Fact Check: ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ತುಟ್ಟಿಭತ್ಯೆ ಹೆಚ್ಚಳ?
ಕೇಂದ್ರ ಸರ್ಕಾರ ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಳ ಮಾಡಿದೆ, ಜುಲೈ 1, 2022ರಿಂದ ಜಾರಿಗೆ ಬರಲಿದೆ ಎನ್ನುವ ಪತ್ರವೊಂದು ವೈರಲ್ ಆಗಿದ್ದು, ಈ ಸುದ್ದಿ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಕೇಂದ್ರದ ನೋಡಲ್ ಏಜೆನ್ಸಿಯಾದ ಸಾರ್ವಜನಿಕ ಮಾಹಿತಿ ಬ್ಯೂರೋದ (ಪಿಐಬಿ) ಸತ್ಯ ಪರಿಶೀಲನಾ ವಿಭಾಗವು ಈ ಬಗ್ಗೆ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) 34 ರಿಂದ 38 ರಷ್ಟು ಸ್ವೀಕರಿಸಲಾಗಿದೆ ಎಂದು ವಾಟ್ಸಾಪ್ನಲ್ಲಿ ಹರಿದಾಡುತ್ತಿರುವ ಪತ್ರ ಸುಳ್ಳು, ಆ ರೀತಿಯ ಯಾವುದೇ ಆದೇಶವನ್ನು ಕೇಂದ್ರ ಸರ್ಕಾರ ಮಾಡಿಲ್ಲ ಎಂದು ಹೇಳಿದೆ.
"ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಅನುದಾನ- ಪರಿಷ್ಕೃತ ದರಗಳು ಜುಲೈ 1, 2022 ರಿಂದ ಜಾರಿಗೆ ಬರುತ್ತವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ. "ಕೇಂದ್ರ ಸರ್ಕಾರಿ ನೌಕರರಿಗೆ ಪಾವತಿಸಬೇಕಾದ ತುಟ್ಟಿಭತ್ಯೆಯನ್ನು ಜುಲೈ 1, 2022 ರಿಂದ ಜಾರಿಗೆ ಬರುವಂತೆ ಮೂಲ ವೇತನದ ತುಟ್ಟಿಭತ್ಯೆಯನ್ನು ಶೇಕಡ 34 ರಿಂದ ಶೇಕಡ 38 ಕ್ಕೆ ಹೆಚ್ಚಿಸಲು ನಿರ್ಧರಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ" ಎಂದು ವೈರಲ್ ಆಗಿರುವ ಪತ್ರದಲ್ಲಿ ಹೇಳಲಾಗಿದೆ.

ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಆದೇಶ ಪತ್ರ ಹೊರಡಿಸಿಲ್ಲ
ಇದು ಅಧಿಕೃತವಾಗಿ ಕಾಣುವಂತೆ ಮೆಮೊರಾಂಡಮ್ ಸಂಖ್ಯೆಯನ್ನು ಸಹ ಹೊಂದಿದೆ. ಪತ್ರವು ಭಾರತ ಸರ್ಕಾರದ ಉಪ ಕಾರ್ಯದರ್ಶಿ ನಿರ್ಮಲಾ ದೇವ್ ಅವರ ಸಹಿಯನ್ನು ಸಹ ಹೊಂದಿದೆ. ಇದು ಸರ್ಕಾರದ ಅಧಿಕೃತ ಆದೇಶ ಎಂದೇ ನಂಬಿ, ವಾಟ್ಸಾಪ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಟ್ವಿಟರ್ನಲ್ಲಿ "ನಕಲಿ ಆದೇಶ" ದ ಚಿತ್ರವನ್ನು ಹಂಚಿಕೊಂಡಿರುವ ಪಿಐಬಿ ಫ್ಯಾಕ್ಟ್ ಚೆಕ್ ತಂಡವು, ವಾಟ್ಸಾಪ್ನಲ್ಲಿ ಹರಡುತ್ತಿರುವ ನಕಲಿ ಆದೇಶವು ಜುಲೈ 1, 2022 ರಿಂದ ಹೆಚ್ಚುವರಿ ಕಂತು ತುಟ್ಟಿ ಭತ್ಯೆ ಜಾರಿಗೆ ಬರಲಿದೆ ಎಂದು ಹೇಳುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದುದಾಗಿದೆ. ಹಣಕಾಸು ಇಲಾಖೆ ಅಂತಹ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಹೇಳಿದೆ. ಹಣಕಾಸು ಸಚಿವಾಲಯ ಜ್ಞಾಪಕ ಪತ್ರವನ್ನು ನೀಡಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

Fact Check
ಕ್ಲೇಮು
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇಕಡಾ 4 ರಷ್ಟು ಹೆಚ್ಚಳ ಆದೇಶ ಪತ್ರ
ಪರಿಸಮಾಪ್ತಿ
ಕೇಂದ್ರ ಸರ್ಕಾರ ತನ್ನ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಳ ಮಾಡಿದೆ ಎನ್ನುವ ಆದೇಶ ಪತ್ರ ವೈರಲ್ ಆಗಿದೆ.
Rating
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications