Fact check: ಸರಕಾರದಿಂದ ಪ್ರತಿಯೊಬ್ಬರಿಗೂ 30,628 ರೂ ಸಿಗುವುದು ನಿಜವಾ?
ಕೊರೊನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಜನರನ್ನು ದಿಕ್ಕು ತಪ್ಪಿಸುವ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಲು ಪ್ರತಿಯೊಬ್ಬ ನಾಗರಿಕರಿಗೆ 30,638 ರೂ.ಯನ್ನು ಸರ್ಕಾರದಿಂದ ನೀಡಲಾಗುತ್ತಿದೆ ಎನ್ನುವ ಸಂದೇಶವೊಂದು ಜನರನ್ನು ದಾರಿ ತಪ್ಪಿಸುತ್ತಿದೆ. ಈ ಸಂದೇಶವನ್ನು ಹಣಕಾಸು ಸಚಿವಾಲಯದ ಮೂಲಕ ಸರ್ಕಾರ ಹಂಚಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗಿದೆ.

ಈ ಸಂದೇಶವನ್ನು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಫ್ಯಾಕ್ಟ್ ಚೆಕ್ ಮೂಲಕ ತನಿಖೆ ಮಾಡಿದ್ದು ಈ ಸಂದೇಶವನ್ನು 'ನಕಲಿ' ಎಂದು ಕಂಡುಹಿಡಿದಿದೆ. ಜೊತೆಗೆ ಅಂತಹ ತಪ್ಪು ಮಾಹಿತಿಯ ಬಗ್ಗೆ ಎಚ್ಚರವಹಿಸಲು ನಾಗರಿಕರಿಗೆ ತಿಳಿಸಿದೆ. ಪಿಐಬಿ ಫ್ಯಾಕ್ಟ್ ಚೆಕ್ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ 'ಕೂ'ನಲ್ಲಿ ಯಾವುದೇ ಆರ್ಥಿಕ ಸಹಾಯವನ್ನು ಹಣಕಾಸು ಸಚಿವಾಲಯ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
Koo AppA message with a link ’https://t.co/sn2GmrJgW9’ is doing the rounds on social media and is claiming to offer a financial aid of ₹30,628 in the name of the Ministry of Finance to every citizen. #PIBFactCheck ▶️ This message is FAKE ▶️ No such aid is announced by the Ministry of Finance 🔗https://t.co/DkbssCM7Ic - PIB Fact Check (@PIBFactCheck) 24 May 2022

ಇದರ ಬೆನ್ನಲ್ಲೇ ಮತ್ತೊಂದು ತಪ್ಪು ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂದೇಶದ ಪ್ರಕಾರ ದೇಶದಲ್ಲಿನ ನಿರುದ್ಯೋಗಿ ಯುವಕರಿಗೆ 3500ರೂ ಮಾಸಿಕ ಭತ್ಯೆಯನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ ಎನ್ನಲಾಗಿದೆ. ಪಿಐಬಿ ಫ್ಯಾಕ್ಟ್ ಚೆಕ್ ಈ ಸಂದೇಶವನ್ನು ನಕಲಿ ಎಂದು ಘೋಷಿಸಿದೆ. ಜೊತೆಗೆ ಇಂತಹ ನಕಲಿ ಸಂದೇಶಗಳನ್ನು ನಂಬದಿರಲು ವಿನಂತಿಸಿದೆ.
Koo Appएक वायरल #Whatsapp मैसेज में दावा किया जा रहा कि भारत सरकार प्रधानमंत्री बेरोजगारी भत्ता योजना के तहत बेरोजगार युवाओं को हर महीने ₹3500 का भत्ता दे रही है #PIBFactCheck ▶️ यह मैसेज फर्जी है ▶️ भारत सरकार ऐसी कोई योजना नहीं चला रही ▶️ कृपया ऐसे मैसेज फॉरवर्ड ना करें 🔗https://t.co/zwQos4W74J - PIB Fact Check (@PIBFactCheck) 23 May 2022

Fact Check
ಕ್ಲೇಮು
ಸರ್ಕಾರದಿಂದ ಪ್ರತಿಯೊಬ್ಬರಿಗೂ 30,638 ರೂ. ಮತ್ತು ನಿರುದ್ಯೋಗಿ ಯುವಕರಿಗೆ 3500ರೂ ಮಾಸಿಕ ಭತ್ಯೆ ನೀಡಲಾಗುತ್ತದೆ.
ಪರಿಸಮಾಪ್ತಿ
ಸರ್ಕಾರದಿಂದ ಪ್ರತಿಯೊಬ್ಬರಿಗೂ 30,638 ರೂ. ಮತ್ತು ನಿರುದ್ಯೋಗಿ ಯುವಕರಿಗೆ 3500ರೂ ಮಾಸಿಕ ಭತ್ಯೆ ನೀಡಲಾಗುತ್ತದೆ ಎನ್ನುವ ಸಂದೇಶ ನಕಲಿ ಎಂದು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಕಂಡುಹಿಡಿದಿದೆ.
Rating
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications