಿವೆಯಲ್ಲಿ ಭಾರತೀಯ ಸೈನಿಕರು ಆಚರಿಸಿದ ಗಣೇಶ ಹಬ್ಬದ ಹಳೆಯ ವಿಡಿಯೋ.
Rating
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications