Fact check: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ನಿಜವೇ?
ಕೊಲಂಬೋ ಜುಲೈ 20; ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಇಂದು ನೂತನ ಅಧ್ಯಕ್ಷರು ಆಯ್ಕೆಯಾಗಿದ್ದಾರೆ. ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಪ್ರಭಾವ ಬೀರಿದೆ ಎಂದು ಆರೋಪಿಸಲಾಗಿದೆ. ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಮೇಲೆ ಪ್ರಭಾವ ಬೀರಲು ಭಾರತದ ಪ್ರಯತ್ನಗಳ ವರದಿಗಳನ್ನು ಭಾರತ ಸರ್ಕಾರ ಬುಧವಾರ ನಿರಾಕರಿಸಿದೆ. ಭಾರತೀಯ ಹೈಕಮಿಷನ್ ಇದನ್ನು ಸಂಪೂರ್ಣವಾಗಿ "ಸುಳ್ಳು" ಮತ್ತು "ಆಧಾರರಹಿತ" ಎಂದು ಹೇಳಿದೆ.
ಈ ಸಂಬಂಧ ಬುಧವಾರ ಟ್ವೀಟ್ ಮಾಡಿರುವ ಭಾರತೀಯ ಹೈಕಮಿಷನ್, "ಚುನಾವಣೆಗೆ ಸಂಬಂಧಿಸಿದಂತೆ ಶ್ರೀಲಂಕಾದಲ್ಲಿನ ರಾಜಕೀಯ ನಾಯಕರ ಮೇಲೆ ಪ್ರಭಾವ ಬೀರಲು ಭಾರತದ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಪ್ರಯತ್ನಗಳು ನಡೆದಿವೆ ಎನ್ನುವ ಆಧಾರರಹಿತ ಹೇಳಿಕೆಯಾಗಿದೆ. ಶ್ರೀಲಂಕಾ ಅಧ್ಯಕ್ಷರ ಬಗ್ಗೆ ನಾವು ಸಂಪೂರ್ಣವಾಗಿ ಊಹಾತ್ಮಕ ಮಾಧ್ಯಮ ವರದಿಗಳನ್ನು ನೋಡಿದ್ದೇವೆ. ಈ ಮಾಧ್ಯಮ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ'' ಎಂದಿದೆ.
ಈ ಮಾಧ್ಯಮ ವರದಿ ಸಂಪೂರ್ಣ ಸುಳ್ಳು ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ. ಇದು ಸ್ಪಷ್ಟವಾಗಿ ಯಾರೊಬ್ಬರ ಕಲ್ಪನೆಯಾಗಿದೆ. ಪ್ರಜಾಸತ್ತಾತ್ಮಕ ವಿಧಾನಗಳು ಮತ್ತು ಮೌಲ್ಯಗಳು, ಸ್ಥಾಪಿತ ಸಂಸ್ಥೆಗಳು ಮತ್ತು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ಭಾರತವು ಶ್ರೀಲಂಕಾದ ಜನರ ಆಕಾಂಕ್ಷೆಗಳನ್ನು ಬೆಂಬಲಿಸುತ್ತದೆ ಮತ್ತು ಇತರ ಯಾವುದೇ ದೇಶದ ಆಂತರಿಕ ವ್ಯವಹಾರಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾವು ಹೇಳಲು ಬಯಸುತ್ತೇವೆ.

ಮತ್ತೊಂದೆಡೆ, ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಆಯ್ಕೆಯ ನಂತರ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನಾಕಾರರು ರನಿಲ್ ವಿಕ್ರಮಸಿಂಘೆ ಅವರನ್ನು ವಿರೋಧಿಸುತ್ತಿದ್ದಾರೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ರನಿಲ್ ವಿಕ್ರಮಸಿಂಘೆ, ಡಳಸ್ ಅಳುಗಪೆರುಮ ಮತ್ತು ಎಡಪಂಥೀಯ ಜನತಾ ವಿಮುಕ್ತಿ ಪೆರಮುನ (ಜೆವಿಪಿ) ನಾಯಕ ಅನುರ ಕುಮಾರ ಡಿಸ್ಸನಾಯಕೆ ನಡುವೆ ಪೈಪೋಟಿ ಏರ್ಪಟ್ಟಿತ್ತು.
ಇವರಲ್ಲಿ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಸಂಸತ್ತಿನ ಮತದಾನದಲ್ಲಿ ಅವರು 134 ಮತಗಳನ್ನು ಪಡೆದರು. ಚುನಾವಣೆಯಲ್ಲಿ ಡಳಸ್ ಅಳುಗಪೆರುಮ ಅವರು 82 ಮತಗಳನ್ನು ಪಡೆದರು. 223 ಸದಸ್ಯ ಬಲದ ಸಂಸತ್ತಿನಲ್ಲಿ 4 ಮತಗಳು ರದ್ದಾಗಿದ್ದರೆ 2 ಸಂಸದರು ಮತ ಚಲಾಯಿಸಲಿಲ್ಲ. ಶ್ರೀಲಂಕಾದಲ್ಲಿ 1978 ರಿಂದ ಮೊದಲ ಬಾರಿಗೆ, ಸಂಸದರಿಂದ ರಹಸ್ಯ ಮತದಾನದ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

Fact Check
ಕ್ಲೇಮು
ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪವಿದೆ.
ಪರಿಸಮಾಪ್ತಿ
ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪವಿಲ್ಲ ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.
Rating
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications