Fact Check: ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ತುಟ್ಟಿಭತ್ಯೆ ಹೆಚ್ಚಳ?
ಕೇಂದ್ರ ಸರ್ಕಾರ ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಳ ಮಾಡಿದೆ, ಜುಲೈ 1, 2022ರಿಂದ ಜಾರಿಗೆ ಬರಲಿದೆ ಎನ್ನುವ ಪತ್ರವೊಂದು ವೈರಲ್ ಆಗಿದ್ದು, ಈ ಸುದ್ದಿ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಕೇಂದ್ರದ ನೋಡಲ್ ಏಜೆನ್ಸಿಯಾದ ಸಾರ್ವಜನಿಕ ಮಾಹಿತಿ ಬ್ಯೂರೋದ (ಪಿಐಬಿ) ಸತ್ಯ ಪರಿಶೀಲನಾ ವಿಭಾಗವು ಈ ಬಗ್ಗೆ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) 34 ರಿಂದ 38 ರಷ್ಟು ಸ್ವೀಕರಿಸಲಾಗಿದೆ ಎಂದು ವಾಟ್ಸಾಪ್ನಲ್ಲಿ ಹರಿದಾಡುತ್ತಿರುವ ಪತ್ರ ಸುಳ್ಳು, ಆ ರೀತಿಯ ಯಾವುದೇ ಆದೇಶವನ್ನು ಕೇಂದ್ರ ಸರ್ಕಾರ ಮಾಡಿಲ್ಲ ಎಂದು ಹೇಳಿದೆ.
"ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಅನುದಾನ- ಪರಿಷ್ಕೃತ ದರಗಳು ಜುಲೈ 1, 2022 ರಿಂದ ಜಾರಿಗೆ ಬರುತ್ತವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ. "ಕೇಂದ್ರ ಸರ್ಕಾರಿ ನೌಕರರಿಗೆ ಪಾವತಿಸಬೇಕಾದ ತುಟ್ಟಿಭತ್ಯೆಯನ್ನು ಜುಲೈ 1, 2022 ರಿಂದ ಜಾರಿಗೆ ಬರುವಂತೆ ಮೂಲ ವೇತನದ ತುಟ್ಟಿಭತ್ಯೆಯನ್ನು ಶೇಕಡ 34 ರಿಂದ ಶೇಕಡ 38 ಕ್ಕೆ ಹೆಚ್ಚಿಸಲು ನಿರ್ಧರಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ" ಎಂದು ವೈರಲ್ ಆಗಿರುವ ಪತ್ರದಲ್ಲಿ ಹೇಳಲಾಗಿದೆ.

ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಆದೇಶ ಪತ್ರ ಹೊರಡಿಸಿಲ್ಲ
ಇದು ಅಧಿಕೃತವಾಗಿ ಕಾಣುವಂತೆ ಮೆಮೊರಾಂಡಮ್ ಸಂಖ್ಯೆಯನ್ನು ಸಹ ಹೊಂದಿದೆ. ಪತ್ರವು ಭಾರತ ಸರ್ಕಾರದ ಉಪ ಕಾರ್ಯದರ್ಶಿ ನಿರ್ಮಲಾ ದೇವ್ ಅವರ ಸಹಿಯನ್ನು ಸಹ ಹೊಂದಿದೆ. ಇದು ಸರ್ಕಾರದ ಅಧಿಕೃತ ಆದೇಶ ಎಂದೇ ನಂಬಿ, ವಾಟ್ಸಾಪ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಟ್ವಿಟರ್ನಲ್ಲಿ "ನಕಲಿ ಆದೇಶ" ದ ಚಿತ್ರವನ್ನು ಹಂಚಿಕೊಂಡಿರುವ ಪಿಐಬಿ ಫ್ಯಾಕ್ಟ್ ಚೆಕ್ ತಂಡವು, ವಾಟ್ಸಾಪ್ನಲ್ಲಿ ಹರಡುತ್ತಿರುವ ನಕಲಿ ಆದೇಶವು ಜುಲೈ 1, 2022 ರಿಂದ ಹೆಚ್ಚುವರಿ ಕಂತು ತುಟ್ಟಿ ಭತ್ಯೆ ಜಾರಿಗೆ ಬರಲಿದೆ ಎಂದು ಹೇಳುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದುದಾಗಿದೆ. ಹಣಕಾಸು ಇಲಾಖೆ ಅಂತಹ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಹೇಳಿದೆ. ಹಣಕಾಸು ಸಚಿವಾಲಯ ಜ್ಞಾಪಕ ಪತ್ರವನ್ನು ನೀಡಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

Fact Check
ಕ್ಲೇಮು
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇಕಡಾ 4 ರಷ್ಟು ಹೆಚ್ಚಳ ಆದೇಶ ಪತ್ರ
ಪರಿಸಮಾಪ್ತಿ
ಕೇಂದ್ರ ಸರ್ಕಾರ ತನ್ನ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಳ ಮಾಡಿದೆ ಎನ್ನುವ ಆದೇಶ ಪತ್ರ ವೈರಲ್ ಆಗಿದೆ.
Rating
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications