Fact check: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ನಿಜವೇ?
ಕೊಲಂಬೋ ಜುಲೈ 20; ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಇಂದು ನೂತನ ಅಧ್ಯಕ್ಷರು ಆಯ್ಕೆಯಾಗಿದ್ದಾರೆ. ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಪ್ರಭಾವ ಬೀರಿದೆ ಎಂದು ಆರೋಪಿಸಲಾಗಿದೆ. ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಮೇಲೆ ಪ್ರಭಾವ ಬೀರಲು ಭಾರತದ ಪ್ರಯತ್ನಗಳ ವರದಿಗಳನ್ನು ಭಾರತ ಸರ್ಕಾರ ಬುಧವಾರ ನಿರಾಕರಿಸಿದೆ. ಭಾರತೀಯ ಹೈಕಮಿಷನ್ ಇದನ್ನು ಸಂಪೂರ್ಣವಾಗಿ "ಸುಳ್ಳು" ಮತ್ತು "ಆಧಾರರಹಿತ" ಎಂದು ಹೇಳಿದೆ.
ಈ ಸಂಬಂಧ ಬುಧವಾರ ಟ್ವೀಟ್ ಮಾಡಿರುವ ಭಾರತೀಯ ಹೈಕಮಿಷನ್, "ಚುನಾವಣೆಗೆ ಸಂಬಂಧಿಸಿದಂತೆ ಶ್ರೀಲಂಕಾದಲ್ಲಿನ ರಾಜಕೀಯ ನಾಯಕರ ಮೇಲೆ ಪ್ರಭಾವ ಬೀರಲು ಭಾರತದ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಪ್ರಯತ್ನಗಳು ನಡೆದಿವೆ ಎನ್ನುವ ಆಧಾರರಹಿತ ಹೇಳಿಕೆಯಾಗಿದೆ. ಶ್ರೀಲಂಕಾ ಅಧ್ಯಕ್ಷರ ಬಗ್ಗೆ ನಾವು ಸಂಪೂರ್ಣವಾಗಿ ಊಹಾತ್ಮಕ ಮಾಧ್ಯಮ ವರದಿಗಳನ್ನು ನೋಡಿದ್ದೇವೆ. ಈ ಮಾಧ್ಯಮ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ'' ಎಂದಿದೆ.
ಈ ಮಾಧ್ಯಮ ವರದಿ ಸಂಪೂರ್ಣ ಸುಳ್ಳು ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ. ಇದು ಸ್ಪಷ್ಟವಾಗಿ ಯಾರೊಬ್ಬರ ಕಲ್ಪನೆಯಾಗಿದೆ. ಪ್ರಜಾಸತ್ತಾತ್ಮಕ ವಿಧಾನಗಳು ಮತ್ತು ಮೌಲ್ಯಗಳು, ಸ್ಥಾಪಿತ ಸಂಸ್ಥೆಗಳು ಮತ್ತು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ಭಾರತವು ಶ್ರೀಲಂಕಾದ ಜನರ ಆಕಾಂಕ್ಷೆಗಳನ್ನು ಬೆಂಬಲಿಸುತ್ತದೆ ಮತ್ತು ಇತರ ಯಾವುದೇ ದೇಶದ ಆಂತರಿಕ ವ್ಯವಹಾರಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾವು ಹೇಳಲು ಬಯಸುತ್ತೇವೆ.

ಮತ್ತೊಂದೆಡೆ, ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಆಯ್ಕೆಯ ನಂತರ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನಾಕಾರರು ರನಿಲ್ ವಿಕ್ರಮಸಿಂಘೆ ಅವರನ್ನು ವಿರೋಧಿಸುತ್ತಿದ್ದಾರೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ರನಿಲ್ ವಿಕ್ರಮಸಿಂಘೆ, ಡಳಸ್ ಅಳುಗಪೆರುಮ ಮತ್ತು ಎಡಪಂಥೀಯ ಜನತಾ ವಿಮುಕ್ತಿ ಪೆರಮುನ (ಜೆವಿಪಿ) ನಾಯಕ ಅನುರ ಕುಮಾರ ಡಿಸ್ಸನಾಯಕೆ ನಡುವೆ ಪೈಪೋಟಿ ಏರ್ಪಟ್ಟಿತ್ತು.
ಇವರಲ್ಲಿ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಸಂಸತ್ತಿನ ಮತದಾನದಲ್ಲಿ ಅವರು 134 ಮತಗಳನ್ನು ಪಡೆದರು. ಚುನಾವಣೆಯಲ್ಲಿ ಡಳಸ್ ಅಳುಗಪೆರುಮ ಅವರು 82 ಮತಗಳನ್ನು ಪಡೆದರು. 223 ಸದಸ್ಯ ಬಲದ ಸಂಸತ್ತಿನಲ್ಲಿ 4 ಮತಗಳು ರದ್ದಾಗಿದ್ದರೆ 2 ಸಂಸದರು ಮತ ಚಲಾಯಿಸಲಿಲ್ಲ. ಶ್ರೀಲಂಕಾದಲ್ಲಿ 1978 ರಿಂದ ಮೊದಲ ಬಾರಿಗೆ, ಸಂಸದರಿಂದ ರಹಸ್ಯ ಮತದಾನದ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

Fact Check
ಕ್ಲೇಮು
ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪವಿದೆ.
ಪರಿಸಮಾಪ್ತಿ
ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪವಿಲ್ಲ ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.
Rating
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications