Fact Check ಸಾವಿನ ಸುದ್ದಿ: ಈಗ ಕಪಿಲ್ ದೇವ್ ಸರದಿ
ನವದೆಹಲಿ, ನವೆಂಬರ್ 3: ರಾಜಕಾರಣಿಗಳು, ಸಿನಿಮಾ ರಂಗದವರು ಮತ್ತು ಕ್ರೀಡಾ ಲೋಕದ ಜನಪ್ರಿಯರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅವರ ನಿಧನದ ಬಗ್ಗೆ ಸುಳ್ಳು ಸುದ್ದಿ ಹರಡಿಸುವ ಚಾಳಿ ಮುಂದುವರಿದಿದೆ. ಸಾಮಾಜಿಕ ಜಾಲತಾಣದಲ್ಲಿ ಹುಟ್ಟಿಕೊಳ್ಳುವ ಇಂತಹ ಸುದ್ದಿಗಳನ್ನು ಜನರು ಬೇಗನೆ ನಂಬಿ ಹಂಚಿಕೊಳ್ಳುತ್ತಾರೆ. ಈ ಹುಸಿ ಸಾವಿನ ಸುದ್ದಿಯ ಸಾಲಿಗೆ ಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಅವರನ್ನೂ ಜನರು ಸೇರಿಸಿಬಿಟ್ಟಿದ್ದಾರೆ.
ಜಾಗತಿಕ ಕ್ರಿಕೆಟ್ ಕಂಡ ದಿಗ್ಗಜ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದ್ದರಿಂದ ಪುನಃ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹೇಳುವ ಅನೇಕ ಟ್ವೀಟ್ಗಳು ಅನಾಮಿಕ ಖಾತೆಗಳಲ್ಲಿ ಹರಿದಾಡುತ್ತಿದೆ.
ಕಳೆದ ತಿಂಗಳು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 61 ವರ್ಷದ ಕಪಿಲ್, ಕೆಲವು ದಿನಗಳ ಚಿಕಿತ್ಸೆ ನಂತರ ಬಿಡುಗಡೆ ಹೊಂದಿದ್ದರು. ಅವರ ಅಪಧವನಿಯಲ್ಲಿದ್ದ ಬ್ಲಾಕ್ಅನ್ನು ತೆರವುಗೊಳಿಸಿ ಹೃದಯಕ್ಕೆ ಸಹಜ ರಕ್ತಸಂಚಾರ ನಡೆಯುವಂತೆ ಆಂಜಿಯೋಪ್ಲಾಸ್ಟಿ ನಡೆಸಲಾಗಿತ್ತು. ಇದರ ನಂತರ ಅವರು ಆರೋಗ್ಯವಾಗಿದ್ದಾರೆ.

ಕಪಿಲ್ ದೇವ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿರುವುದರ ಬಗ್ಗೆ 1983ರ ವಿಶ್ವಕಪ್ ವಿಜೇತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಮದನ್ ಲಾಲ್, ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನಮ್ಮ ಸಹೋದ್ಯೋಗಿಯ ಆರೋಗ್ಯದ ಕುರಿತಾದ ಊಹಾಪೋಹಗಳು ಸಂವೇದನೆ ರಹಿತ ಮತ್ತು ಬೇಜವಾಬ್ದಾರಿಯುತ. ನಮ್ಮ ಸ್ನೇಹಿತ ಕಪಿಲ್ ದೇವ್ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಪ್ರತಿದಿನ ಅವರ ಆರೋಗ್ಯ ಉತ್ತಮವಾಗುತ್ತಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಒತ್ತಡದಲ್ಲಿ ಅವರ ಕುಟುಂಬವಿದೆ. ದಯವಿಟ್ಟು ಸಂವೇದನೆ ಉಳಿಸಿಕೊಳ್ಳೋಣ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಆಂಜಿಯೋಪ್ಲಾಸ್ಟಿಗೆ ಒಳಗಾದ ವಾರದ ಬಳಿಕ ಕಪಿಲ್ ದೇವ್, ತಾವು ಚೇತರಿಸಿಕೊಂಡಿದ್ದು ಎಲ್ಲರನ್ನೂ ಶೀಘ್ರದಲ್ಲಿಯೇ ಭೇಟಿಯಾಗಲು ಬಯಸಿರುವುದಾಗಿ 1983ರ ವಿಶ್ವಕಪ್ ತಂಡದ ಸಹೋದ್ಯೋಗಿಗಳನ್ನು ಉದ್ದೇಶಿಸಿ ಹೇಳಿದ್ದರು.

Fact Check
ಕ್ಲೇಮು
ಕಪಿಲ್ ದೇವ್ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದು, ಮೃತಪಟ್ಟಿದ್ದಾರೆ.
ಪರಿಸಮಾಪ್ತಿ
ಕಪಿಲ್ ದೇವ್ ಮತ್ತೆ ಆಸ್ಪತ್ರೆಗೆ ದಾಖಲಾಗಿಲ್ಲ, ಅವರು ಚೇತರಿಸಿಕೊಳ್ಳುತ್ತಿದ್ದಾರೆ.
Rating
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications